ಮಹಿಳೆಯರಿಗೆ ಮೀಸಲಾತಿ ನೀಡಲು ಒತಾಯ
Team Udayavani, Oct 3, 2021, 5:11 PM IST
ಹೊಳೆನರಸೀಪುರ: ಸ್ವತಂತ್ರ ಬಂದು 75 ವರ್ಷಗಳಾಗಿದ್ದು ಮಹಿಳೆಯರಿಗೆ ಶೇ. 33 ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮೀಸಲಾತಿ ದೊರಕುವಂತೆ ಮಾಡುವಲ್ಲಿ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವ ಹಾಗು ಶಾಸಕ ಎಚ್.ಡಿ.ರೇವಣ್ಣ ನುಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ 152 ನೇ ಹಾಗೂ ಮಾಜಿ ಪ್ರಧಾನಿ ಲಾಲ್ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಮಹಾತ್ಮಗಾಂಧೀಜಿ ಅವರು ಅಹಿಂಸಾ ತತ್ವದಡಿಯಲ್ಲಿ ಯಾವುದೆ ರಕ್ತ ಪಾತವಿಲ್ಲದೆ ಸ್ವತಂತ್ರಯ ತಂದು ಕೊಟ್ಟಿದ್ದಾರೆ. ತಂದು ಕೊಟ್ಟಿರುವ ಮಹಾತ್ಮರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ಬಡವರಿಗೆ ಶಿಕ್ಷಣ ದೊರಕಬೇಕು ಎಂದರು.
ಇದನ್ನೂ ಓದಿ:- ಸಿದ್ದರಾಮಯ್ಯನವರಿಗೆ ಜೆಡಿಎಸ್ ಮನೆಯೊಳಗೆ ಇಣುಕಿ ನೋಡುವ ಚಾಳಿ ಯಾಕೆ: ಸಿ.ಟಿ.ರವಿ
ಒಂದು ವಾರದಿಂದ ಸಮಾಜದಲ್ಲಿ ಬಹಳಷ್ಟು ಮಂದಿ ನೇಣಿಗೆ ಶರಣಗಾಗುತ್ತಿದ್ದಾರೆ. ಇದಕ್ಕೆ ಕಾರಣ ಜನರಲ್ಲಿನ ಆತ್ಮವಿಶ್ವಾಸ ಕುಗ್ಗುತ್ತಿರುವುದಕ್ಕೆ ಕಾರಣವಾಗಿದೆ. ಜಯಂತಿ ಸಂದರ್ಭದಲ್ಲಿ ಯೋಜನೆಯೊಂದನ್ನು ಜಾರಿಗೆ ತರಬೇಕಿದೆ ಎಂದರು. ವೇದಿಕೆ ಕಾರ್ಯಕ್ರಮ ಆರಂಭಕ್ಕೆ ಮೊದಲು ರೇವಣ್ಣ ಅನೌಪಚಾರಿಕವಾಗಿ ಮಾತನಾಡಿ, ಪಟ್ಟಣದ ಸರಹದ್ದಿನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಅವಶ್ಯಕ ವಾಗಿದ್ದು, ಅದಕ್ಕೆ ಪೊಲೀಸ್ ಇಲಾಖೆ ತುರ್ತಾಗಿ ಕ್ರಮಕೈಗೊಂಡು ಮುಖ್ಯ ರಸ್ತೆ ಸೇರಿದಂತೆ ಎಲ್ಲಡೆ ಸಿಸಿ ಕ್ಯಾಮರಾ ಅಳವಡಿಕೆಗೆ ಮುಂದಾಗುವಂತೆ ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಿಸಿ ಕ್ಯಾಮರಾ ಆಳವಡಿಕೆಗೆ ಪೋಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ಒಂದಡೆ ಕುಳಿತು ತುರ್ತಾಗಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಸೂಚಿಸಿದರು. ಪಟ್ಟಣದ ವಿವಿಧೆಡೆ ಅಳವಡಿಕೆಗೆ ತೀರ್ಮಾನಿಸಲಾಯಿತು.
ತಾಲೂಕಿನ ಕಾಮ ಸಮುದ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಅಫಘಾತಗಳ ಸಂಭವಿ ಸುತ್ತಿದೆ. ಆದ್ದರಿಂದ ಪೊಲೀಸ್ ಇಲಾಖೆ ಕಾಮ ಸಮುದ್ರ ಅಕ್ಕಪಕ್ಕ ಸುಮಾರು 500 ಮೀ. ರಸ್ತೆಯಲ್ಲಿ ಡೆಂಜರ್ ಝೋನ್ ಎಂದು ತಿರ್ಮಾನಿಸಿ ಆ ರಸ್ತೆಗಳಲ್ಲಿ ನಾಲ್ಕಾರು ಸ್ಥಳಗಳಲ್ಲಿ ಅಫಘಾತದ ವಲಯ ಎಂದು ನಾಮಫಲಕ ಆಳವಡಿಸಲು ಸೂಚಿಸಿದರು.
ಜಯಂತಿ ಪ್ರಯುಕ್ತ ತಾಲೂಕಿನ ಇಬ್ಬರು ಹಿರಿಯ ನಾಗರಿಕರಿಗೆ ಶಾಲು ಹೊದಿಸಿ ಗೌರವಿಸಲಾಯಿತು. ತಹಶೀಲ್ದಾರ್ ಕೆ.ಕೆ.ಕೃಷ್ಣ ಮೂರ್ತಿ, ಇಒ ಕೆ.ಯೋಗೇಶ್, ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ