ಬೆಲಸಿಂದ ಉದ್ಯಾವನ ಅಭಿವೃದ್ಧಿ ಯಾಗುವುದೆಂದು?

ಅರಣ್ಯ, ಪ್ರವಾಸೋದ್ಯಮ ಇಲಾಖೆಗಳ ಸಮನ್ವಯದ ಕೊರತೆ, ಡೀಸಿ ಖಾತೆಯಲ್ಲಿ ಕೊಳೆಯುತ್ತಿದೆ ಕೋಟಿ ರೂ.

Team Udayavani, Jul 30, 2019, 2:20 PM IST

hasan-tdy-1

ಚನ್ನರಾಯಪಟ್ಟಣ: ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ನಡುವಿನ ಸಮನ್ವಯದ ಕೊರತೆಯಿಂದ ಸರ್ಕಾರ ಬಿಡುಗಡೆ ಮಾಡಿರುವ 1 ಕೋಟಿ ರೂ. ಹಣ ಕಳೆದ 28 ತಿಂಗಳಿನಿಂದ ಜಿಲ್ಲಾಧಿಕಾರಿ ಖಾತೆಯಲ್ಲಿ ಕೊಳೆಯುತ್ತಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸೋದ್ಯಮ ಇಲಾಖೆ ಮೂಲಕ ಹಲವು ಉದ್ಯಾನವನವನ್ನು ಪ್ರವಾಸಿ ತಾಣ ಮಾಡುವ ನಿಟ್ಟಿನಲ್ಲಿ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಮಾಡಿದ್ದರು. ಈ ಹಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಬಳಕೆ ಮಾಡಿಕೊಳ್ಳದೆ ಬೇಜವಾಬ್ದಾರಿ ತೋರುತ್ತಿದ್ದಾರೆ.

ಮುತುವರ್ಜಿ ತೋರದ ಅಧಿಕಾರಿಗಳು: ತಾಲೂಕಿ ನಲ್ಲಿ ಶ್ರವಣಬೆಳಗೊಳದ ಬಾಹುಬಲಿಗೆ ಈಗ್ಗೆ ಒಂದುವರೆ ವರ್ಷದ ಹಿಂದೆ ಮಹಾ ಮಸ್ತಕಾಭಿಷೇಕ ಮಹೋತ್ಸ ನೆರವೇರುವ ಈ ವೇಳೆ ಬೆಲಸಿಂದ ಪ್ರಕೃತಿ ವನ ಅಭಿವೃದ್ಧಿ ಮಾಡಲಿಲ್ಲ ಒಂದು ವೇಳೆ ಮಹಾ ಮಸ್ತಕಾಭಿಷೇಕ ಮಹೋತ್ಸವದ ಸಮಯದಲ್ಲಿ ಪ್ರಕೃತಿ ವನ ಅಭಿವೃದ್ಧಿ ಮಾಡಿದ್ದರೆ ಪ್ರವಾಸಿಗರ ತಾಣವಾಗಿ ಪರಿವರ್ತನೆ ಮಾಡಬಹುದಿತ್ತು. ಈ ಬಗ್ಗೆ ಜವಾಬ್ದಾರಿ ವಹಿಸಬೇಕಿದ್ದ ಅಧಿಕಾರಿಗಳು ಮುತುವರ್ಜಿ ತೋರದ ಹಿನ್ನೆಲೆಯಲ್ಲಿ ಬೆಲಸಿಂದ ಅಭಿವೃದ್ಧಿಯಿಂದ ಹೊರಗೆ ಉಳಿಯುವಂತಾಗಿದೆ.

ಕಬ್ಬನ್‌ ಪಾರ್ಕ್‌ ಮಾದರಿಯಲ್ಲಿ ಅಭಿವೃದ್ಧಿ: ಮೈಸೂರು- ಶಿವಮೊಗ್ಗ-ಗೋವಾಕ್ಕೆ ತೆರಳುವ ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು-ಮಂಗಳೂರು ರಾಷ್ಟ್ರಿಯ ಹೆದ್ದಾರಿಯ ಪಕ್ಕದಲ್ಲಿ ಅದು ಪಟ್ಟಣದಲ್ಲಿನ ತಾಲೂಕು ಆಡಳಿತ ಕಚೇರಿ ಮಿನಿ ವಿಧಾನ ಸೌಧದಿಂದ ಕೇಲವ 2 ಕಿ.ಮೀ. ದೂರುದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಲಸಿಂದ ಪ್ರಕೃತಿ ಉದ್ಯಾನ ವನವಿದೆ ಇದನ್ನು ಅಭಿವೃದ್ಧಿ ಪಡಿಸುವುದರಿಂದ ನಗರವಾಸಿಗರು ನಿತ್ಯ ವಾಯು ವಿಹಾರಕ್ಕೆ ಹಾಗೂ ಚಿಕ್ಕ ಮಕ್ಕಳಿಗೆ ಬಳಕೆಯಾಗುವುದಲ್ಲದೇ ಹೆದ್ದಾರಿಯಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಕೆಲ ಹೊತ್ತು ಕಾಲ ಕಳೆಯಲು ಅನುಕೂಲ ಆಗುತ್ತದೆ ಹಾಗಾಗಿ ಈ ವನವನ್ನು ಬೆಂಗೂರಿನ ಕಬ್ಬನ್‌ ಪಾರ್ಕ್‌ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು.

4 ಮಂದಿ ಮುಖ್ಯ ಮಂತ್ರಿ ಬದಲಾದರು: ಹಣ ಬಿಡುಗಡೆ ಮಾಡಿದ ಕಾಂಗ್ರೆಸ್‌ ಸರ್ಕಾರ ಸಿದ್ದರಾಮಯ್ಯ ಅವಧಿ ಮುಕ್ತಾಯವಾಗಿ ರಾಜ್ಯದಲ್ಲಿ ಚುನಾವಣೆ ನಡೆದು ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿದರು. ಬಹುಮತ ಇಲ್ಲದ ಕಾರಣ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಮಾಡಲು ಸಾಧ್ಯವಾಗಲಿಲ್ಲ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿ ಸುಮಾರು 14 ತಿಂಗಳು ಅಧಿಕಾರಿ ನಡೆಸಿದರು, ಈಗ ಪ್ರಸ್ತುತ ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾರೆ ಆದರೂ ಜಿಲ್ಲಾಧಿಕಾರಿ ಖಾತೆಯ ಅನುದಾನ ಮಾತ್ರ ಹಾಗೇ ಉಳಿದಿದೆ.

3 ಮಂದಿ ಜಿಲ್ಲಾ ಮಂತ್ರಿ ಬದಲಾದರು: ಬೆಲಸಿಂದ ಪ್ರಕೃತಿ ಉದ್ಯಾನ ವನ ಅಭಿವೃದ್ಧಿಗೆ ಹಣ ಬಿಡುಗಡೆ ಯಾದಾಗ ಹಾಸನ ಜಿಲ್ಲಾ ಉಸ್ತುವಾರಿಯಾಗಿ ಎಚ್.ಸಿ. ಮಹದೇವಪ್ಪ ಇದ್ದರು ಇದಾದ ಬಳಿಕ ಜಿಲ್ಲೆಯ ಶಾಸಕರನ್ನು ಜಿಲ್ಲಾ ಮಂತ್ರಿಯಾಗಿ ಎ.ಮಂಜು ಅವರನ್ನು ಸರ್ಕಾರ ನೇಮಕ ಮಾಡಿದರು ಜಿಲ್ಲೆಯ ವರು ಸಹ ಈ ಬಗ್ಗೆ ಗಮನ ಹರಿಸಲಿಲ್ಲ, ನಂತರ ರಾಜ್ಯದ ಸೂಪರ್‌ ಸಿಎಂ ಎಂದು ಖ್ಯಾತಿ ಪಡೆದಿರುವ ಅಭಿವೃದ್ಧಿ ಅಧಿಕಾರ ಎಚ್.ಡಿ.ರೇವಣ್ಣ ಅಧಿಕಾರ ನಡೆಸಿ ಮಾಜಿ ಆದರೂ ಒಂದು ಕೋಟಿ ಹಣ ವೆಚ್ಚ ಮಾಡಲು ಅಧಿಕಾರಿಗಳು ಮೀನ ಮೇಷ ಎಣಿಸುತ್ತಿ ರುವುದ ಹಿಂದಿನ ಮರ್ಮ ತಿಳಿಯುತ್ತಿಲ್ಲ.

ಜಿಲ್ಲಾಧಿಕಾರಿಗಳು ಹಣ ಉಪಯೋಗಿಸಿಲ್ಲ: ರಾಜ್ಯ ಸರ್ಕಾರ ಬೆಲಸಿಂದ ಪ್ರಕೃತಿ ಉದ್ಯಾನ ವನವನ್ನು ಪ್ರವಾಸಿ ತಾಣವಾಗಿ ಮಾಡಲು ಹಣ ಬಿಡುಗಡೆ ಮಾಡಿದಾಗ ಅಂದು ಜಿಲ್ಲಾಧಿಕಾರಿಯಾಗಿ ಚೈತ್ರಾ ಇದ್ದರು ಇವರಾದ ಮೇಲೆ ಉಮೇಶ್‌ ಕುಸಗಲ್ ಜಿಲ್ಲಾಡಳಿತವನ್ನು ಮುಂದೆ ನಡೆಸಿದರು. ನಂತರ ರೋಹಿಣಿ ಸಿಂಧೂರಿ ದಾಸರಿ ಜಿಲ್ಲೆಗೆ ಆಗಮಿಸಿದಾಗ ತಮ್ಮ ಖಾತೆಯಲ್ಲಿ ಹಣ ಇರುವುದು ತಿಳಿದು ಒಮ್ಮೆ ಬೆಲಸಿಂದ ಪ್ರಕೃತಿ ವನಕ್ಕೆ ಭೇಟಿ ನೀಡಿ ಅಧಿಕಾರಿ ಗಳೊಂದಿಗೆ ಚರ್ಚಿಸಿದ್ದರು. ನಂತರದ ದಿವಸಗಳಲ್ಲಿ ಅವರ ವರ್ಗಾವಣೆೆ ವಿಷಯವಾಗಿ ನ್ಯಾಯಾಲಯಕ್ಕೆ ಮೊರೆ ಹೋದ ಮೇಲೆ ಈ ಕೆಲಸ ಸ್ಥಗಿತವಾಯಿತು. ಪ್ರಸಕ್ತವಾಗಿ ಜಿಲ್ಲೆಯಲ್ಲಿ ಅಕ್ರಂ ಪಾಷಾ ಡೀಸಿ ಸ್ಥಾನದಲ್ಲಿ ಇದ್ದಾರೆ ಇವರಾದರು ಇತ್ತ ಗಮನ ಹರಿಸಬೇಕಿದೆ.

 

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.