ಸ್ಥಳೀಯ ಶಾಸಕರ ನಿರ್ಲಕ್ಷ್ಯದಿಂದ ಕಾಡಾನೆ ಹಾವಳಿ ಹೆಚ್ಚಳ: ಕಾಂಗ್ರೆಸ್
Team Udayavani, May 17, 2022, 4:13 PM IST
ಹಾಸನ: ಆಲೂರು-ಸಕಲೇಶಪುರ ತಾಲೂಕುಗಳಲ್ಲಿ ಕಾಡಾನೆಗಳ ಸಮಸ್ಯೆ ಹೆಚ್ಚಾಗಲು ಸ್ಥಳೀಯ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರ ನಿರ್ಲಕ್ಷ್ಯವೇ ಕಾರಣ ಎಂದು ಕೆಪಿಸಿಸಿ ಮಹಿಳಾಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದ್ದು, ಸಾವು-ನೋವುಗಳೂ ಗಣನೀಯವಾಗಿ ಹೆಚ್ಚಾಗಿವೆ. 14 ವರ್ಷಗಳಿಂದ ಕುಂಭಕರ್ಣನಂತೆ ಮಲಗಿದ್ದ ಸಕಲೇಶಪುರ ಕ್ಷೇತ್ರದ ಶಾಸಕರು, ಚುನಾವಣೆಗೆ ಇನ್ನೊಂದು ವರ್ಷವಿರುವಾಗ ಗಾಢ ನಿದ್ದೆ ಯಿಂದೆದ್ದು ಕಾಡಾನೆ ಸಮಸ್ಯೆ ಬಗೆಹರಿಸಲು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಶಾಸಕರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸುವ ಬದಲು ಕ್ಷೇತ್ರದಲ್ಲೇ ಜನರೊಂದಿಗೆ ಪ್ರತಿಭಟನೆ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದ. ಹೋರಾಟದ ಮೂಲಕ ತಾತ್ಕಾಲಿಕವಾಗಿ ಜನರ ಕಣ್ಣೊರೆಸುವ ಪ್ರಯತ್ನ ಮಾಡುವ ಬದಲು ನಿಜವಾದ ಕಾಳಜಿ ಇದ್ದರೆವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿ, ಕಾಡಾನೆಗಳಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಿ ಎಂದು ಹೇಳಿದರು.
ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಜೆಡಿಎಸ್ ಪಕ್ಷದವರಾಗಿದ್ದರೂಸಕಲೇಶಪುರ ತಾಲೂಕಿನ ಜ್ವಲಂತ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಅವರಿಗೆ ಇಚ್ಛಾಶಕ್ತಿ ಇದ್ದಿದ್ದರೆ ರಾಜ್ಯದಲ್ಲಿಸಮ್ಮಿಶ್ರ ಸರ್ಕಾರ ಇದ್ದಾಗಲೇ ಕಾಡಾನೆ ಸಮಸ್ಯೆಗೆ ಶಾಶ್ವತಪರಿಹಾರ ಕಲ್ಪಿಸಬಹುದಿತ್ತು. ಆದರೆ, ಆಗ ತಾಳಿದ ನಿರ್ಲಕ್ಷ್ಯದಿಂದಾಗಿ ಕಾಡಾನೆಗಳ ಹಾವಳಿ ಹೆಚ್ಚುತ್ತ ಬಂದಿದೆ ಎಂದರು.
ಜನಪ್ರತಿನಿಧಿಗಳಷ್ಟೇ ಅಲ್ಲ, ಸಕಲೇಶಪುರ ಕ್ಷೇತ್ರವನ್ನು ಜಿಲ್ಲಾಡಳಿತ ಕೂಡ ನಿರ್ಲಕ್ಷಿಸಿದೆ. ಕಾಡಾನೆ ದಾಳಿಯಾದಾಗ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವುದಿಲ್ಲ. ಉಸ್ತುವಾರಿ ಸಚಿವರು ನಾಮ್ ಕೇವಾಸ್ತೆಗೆ ಭೇಟಿ, ಸುಳ್ಳು ಭರವಸೆ ನೀಡಿ ಹೋಗುತ್ತಿದ್ದಾರೆ ಹೊರತು, ಇದುವರೆಗೂ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಕೆಪಿಸಿಸಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಸುಜಾತಾ, ಪಕ್ಷದ ಮುಖಂಡರಾದ ವಿಜಯಕುಮಾರ್, ವಿನೋದ್ ಕುಮಾರ್, ಮುಬೀನಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ