ಸ್ವಚ್ಛತೆ ಜೊತೆಗೆ ಸಮಾಜದ ಏಳಿಗೆಗೆ ದುಡಿಯಿರಿ: ಶಾಸಕ


Team Udayavani, Oct 3, 2020, 2:56 PM IST

ಸ್ವಚ್ಛತೆ ಜೊತೆಗೆ ಸಮಾಜದ ಏಳಿಗೆಗೆ ದುಡಿಯಿರಿ: ಶಾಸಕ

ಅರಕಲಗೂಡು: ಮಹಾತ್ಮರ ಹೆಸರಿನಲ್ಲಿ ಪರಿಸರ ಸ್ವಚ್ಛತೆ ಮಾಡಿದರೆ ಸಾಲದು, ಸಮಾಜದ ಏಳಿಗೆಗೆ ದುಡಿಯಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.

ತಾಲೂಕು ಕಚೇರಿ ಆವರಣದಲ್ಲಿ ನಡೆದ ಗಾಂಧಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ದಿನಾಚರಣೆ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮರ ದಿನಾಚರಣೆ ನಡೆಸುವುದು ಕೇವಲ ಕಾರ್ಯ ಕ್ರಮಕ್ಕಾಗಿ ಅಲ್ಲ, ಮಹಾತ್ಮ ಗಾಂಧಿ, ಇತರೆ ನಾಯಕರು ಸ್ವಾತಂತ್ರ್ಯ ನೀಡಿ, ನಮ್ಮಗಳಿಗೆ ನೆಮ್ಮದಿ ಜೀವನ ಸಾಗಿಸಲು ಶಾಂತಿ ಯುತ ಭಾರತವನ್ನು ಕಲ್ಪಿಸಿದ್ದಾರೆ ಎಂದು ಹೇಳಿದರು.

ಇಂತಹ ಮಹಾನ ವ್ಯಕ್ತಿಗಳು ನಿಸ್ವಾರ್ಥದಿಂದ ಸಮಾಜಕ್ಕಾಗಿ ದುಡಿದಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಮೋಸ, ವಂಚನೆಗಳು, ಸ್ವಾರ್ಥ ಜೀವನ ಕಟ್ಟಿಕೊಳ್ಳಲು ಸಮಾಜದ ಸ್ವಾಸ್ಥ್ಯ ಹಾಳುಮಾಡಲಾಗುತ್ತಿದೆ. ಆದ್ದರಿಂದ ಜನ್ಮ ದಿನ ಆಚರಣೆ ಮಾಡುವುದು ದೊಡ್ಡದಲ್ಲ. ಅವರ ತತ್ವ ಸಿದ್ಧಾಂತ ಮೈಗೂಡಿಸಿಕೊಂಡು ಸಮಾಜದ ಶ್ರೇಯಸ್ಸಿಗೆ ಶ್ರಮಿಸಬೇಕು, ಆಗ ಮಾತ್ರ ಇಂತಹ ಮಹಾತ್ಮರ ದಿನವನ್ನು ಆಚರಿಸುವುದಕ್ಕೆ ಅರ್ಥ ಸಿಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ನಂತರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಡೆದ ಶ್ರಮದಾನದಲ್ಲಿ ಶಾಸಕರೊಂದಿಗೆ ತಹಶೀಲ್ದಾರ್‌ ವೈ.ಎಂ.ರೇಣುಕುಮಾರ, ಪಪಂ ಮುಖ್ಯಾಧಿಕಾರಿ ಬಸವರಾಜು ಪಾಲ್ಗೊಂಡಿದ್ದರು. ಪಪಂ ಸದಸ್ಯರಾದ ಹೂವಣ್ಣ, ಪ್ರದೀಪ್‌ಕುಮಾರ್‌, ಡಾ. ಸ್ವಾಮೀಗೌಡ, ಡಾ.ದೀಪಕ್‌, ಸಹಾಯಕ ಆರೋಗ್ಯ ನಿರೀಕ್ಷಕ ಲಿಂಗರಾಜು ಭಾಗವಹಿಸಿದ್ದರು.

ಜಾವಗಲ್‌ ಹೋಬಳಿಯಲ್ಲಿಗಾಂಧಿ, ಶಾಸ್ತ್ರೀ ಜಯಂತಿ :

ಜಾವಗಲ್‌: ಹೋಬಳಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ151ನೇ ಹಾಗೂ ಮಾಜಿ ಪ್ರಧಾನಿ ದಿ. ಲಾಲ್‌ ಬಹದ್ದೂರ್‌ ಶಾಸ್ತ್ರಿ 116ನೇ ಜಯಂತಿಯನ್ನು ಕೋವಿಡ್‌-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಗ್ರಾಮದ ಗ್ರಾಪಂ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಡಿಒ ಮಂಜುನಾಥ್‌, ಕಾರ್ಯದರ್ಶಿ ಈರೇಗೌಡ ಹಾಗೂ ಸಿಬ್ಬಂದಿ ನಿರ್ಗಮಿತ ಅಧ್ಯಕ್ಷ ಕುಮಾರನಾಯ್ಕ, ಉಪಾಧ್ಯಕ್ಷೆ ಶಂಕರಮ್ಮಶ್ರೀನಿವಾಸ್‌, ಸದಸ್ಯರು ಭಾಗ ವಹಿಸಿದ್ದರು.

ಈ ವೇಳೆ ಉಪನ್ಯಾಸಕ ದಯಾನಂದ್‌ ಮಾತನಾಡಿ, ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದರು. ಸರ್ಕಾರಿ ಪದವಿ ಪೂರ್ವಕಾಲೇಜಿನಪ್ರೌಢಶಾಲಾವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಯೋಗೀಶ್‌ ಮುಗಳಿಕಟ್ಟೆಮಾತನಾಡಿ, ಗಾಂಧಿ ಹಾಗೂ ಶಾಸ್ತ್ರೀ ಅವರ ಜೀವನ ಮೌಲ್ಯಗಳು ಸಾರ್ವ ಕಾಲಿಕ ಮನ್ನಣೆಗಳಿಸಿದ್ದು, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ದೇಶದ ಪ್ರಗತಿಗೆ ಶ್ರಮಿಸುವ ಮನೋ ಭಾವ ಬೆಳೆಸಿಕೊಳ್ಳಬೇಕೆಂದರು.

ಎಸ್‌ಡಿಎಂಸಿ ಅಧ್ಯಕ್ಷ ಪುಟ್ಟೇಗೌಡ, ಶಿಕ್ಷಕರಾದ ಚಂದ್ರೇಗೌಡ, ರಾಮಲಿಂಗೇಗೌಡ, ಶಿವಲಿಂಗಮೂರ್ತಿ, ಸವಿತಾ, ಸೌಮ್ಯಾ, ವಿದ್ಯಾ, ಜ್ಯೋತಿ ಮತ್ತಿತರರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಪುಟ್ಟಸ್ವಾಮಿ, ಮಹೇಶ್‌, ಸಿಬ್ಬಂದಿ ಶಿಲ್ಪಾ ಮತ್ತಿತರರು ಇದ್ದರು. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎಸ್‌.ಕೆ.ಕಾನ್ವೆಂಟ್‌, ಕನ್ನಡ ಮಾತಾ, ಇಂದಿರಾ ಮೆಮೋರಿ ಯಲ್‌, ಹೋಬಳಿಯ ಶಾಲಾಕಾಲೇಜು ಹಾಗೂ ಗ್ರಾಪಂಗಳಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.