ಸಾಮಾಜಿಕ ಜಾಲತಾಣದಲ್ಲಿ ಮತದಾನ ಬಹಿಷ್ಕಾರ ಆಂದೋಲನ


Team Udayavani, Mar 18, 2019, 7:15 AM IST

jaalatana.jpg

ಚನ್ನರಾಯಪಟ್ಟಣ: ತಾಲೂಕಿನನುಗ್ಗೆಹಳ್ಳಿ,ಹಿರೀಸಾವೆ ದಂಡಿಗನಹಳ್ಳಿ ಹೋಬಳಿ ಹಲವು ಮಂದಿ ಯುವಕರು ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಮಾಡುವುದಾಗಿ ಸಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿರುವ ತಾಲೂಕಿನ ದಂಡಿಗನಹಳ್ಳಿ ಹೋಬಳಿಯಲ್ಲಿ ಕಾಚೇನಹಳ್ಳಿ ಏತನೀರಾವರಿ ರಾಜಕೀಯ ಮೇಲಾಟಕ್ಕೆ ಬಲಿಯಾಗಿದೆ. ಮೂರು ದಶಕದಿಂದ ಕಾಮಗಾರಿ ಮುಕ್ತಾಯವಾಗಿಲ್ಲ. ಆಲಗೊಂಡನಹಳ್ಳಿ ಹಾಗೂ ನಾರಾಯಣಪುರ ಏತನೀರಾವರಿ ಕಾಮಗಾರಿ ಮುಕ್ತಾಯವಾಗಿದ್ದರೂ ಕ್ಷೇತ್ರ ಶಾಸಕರು, ಸಂಸದರು ಉದ್ಘಾಟಿಸುವ ಗೋಜಿಗೆ ಹೋಗಿಲ್ಲವೆಂದು ಆಕ್ರೋಶ ವ್ಯಕ್ತವಾಗುತ್ತಿದೆ. 

ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನುಗ್ಗೇಹಳ್ಳಿ ಹಾಗೂ ಹಿರೀಸಾವೆಯಲ್ಲಿ ನೀರಿನ ಸಮಸ್ಯೆಯಿದ್ದರೂ ಎರಡೂ ಹೋಬಳಿಯ ಏತನೀರಾವರಿ ಕಾಮಗಾರಿ ದಶಕದಿಂದ ಆಮೆ ವೇಗದಲ್ಲಿ ನಡೆಯುತ್ತಿವೆ. 

ಏತ ನೀರಾವರಿ ವಿಳಂಬ: ಸುಮಾರು 57 ಕೋಟಿ ರೂ. ವೆಚ್ಚದಲ್ಲಿ ಜನಿವಾರ ಕೆರೆಯಿಂದ ಹಿರೀಸಾವೆ-ಜುಟ್ಟನಹಳ್ಳಿ ಭಾಗದ 26 ಕೆರೆಗಳಿಗೆ ನೀರು ತುಂಬಿಸುವ ಏತನೀರಾವರಿ ಯೋಜನೆ ಕಾಮಗಾರಿ ಪ್ರಾರಂಭವಾಗಿ ಮಂದಗತಿಯಲ್ಲಿ ಸಾಗುತ್ತಿದೆ. 

ಹಿರೀಸಾವೆ ಹೋಬಳಿ ದಿಡಗ ಹಾಗೂ ಕಬ್ಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿಯೂ ಏತನೀವಾರಿ ಯೋಜನೆ ಕಾಮಗಾರಿ ಕುಂಟಿತವಾಗಿರುವ ಬಗ್ಗೆ ಕರಪತ್ರಗಳು ಮಾಡಿ ಹಂಚಲಾಗಿರುವುದಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಕರಪತ್ರಗಳನ್ನು ಪೋಸ್ಟ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತವಾಗುತ್ತಿದೆ. 

ಕಾಮಗಾಗಿ ನೆನಗುದಿಗೆ: ಬಾಗೂರು ಸಮೀಪದಲ್ಲಿ ಹರಿಯುತ್ತಿರುವ ಹೇಮಾವತಿ ನಾಲೆಯಿಂದ ನುಗ್ಗೇಹಳ್ಳಿ ಹೋಬಳಿ 11 ಕೆರೆಗೆ ಪೈಪ್‌ ಮೂಲಕ ನೀರು ತುಂಬಿಸಲು 17.67 ಕೋಟಿ ರೂ. ವೆಚ್ಚದಲ್ಲಿ ಏತನೀರಾವರಿ ಯೋಜನೆ ಕಾಮಗಾರಿ ಪ್ರಾರಂಭವಾಗಿ ದಶಕಗಳು ಕಳೆದಿದ್ದು ಕಾಮಗಾರಿ ನೆನಗುದಿಗೆ ಬಿದ್ದಿದೆ. ಅಂತರ್ಜಲ ಕುಸಿದಿದ್ದು ತೆಂಗಿನ ತೋಟಕ್ಕೆ ನೀರಿಲ್ಲದೆ ಮರಗಳ ಸುಳಿ ನಾಶವಾಗುತ್ತಿವೆ. 

ಫೇಸ್‌ ಬುಕ್‌ ಪೇಜ್‌: ನುಗ್ಗೆಹಳ್ಳಿ ಏತನೀರಾವರಿ ಹೋರಾಟ ಸಮಿತಿ ಎಂಬ ಫೇಸ್‌ ಬುಕ್‌ ಪೇಜ್‌ ತೆರೆದಿದ್ದು ನುಗ್ಗೆಹಳ್ಳಿ ಹೋಬಳಿ ಜನತೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಕೃಷಿ ಚಟುವಟಿಕೆ ಕುಂಠಿತವಾಗಲು ಕಾರಣವೇನು ಎನ್ನುವ ಸಮಗ್ರ ಮಾಹಿತಿ ಇದರಲ್ಲಿ ಹಾಕಲಾಗಿದೆ. ಈ ಬಾರಿ ಚುನಾವಣೆ ಬಹಿಷ್ಕರಿಸಿ ರಾಜಕಾರಣಿಗಳಿಗೆ ತಕ್ಕ ಉತ್ತರ ನೀಡಲು ಯುವ ಜನತೆ ಆಂದೋಲನ ಆರಂಭಿಸಿದ್ದಾರೆ.

ಹಿರೀಸಾವೆ-ಜುಟ್ಟನಹಳಿ ಏತನೀರಾವರಿ ಯೋಜನೆ ಕಾಮಗಾರಿ ಶೇ.80 ರಷ್ಟು ಮುಕ್ತಾಯವಾಗಿದೆ. ನುಗ್ಗೆಹಳ್ಳಿ ಏತನೀವಾರಿ ಯೋಜನೆ ಪೈಪ್‌ ಲೈನ್‌ ಅಳವಡಿಸಲು ಕೆಲ ರೈತರು ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿ ಕಾಮಗಾರಿ ಸ್ಥಗಿತವಾಗಿದೆ. ಚುನಾವಣೆ ಬಹಿಷ್ಕಾರ ಮಾಡುವುದರಿಂದ ಕಾಮಗಾರಿ ಚುರುಕಾಗುವುದಿಲ್ಲ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುವುದು. 
-ಎಂ.ಎ.ಗೋಪಾಲಸ್ವಾಮಿ, ನೀರಾವರಿ ಇಲಾಖೆ ಸಂಸದೀಯ ಕಾರ್ಯದರ್ಶಿ.

* ಶಾಮಸುಂದರ್‌ ಕೆ. ಅಣ್ಣೇನಹಳ್ಳಿ 

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.