ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Team Udayavani, Aug 8, 2022, 9:32 AM IST
ಸಕಲೇಶಪುರ: ತಾಲೂಕಿನಲ್ಲಿಒಂದೆಡೆ ಸುರಿಯುತ್ತಿರುವ ಮಳೆಯಾದರೆ, ಮತ್ತೊಂದೆಡೆ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಯಿಂದ ಅಮಾಯಕ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಸುಳ್ಳಕ್ಕಿ ಸಮೀಪ ನಡೆದಿದೆ.
ಮಂಜುನಾಥ್ ಆಲಿಯಾಸ್ ಕೆಂಪಣ್ಣ (53) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ.
ತಾಲೂಕಿನ ಸುಳ್ಳಕ್ಕಿ ಸಮೀಪದ ಮೇಲಕೆರೆಯಲ್ಲಿ ಮಂಜುನಾಥ್ ಬೆಳಗ್ಗೆ ಗದ್ದೆ ಕೆಲಸಕ್ಕೆ ಗದ್ದೆಗೆ ಹೋಗುವಾಗ ಏಕಾಏಕಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಆತ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಕಾಡಾನೆಗಳು ಮನುಷ್ಯರನ್ನು ಬಲಿ ಪಡೆಯುತ್ತಿದ್ದು ಕಳೆದ 2 ದಿನಗಳ ಹಿಂದಷ್ಟೆ ಹೆತ್ತೂರು ಹೋಬಳಿ ಕಲ್ಲುತೋಟದಲ್ಲಿ ರಾಮಕೃಷ್ಣ ಎಂಬವರನ್ನು ಕಾಡಾನೆಯೊಂದು ತುಳಿದು ಹಾಕಿತ್ತು. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ತಿಂಗಳ ಅಂತರದಲ್ಲಿ ಕಾಡಾನೆಗಳಿಗೆ ಇದು ಮೂರನೇ ಬಲಿಯಾಗಿದ್ದು, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಕಾಡಾನೆಗಳಿಂದಾಗಿ ನಿತ್ಯವೂ ಭಯದ ವಾತಾವಣದಲ್ಲಿ ಜೀವನ ನಡೆಸುವ ಪರಿಸ್ಥಿತಿ ಮಲೆನಾಡಿನಲ್ಲಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ