ತ್ಯಾಜ್ಯ ವಿಲೇವಾರಿಗೆ ಒಪ್ಪದ ಗ್ರಾಮಸ್ಥರು


Team Udayavani, Nov 18, 2020, 4:31 PM IST

hasan-tdy-2

ಸಕಲೇಶಪುರ: ತಾಲೂಕಿನ ಮಳಲಿ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪಟ್ಟಣದ ಕಸ ವಿಲೇವಾರಿ ಮಾಡುವ ಕುರಿತು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಪುರಸಭೆ ಹಾಗೂ ಗ್ರಾಮಸ್ಥರ ನಡುವೆ ನಡೆದ ಪೂರ್ವಭಾವಿ ಸಭೆ ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಫ‌ಲವಾಯಿತು.

ತಾಲೂಕಿನ ಮಳಲಿ ಗ್ರಾಮದಲ್ಲಿನ ಘನ ತ್ಯಾಜ್ಯವಿಲೇವಾರಿಘಟಕದಲ್ಲಿಕಸವಿಲೇವಾರಿ ಮಾಡುವ ನಿಟ್ಟಿನಲ್ಲಿ ಐದು ತಿಂಗಳ ಹಿಂದೆ ಪುರಸಭೆಯವರು ಕಸ ತೆಗೆದುಕೊಂಡು ಹೋದಾಗ ಗ್ರಾಮಸ್ಥರು ತೀವ್ರ ವಿರೋಧವ್ಯಕ್ತಪಡಿಸಿದ್ದರು. ಈ ವೇಳೆ ಕಸ ವಿಲೇವಾರಿಘಟಕದಲ್ಲಿ ವೈಜ್ಞಾನಿಕ ಯಂತ್ರೋಪಕರಣ ಅಳವಡಿಸಲಾಗುವುದು ಎಂದು ಎಸಿ ಗಿರೀಶ್‌ನಂದನ್‌ ಗ್ರಾಮಸ್ಥರಿಗೆ ತಿಳಿಸಿದ್ದರು.

ಅದರಂತೆ ಪುರಸಭೆಯವರು 2 ಕೋಟಿ ರೂ.ವೆಚ್ಚದಲ್ಲಿವೈಜ್ಞಾನಿಕವಾಗಿಕಸವಿಲೇವಾರಿ ಮಾಡಲು ಟೆಂಡರ್‌ ಕರೆದಿದ್ದು, ಇದೀಗ ಟೆಂಡರ್‌ ಪ್ರಕ್ರಿಯೆ ಮುಗಿದು, ಕಾಮಗಾರಿ ಆರಂಭಿಸಬೇಕಿದೆ. ಈ ಬಗ್ಗೆ ಚರ್ಚೆ ನಡೆಸಲುಪುರಸಭೆ ಹಾಗೂ ಗ್ರಾಮಸ್ಥರ ಪೂರ್ವಭಾವಿ ಸಭೆ ಮಂಗಳವಾರಕರೆಯಾಗಿತ್ತು. ಸಭೆಯಲ್ಲಿಹಾಜರಿದ್ದ ಗ್ರಾಮಸ್ಥರು, ಗ್ರಾಮದಲ್ಲಿ ಬಹುತೇಕವಾಗಿ ಬಡ ದಲಿತರು ಹಲವಾರು ವರ್ಷಗಳಿಂದ ವಾಸವಾಗಿದ್ದಾರೆ. ಉದ್ದೇಶಪೂರ್ವಕ ವಾಗಿಯೇ ಗ್ರಾಮದಲ್ಲಿ ಘನತ್ಯಾಜ್ಯವಿಲೇವಾರಿ ಘಟಕ ಮಾಡಲಾಗಿದೆ ಎಂದು ಆರೋಪಿಸಿದರು.

ಪುರಸಭೆಯ ಕೆಲವು ಅಧಿಕಾರಿಗಳು ಇಲ್ಲಿ ಯಾರು ವಾಸವಾಗಿಲ್ಲ ಎಂದು ಸುಳ್ಳು ವರದಿ ನೀಡಿದ್ದರಿಂದ, ನಾವು ತೊಂದರೆ ಅನುಭವಿಸ ಬೇಕಾಗಿದೆ. ಇಲ್ಲಿಯವರೆಗೆ ಘನತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಹೋರಾಟ ಮಾಡಿ ಕೊಂಡುಬಂದಿದ್ದೇವೆ.ಯಾವುದೇಕಾರಣಕ್ಕೂ ನಾವು ಇಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಮಾಡಲು ಬಿಡುವುದಿಲ್ಲ, ಮಾಡುವುದಾದರೆ ಇಲ್ಲಿ ಪ್ರಭಾವಿಯೋರ್ವರು ಒತ್ತುವರಿ ಮಾಡಿರುವ ಜಾಗವನ್ನು ತೆರವುಗೊಳಿಸಿ ಅಲ್ಲಿ ಘಟಕ ಮಾಡಲಿ ಎಂದು ಹೇಳಿದರು.

ಘಟಕ ಸ್ಥಳಾಂತರಿಸಿ: ಬಡವರಿಗೊಂದು ಶ್ರೀಮಂತರಿಗೊಂದು ನ್ಯಾಯ ಬೇಡ, ಕಸ ವಿಲೇವಾರಿ ಘಟಕಕ್ಕಾಗಿ 11 ಎಕರೆ ಜಾಗ ಬಫ‌ರ್‌ ಜೋನ್‌ ಎಂದು ಘೋಷಣೆ ಮಾಡಲಾಗಿದೆ. ಇದರಲ್ಲಿ8 ಎಕರೆ ಜಾಗದಲ್ಲಿ ಗ್ರಾಮ ಸ್ಥರು ವಾಸವಾಗಿದ್ದಾರೆ. ಬಫ‌ರ್‌ ಜೋನ್‌ ಘೋಷಣೆಯಿಂದ ತೊಂದರೆ ಆಗಿದೆ. ಕೂಡಲೆ, ಮಾನವೀಯತೆ ದೃಷ್ಟಿಯಿಂದ ಇಲ್ಲಿನ ಘನತ್ಯಾಜ್ಯ ಘಟಕವನ್ನು ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌.ಕೆ ಕುಮಾರಸ್ವಾಮಿ ಮಾತನಾಡಿ, ಕಳೆದ12 ವರ್ಷಗಳಿಂದ ಗ್ರಾಮಸ್ಥರ ಹಿತಕ್ಕಾಗಿ ನಾನು ಗ್ರಾಮದಲ್ಲಿಕಸವಿಲೇವಾರಿ ಮಾಡಲುಅವಕಾಶ ನೀಡಿಲ್ಲ. ನಾನು ಕೇವಲ ಮಳಲಿ ಗ್ರಾಮಕ್ಕೆ ಮಾತ್ರ ಶಾಸಕನಲ್ಲ, ಪುರಸಭೆ ಸೇರಿದಂತೆ ಕ್ಷೇತ್ರದ ಜನರ ಹಿತಕಾಯಬೇಕಾಗಿದೆ.ಘನ ತ್ಯಾಜ್ಯ ವಿಲೇವಾರಿಘಟಕ ನಿರ್ಮಾಣವಾಗುವ ಸಮಯದಲ್ಲೆ ಗ್ರಾಮಸ್ಥರು ಸರಿಯಾಗಿ ವಿರೋಧ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಆತಂಕ ಪಡುವುದು ಬೇಡ: ಇದೀಗ ನ್ಯಾಯಾಲಯದ ಆದೇಶವನ್ನು ನಾವೆಲ್ಲ ಪರಿ ಪಾಲನೆ ಮಾಡಬೇಕಾಗಿರುವುದಿರಂದ ಗ್ರಾಮ ಸ್ಥರು ಗ್ರಾಮದ ತ್ಯಾಜ್ಯವಿಲೇವಾರಿಘಟಕದಲ್ಲಿ ಕಸ ವಿಲೇವಾರಿ ಮಾಡಲು ಅವಕಾಶ ನೀಡ ಬೇಕು. ಈಗಾಗಲೇ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು2 ಕೋಟಿ ರೂ. ವೆಚ್ಚದ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಗ್ರಾಮಸ್ಥರು ಈ ಕುರಿತು ಯಾವುದೇ ಆತಂಕ ಪಡುವುದು ಬೇಡ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌ ಮಾತನಾಡಿ, ಈ ಹಿಂದೆ ಕಸವನ್ನು ಟಿಪ್ಪರ್‌ ಗಳಲ್ಲಿ ತಂದು ಸುರಿಯಲು ಬಂದಾಗ ಗ್ರಾಮಸ್ಥರು ವೈಜ್ಞಾನಿಕವಾಗಿ ಕಸ ಸುರಿಯಲಿ ಎಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ವೈಜ್ಞಾನಿಕ ವಾಗಿ ಕಸ ವಿಲೇವಾರಿ ಮಾಡಲು ಟೆಂಡರ್‌ ಕರೆಯಲಾಗಿದೆ. ಇದೀಗಕಾಮಗಾರಿ ಆರಂಭಿಸಬೇಕಾಗಿದೆ. ನ್ಯಾಯಾಲಯದ ಆಜ್ಞೆಯನ್ನು ನಾವು ಪಾಲನೆ ಮಾಡಬೇಕಾಗಿದೆ. ಇದೀಗ ಗ್ರಾಮಸ್ಥರು ಕಸ ಹಾಕಲು ಬಿಡುವುದಿಲ್ಲ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅಂತಿಮವಾಗಿ ಸಭೆಯಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರು ಒಪ್ಪದ ಹಿನ್ನೆಲೆಯಲ್ಲಿ ಸಭೆಯನ್ನು ಮೊಟಕುಗೊಳಿಸಲಾಯಿತು.ಸಭೆಯಲ್ಲಿ ತಹಶೀಲ್ದಾರ್‌ ಮಂಜುನಾಥ್‌, ಪುರಸಭಾಮುಖ್ಯಾಧಿಕಾರಿ ಸ್ಟೀಫ‌ನ್‌ಪ್ರಕಾಶ್‌, ಪುರಸಭಾ ಅಧ್ಯಕ್ಷ ಕಾಡಪ್ಪ, ಉಪಾಧ್ಯಕ್ಷ ಜರೀನಾ, ಗ್ರಾಮಸ್ಥರಾದ ಶಿವಣ್ಣ, ಶಾಂತ ಕುಮಾರ್‌, ವೇಣು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.