ಕಾಡಾನೆ ಸಮಸ್ಯೆ: ಒತ್ತಡದಲ್ಲಿ ಅರಣ್ಯ ಸಿಬ್ಬಂದಿ


Team Udayavani, May 2, 2019, 3:00 AM IST

kaadane

ಸಕಲೇಶಪುರ: ತಾಲೂಕಿನಲ್ಲಿ ಕಾಡಾನೆ ಸಮಸ್ಯೆ ಮಿತಿ ಮೀರಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಬೇಕಾಗಿದ್ದ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ನಿದ್ರಿಸುತ್ತಿದ್ದು ಇದರಿಂದ ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗಳು ನಿದ್ರೆಯಿಲ್ಲದೆ ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಕಾಡಾನೆ ಸಮಸ್ಯೆ ಕಳೆದ ಒಂದು ದಶಕದಲ್ಲಿ ಮಿತಿ ಮೀರಿದ್ದು ಆಲೂರು ಹಾಗೂ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಸುಮಾರು 60ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಹಲವಾರು ಮಂದಿ ಕಾಡಾನೆ ದಾಳಿಯಿಂದ ಮಾರಣಾಂತಿಕ ಗಾಯಗೊಂಡಿದ್ದಾರೆ.

ಕಾಡಾನೆ ಹಾವಳಿಯಿಂದ ಕೋಟ್ಯಂತರ ಮೌಲ್ಯದ ಬೆಳೆ ನಾಶವಾಗಿದ್ದರೂ, ಅರಣ್ಯ ಇಲಾಖೆಯವರು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಾಶ್ವತ ಪರಿಹಾರ ಹುಡುಕಲು ಮುಂದಾಗದ ಕಾರಣ ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮಸ್ಥರ ಕೆಂಗಣ್ಣಿಗೆ ಗುರಿ: ತಾಲೂಕಿನಲ್ಲಿ ದಿನನಿತ್ಯ ಒಂದಲ್ಲ ಒಂದು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿದ್ದು ಇದನ್ನು ಓಡಿಸಲು ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗಳ ಜೀವಭಯ ಬಿಟ್ಟು ಕಾರ್ಯಾಚರಣೆ ನಡೆಸಬೇಕಾಗಿದೆ.

ಕಾಡಾನೆಗಳನ್ನು ಒಂದು ಗ್ರಾಮದಿಂದ ಓಡಿಸಿದರೆ ಸುತ್ತು ಹಾಕಿ ಪಕ್ಕದ ಗ್ರಾಮಕ್ಕೆ ಹೋಗುತ್ತಿದ್ದು, ಇದೇ ರೀತಿ ಸುತ್ತು ಹಾಕಿ ದಾಂದಲೇ ನಡೆಸುತ್ತಿದೆ. ಕೆಳಹಂತದ ಅರಣ್ಯ ಸಿಬ್ಬಂದಿಗಳು ಗ್ರಾಮಸ್ಥರು ದೂರವಾಣಿ ಕರೆ ಮಾಡಿದ ತಕ್ಷಣ ಕಾಡಾನೆ ಇರುವ ಪ್ರದೇಶಕ್ಕೆ ಹೋಗಬೇಕಾಗಿದ್ದು, ಇಲ್ಲದಿದ್ದಲ್ಲಿ ಗ್ರಾಮಸ್ಥರು ಕೆಂಗಣ್ಣಿಗೆ ಗುರಿಯಾಗಬೇಕಾಗಿದೆ.

ಸೂಕ್ತ ರಕ್ಷಣೆಯಿಲ್ಲ: ಕಾಡಾನೆ ಪೀಡಿತ ಪ್ರದೇಶಗಳಲ್ಲಿ ನಡೆಯುವ ಸುಗ್ಗಿ, ದೇವರ ಉತ್ಸವ, ಚುನಾವಣೆ ಮುಂತಾದ ಕಾರ್ಯಕ್ರಮಗಳಿಗು ಸಹ ಅರಣ್ಯ ಇಲಾಖೆ ಸಿಬ್ಬಂದಿಗಳು ಹೋಗಿ ರಕ್ಷಣೆ ನೀಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಕಾಡಾನೆಗಳಿಂದ ರಕ್ಷಣೆ ಇಲ್ಲ ಆದರೂ ಸಹ ನಾಗರಿಕರ ರಕ್ಷಣೆಗಾಗಿ ಹೋಗಬೇಕಾದ ಅನಿವಾರ್ಯತೆಯಿಂದ ಕೆಳಹಂತದ ಸಿಬ್ಬಂದಿಗಳು ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ತಾಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕಾಡಾನೆಯೊಂದು ಅರಣ್ಯ ಇಲಾಖೆ ನೌಕರ ಲೋಕೇಶ್‌ ಎಂಬುವರ ಮೇಲೆ ದಾಳಿ ನಡೆಸಿದ್ದು ಅದೃಷ್ಟವಷಾತ್‌ ಅವರು ಜೀವಪಾಯದಿಂದ ಪಾರಾಗಿದ್ದಾರೆ.

ಆದರೆ, ಅವರ ಬೈಕ್‌ ಸಂಪೂರ್ಣವಾಗಿ ಕಾಡಾನೆ ದಾಳಿಯಿಂದ ಜಖಂಗೊಂಡಿದೆ. ಇದೇ ವೇಳೆ ಉದ್ರಿಕ್ತಗೊಂಡ ಕೆಲವು ಗ್ರಾಮಸ್ಥರು ವಿನಾಕಾರಣ ಲೋಕೇಶ್‌ರವರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ರೀತಿಯ ಘಟನೆಗಳು ಆಗಿಂದಾಗ್ಗೆ ನಡೆಯುತ್ತಿದ್ದರೂ, ಈ ಬಗ್ಗೆ ಹಿರಿಯ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ.

ಮೇಲಧಿಕಾರಿಗಳ ವೈಫ‌ಲ್ಯ: ಕಾಡಾನೆ ಬಂದಿದೆ ಎಂದರೆ ಉನ್ನತ ಅಧಿಕಾರಿಗಳು ಆರಾಮವಾಗಿ ಮನೆಯಲ್ಲಿ ನಿದ್ರಿಸುತ್ತಿದ್ದರೆ ರಾತ್ರೋ ರಾತ್ರೀ ಕೆಳಹಂತದ ಸಿಬ್ಬಂದಿಗಳು ಹೆಂಡತಿ ಮಕ್ಕಳನ್ನು ಬಿಟ್ಟು ಕಾರ್ಯಾಚರಣೆಗೆ ಹೋಗಬೇಕಾಗಿದೆ. ಅಪರೂಪಕ್ಕೊಮ್ಮೆ ತಾಲೂಕಿಗೆ ಆಗಮಿಸುವ ಜನಪ್ರತಿನಿಧಿಗಳು, ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಇಲ್ಲಿಯವರೆಗೂ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ವಿಫ‌ಲರಾಗಿದ್ದಾರೆ.

ಕಾಡಾನೆ ಕಾಲ್‌ ಸೆಂಟರ್‌, ಬೆರಳೆಣಿಕೆಯಷ್ಟು ಕಾಡಾನೆಗಳ ಸ್ಥಳಾಂತರ, ಕಾಡಾನೆಗಳಿಗೆ ರೇಡಿಯೋ ಕಾಲರ್‌ಗಳನ್ನು ಅಳವಡಿಸುವಂತಹ ಕೆಲಸಗಳನ್ನು ಅರಣ್ಯ ಇಲಾಖೆ ಮಾಡಿದ್ದರೂ, ಪ್ರಯೋಜನವಾಗಿಲ್ಲ. ಸಮಸ್ಯೆ ಮಿತಿ ಮೀರಿ ಹೋಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಆನೆ ಕಾರಿಡಾರ್‌ ಮತ್ತು ಆನೆ ಧಾಮವನ್ನು ಮಾಡಿದಲ್ಲಿ ಮಾತ್ರ ಕಾಡಾನೆ ಸಮಸ್ಯೆಗೆ ತಾರ್ಕಿಕ ಅಂತ್ಯವನ್ನು ಕಂಡುಕೊಳ್ಳುವುದು ಸಾಧ್ಯವಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಬೇಕು. ಅರಣ್ಯ ಇಲಾಖೆಯ ಕೆಳ ಹಂತದ ಸಿಬ್ಬಂದಿ ವಿನಾಕಾರಣ ಸಾರ್ವಜನಿಕರ ಆಕ್ರೋಷಕ್ಕೆ ತುತ್ತಾಗುತ್ತಿದ್ದಾರೆ.
-ಬ್ಯಾಕರವಳ್ಳಿ ಜಯಣ್ಣ, ಸಮಾಜ ಸೇವಕರು

ಸಕಲೇಶಪುರ, ಆಲೂರು. ಯಸಳೂರು ವಲಯದಲ್ಲಿ ಕಾಡಾನೆ ಕಾರ್ಯಾಚರಣೆಗಾಗಿ ಸುಮಾರು 150 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಯಾರಾದರೂ ವಿನಾಕಾರಣ ಸಿಬ್ಬಂದಿಗಳ ಮೇಲೆ ದಬ್ಟಾಳಿಕೆ ಮಾಡುವುದನ್ನು ಕಂಡು ಬಂದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
-ಲಿಂಗರಾಜು, ಉಪವಲಯ ಅರಣ್ಯಾಧಿಕಾರಿ

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.