ಬೇಟೆನಾಯಿಗಳಿಂದ ವನ್ಯಜೀವಿಗಳಿಗೆ ಆಪತ್ತು


Team Udayavani, Apr 29, 2019, 3:00 AM IST

betenayi

ಸಕಲೇಶಪುರ: ತಾಲೂಕಿನಲ್ಲಿ ಬೇಟೆಗಾರರ ಹಾವಳಿ ನಿಯಂತ್ರಕ್ಕೆ ಬಂದರೂ ಬೇಟೆನಾಯಿಗಳು ಹಾಗೂ ನಾಯಿಗಳ ಹಾವಳಿ ನಿಲ್ಲದಾಗಿದೆ.

ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ತಾಲೂಕಿನಲ್ಲಿ ಬೇಟೆಗಾರರ ಹಾವಳಿ ಕಡಿಮೆಯಾಗಿದ್ದರಿಂದ ಕಾಫಿ ತೋಟಗಳಲ್ಲಿ ಕಾಟಿ, ಜಿಂಕೆ, ನವಿಲು, ಕಾಡುಕುರಿ, ಕಾಡುಬೆಕ್ಕುಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

ಆದರೆ ತಾಲೂಕಿನಲ್ಲಿ ಬೇಟೆಗಾರಿಕೆ ನಿಯಂತ್ರಣಕ್ಕೆ ಬಂದಿದ್ದರೂ ಬೇಟೆಗೆ ಕರೆದೊಯ್ಯುತ್ತಿದ್ದ ಬೇಟೆನಾಯಿಗಳಿಗೆ ಮಾತ್ರ ಬೇಟೆಯ ರುಚಿ ಮರೆಯದಾಗಿದೆ. ಬೇಟೆ ನಾಯಿಗಳ ಜೊತೆಗೆ ಇತರೆ ಬೀದಿನಾಯಿಗಳು ಸಹ ಕಾಡುಪ್ರಾಣಿಗಳ ಮೇಲೆ ದಾಂಧಲೆ ನಡೆಸುತ್ತಿದ್ದು ಕೆಲವೊಂದು ಪ್ರಾಣಿಗಳಿಗೆ ಇದರಿಂದ ರಕ್ಷಣೆ ಇಲ್ಲದಂತಾಗಿದೆ.

ಬೀದಿ ನಾಯಿಗಳ ಹಾವಳಿ: ಪಟ್ಟಣ ವ್ಯಾಪ್ತಿಯಲ್ಲಿ ಕೆಲವು ಹೋರಾಟಗಾರರ ಕಿರುಕುಳದಿಂದ ಬೀದಿ ನಾಯಿಗಳನ್ನು ಹಿಡಿಯಲು ಪುರಸಭೆ ನಿಲ್ಲಿಸಿದ್ದು ಇದರಿಂದ ತಾಲೂಕಿನಲ್ಲೆಡೆ ನಾಯಿಗಳ ಹಾವಳಿ ಹೆಚ್ಚಿದೆ. ಕಾಡು, ಕಾಫಿತೋಟಗಳಲ್ಲಿ ಕಾಡುಪ್ರಾಣಿಗಳನ್ನು ಹುಡುಕಿ ಅಲೆಯುವ ಈ ಬೇಟೆನಾಯಿಗಳಿಗೆ ಕಾಡುಪ್ರಾಣಿಗಳು,

ಜನ,ಜಾನುವಾರುಗಳ ಪಾಲಿಗೆ ಮೃತ್ಯುಸ್ವರೂಪವಾಗಿದ್ದು. ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಬೇಟೆನಾಯಿಗಳು ಒಂದು ಮಗುವನ್ನು ಕಚ್ಚಿಗಾಯಗೊಳಿಸಿದ್ದರೆ, ನಾಲ್ಕು ಜಿಂಕೆಗಳು , ಒಂದು ನವಿಲು ಹಾಗೂ ಒಂದು ಜಾನುವಾರು ಬಲಿಯಾಗಿರುವುದು ಬೆಳಕಿಗೆ ಬಂದಿದೆ.

ವನ್ಯ ಜೀವಿಗಳು ಬಲಿ: ತಾಲೂಕಿನ ಮಠಸಾಗರ ಗ್ರಾಮ ಸಮೀಪ ಕಾಫಿ ತೋಟದಲ್ಲಿ ಜಿಂಕೆಯನ್ನು ಬೇಟಿಯಾಡಿದ್ದ ನಾಯಿಗಳನ್ನು ತೋಟದ ಮಾಲೀಕರು ಗುಂಡುಹಾರಿಸಿ ಓಡಿಸಿ ಜಿಂಕೆ ರಕ್ಷಿಸಿದರೂ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆ ಸಾವಿಗೀಡಾಗಿತ್ತು. ಇದಾದ ಎರಡು ದಿನಗಳಲ್ಲಿ ಕಿರೆಹಳ್ಳಿ ಕೃಷ್ಣಪ್ಪ ಎಂಬುವವರ ಕಾಫಿ ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಭಾಗಶಃ ತಿಂದು ಹಾಕಿದ್ದವು.

ಬೆಳಗೋಡು ಹೋಬಳಿ ಗೊಳಗೊಂಡೆ ಗ್ರಾಮದ ಕಾಫಿ ಎಸ್ಟೇಟ್‌ನಲ್ಲಿ ಬೀದಿನಾಯಿಗಳ ಗುಂಪಿಗೆ ಜಿಂಕೆ ಸಿಲುಕಿದ್ದು ತಕ್ಷಣವೇ ಕಾರ್ಮಿಕರು ಜಿಂಕೆ ರಕ್ಷಿಸಿ ಪಶು ವೈದ್ಯಶಾಲೆಗೆ ಕರೆತಂದರೂ ಯಾವುದೇ ಪ್ರಯೋಜವಾಗಲಿಲ್ಲ. ಇದಾಗಿ ಎರಡು ದಿನಗಳಲ್ಲಿ ರಾಟೇಮನೆ ಗ್ರಾಮ ಸಮೀಪದ ಐಬಿಸಿ ಕಾಫಿ ತೋಟದಲ್ಲಿ ಬೀದಿನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಂದ ಜಿಂಕೆ ವಾಹನಕ್ಕೆ ಸಿಲುಕಿ ಗಾಯಗೊಂಡಿತ್ತು.

ಈ ಜಿಂಕೆಯನ್ನು ರಕ್ಷಿಸಿ ಹಾಸನ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕೊಂಡೊಯ್ಯಲಾಗಿದೆ. ಇದೆ ಐಬಿಸಿ ಕಾಫಿ ತೋಟದಲ್ಲಿ ನವೀಲು ಬೇಟೆಯಾಡಿದ್ದ ನಾಯಿಗಳು ತಿಂದು ಮುಗಿಸಿವೆ. ಇದಲ್ಲದೇ ತಾಲೂಕಿನ ಬನ್ನಹಳ್ಳಿ ಗ್ರಾಮದ ರಮೇಶ್‌ ಎಂಬುವವರ ಮೇಯಲು ಕಟ್ಟಿಹಾಕಿದ್ದ ಜಾನುವಾರುಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದು ಜಾನುವಾರು ಸ್ಥಳದಲ್ಲೇ ಮೃತಪಟ್ಟಿದೆ.

ಮಕ್ಕಳ ಮೇಲೆ ನಾಯಿಗಳ ದಾಳಿ: ಕೋಗರವಳ್ಳಿ ಗ್ರಾಮದಲ್ಲಿ ತೋಟದಲ್ಲಿ ಆಟವಾಡುತ್ತಿದ್ದ ಕಾರ್ಮಿಕರ ಮಗುವಿನ ಮೇಲೆ ದಾಳಿ ಮಾಡಿದ ನಾಯಿಗಳ ಗುಂಪು ಕಚ್ಚಿಗಾಯಗೊಳಿಸಿದೆ ಅದೃಷ್ಟವಶಾತ್‌ ಕುಟುಂಬಸ್ಥರು ಸಕಾಲಕ್ಕೆ ಗಮನಿಸಿದ್ದರಿಂದ ಮಗುವಿನ ಜೀವ ಉಳಿದಿದೆ.

ಕಾಫಿ ಗಿಡಗಳ ಮದ್ಯೆ ಉದ್ದ ಕೋಡಿನ ಜಿಂಕೆಗಳು ಓಡಲು ಸಾಧ್ಯವಿಲ್ಲ ಇದರಿಂದ ಸುಲುಭವಾಗಿ ನಾಯಿಗಳಿಗೆ ತುತ್ತಾಗುತ್ತಿವೆ.
-ರವೀಂದ್ರ, ವಲಯ ಅರಣ್ಯಾಧಿಕಾರಿ.

ಕೂಡಲೇ ನಾಯಿಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಂಕೆ, ನವಿಲಿನಂತಹ ಪ್ರಾಣಿ ಪಕ್ಷಿಗಳು ಉಳಿಯುವುದು ಸಾಧ್ಯವಿಲ್ಲ.
-ಕೃಷ್ಣಪ್ಪ, ಕಾಫಿ ಬೆಳೆಗಾರರು, ಕಿರೇಹಳ್ಳಿ

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.