ಪ್ರಾಕೃತ ವಿವಿ ಧವಲತೀರ್ಥಂ ಕಾಮಗಾರಿ ವಿಳಂಬ

2018ರ ಮಹಾ ಮಸ್ತಕಾಭಿಷೇಕದ ಕೊಡುಗೆ • ಹಾಸನ ಜಿಲ್ಲೆ ಪ್ರಥಮ ವಿವಿ ಉದ್ಘಾಟನೆಗೆ ಇನ್ನೂ ವರ್ಷ ಬೇಕಿದೆ

Team Udayavani, Aug 9, 2019, 3:01 PM IST

hasan-tdy-1

ಚನ್ನರಾಯಪಟ್ಟಣ ತಾಲೂಕು ಶ್ರವಣಬೆಳಗೊಳದಲ್ಲಿ ನಿರ್ಮಾಣವಾಗುತ್ತಿರುವ ಪ್ರಾಕೃತ ವಿವಿ ಧವಲತೀರ್ಥಂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್‌ ನಿರ್ಮಾಣ ಮಾಡಲಾಗಿದೆ.

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಭಗವಾನ್‌ ಬಾಹುಬಲಿಗೆ ನಡೆದ‌ ಶತಮಾನದ 2ನೇ ಮಹಾ ಮಜ್ಜನಕ್ಕೆ ಅಂದಿನ ರಾಜ್ಯ ಸರ್ಕಾರ ಹಲವು ಕೊಡುಗೆ ನಿಡಿದ್ದು, ಅದರಲ್ಲಿ ಪ್ರಾಕೃತ ವಿಶ್ವದ್ಯಾಲಯ ಪ್ರಮಖವಾದುದ್ದು ಕಾಮಗಾರಿ ಪ್ರಾರಂಭವಾಗಿ ಎರಡು ವರ್ಷ ಸಮೀಪಿಸುತ್ತಿದ್ದರೂ ಶೇ.40ರಷ್ಟು ಮಾತ್ರ ಮುಕ್ತಾಯವಾಗಿದೆ.

ಶ್ರವಣಬೆಳಗೋಳದ 88ನೇ ಮಹಾಮಸ್ತಕಾ ಭಿಷೇಕದ ಸ್ಮರಣಾರ್ಥ ಶಾಶ್ವತ ಯೋಜನೆಗಳ ಪೈಕಿ ಪ್ರಾಕೃತ ವಿಶ್ವವಿದ್ಯಾಲಯ ನಿರ್ಮಾಣ ಪ್ರಮುಖ ವಾಗಿದ್ದು, ಪ್ರಾಕೃತ ಭಾಷೆಯ ಅಧ್ಯಯನ ಹಾಗೂ ಜೈನ ಸಾಹಿತ್ಯ ಪ್ರಕರಣಕ್ಕಾಗಿ ರೂಪುಗೊಳ್ಳುತ್ತಿರುವ ದೇಶದ ಪ್ರಥಮ ವಿಶ್ವ ವಿದ್ಯಾಲಯ ಎಂಬ ಹೆಗ್ಗಳಿಕೆಗೆ ಶ್ರವಣಬೆಳಗೊಳದ ಹೊರ ವಲಯದಲ್ಲಿ ನಿರ್ಮಾಣ ಆಗುತ್ತಿರುವ ಪ್ರಾಕೃತ ವಿವಿ ಧವಲತೀರ್ಥಂ ಪಾತ್ರವಾಗಲಿದೆ.

36 ಎಕರೆ ಮೀಸಲು: ಶ್ರವಣಬೆಳಗೊಳ-ಹಿರೀಸಾವೆ ರಾಜ್ಯ ಹೆದ್ದಾರಿ ಸಮೀಪ ಶ್ರವಣಬೆಳಗೊಳದಿಂದ 6 ಕಿ.ಮೀ. ದೂರದಲ್ಲಿರುವ ಪ್ರಾಕೃತ ಸಂಶೋಧನಾ ಕೇಂದ್ರದ ಹಿಂಭಾಗದಲ್ಲಿ ಸುಮಾರು 36 ಎಕರೆ ಪ್ರದೇಶದಲ್ಲಿ ಪ್ರಾಕೃತ ವಿಶ್ವವಿದ್ಯಾಲಯ ಧವಲ ತೀರ್ಥಂ ಅನ್ನು ನಿರ್ಮಾಣ ಮಾಡಲಾಗುತ್ತಿದ್ದು ಆಮೆ ವೇಗದಲ್ಲಿ ಕಾಮಗಾರಿಗಳು ನಡೆಯುತ್ತಿದೆ.

21 ಕೋಟಿ ಅನುದಾನ ಬಿಡುಗಡೆ: ಪ್ರಾಕೃತ ವಿವಿ ಕ್ಯಾಂಪಸ್‌ ನಿರ್ಮಾಣಕ್ಕೆ 64 ಕೋಟಿ ರೂ. ಅಂದಾಜಿನ ಪೈಕಿ ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷದ ಹಿಂದೆಯೇ 21 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಕ್ಯಾಂಪಸ್‌ ನಿರ್ಮಾಣದ ಮೊದಲ ಹಂತದಲ್ಲಿ ಸುಸಜ್ಜಿತ ಗ್ರಂಥಾಲಯ, ಬೋಧನಾ ವಿಭಾಗ, ಬಾಲಕ ಹಾಗೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಈಗಿರುವ ಪ್ರಾಕೃತ ಸಂಶೋಧನಾ ಕೇಂದ್ರವನ್ನು ಆಡಳಿತ ಕಚೇರಿಯನ್ನೇ ವಿವಿಯ ಆಡಳಿತ ವಿಭಾಗವಾಗಿ ಬಳಸಿಕೊಳ್ಳುವ ಉದ್ದೇಶವಿದೆ.

ಶ್ರೀಗಳ ಕನಸು ಈಡೇರಿದೆ: ಜೈನ ಧರ್ಮದ ಬಹುಪಾಲು ಸಾಹಿತ್ಯ ಪ್ರಾಕೃತ ಭಾಷೆಯಲ್ಲಿದೆ. ಹಾಗಾಗಿ ಪ್ರಾಕೃತ ವಿಶ್ವದ್ಯಾನಿಲಯ ಆರಂಭಿಸಬೇಕೆಂದು ಶ್ರವಣಬೆಳಗೊಳ‌ ಜೈನ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೂರು ದಶಕದ‌ ಕನಸು, ಆ ಕನಸಿನ ಸಾಕಾರಕ್ಕೆ 1993ರ ಮಹಾ ಮಸ್ತಕಾಭಿಷೇಕದ ಸಂದರ್ಭದಲ್ಲಿ ಅಂದಿನ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ನಾಂದಿ ಹಾಡಿದರು. ಅಂದು ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಆರಂಭವಾಯಿತು. ಈಗ ಪ್ರಾಕೃತ ವಿವಿ ನಿರ್ಮಾಣವಾಗುತ್ತಿರುವುದು ಶ್ರೀಗಳ ಕನಸು ಈಡೇರಿದಂತಾಗಿದೆ.

ಆಸಕ್ತಿ ತೋರಿಸದ ಸರ್ಕಾರಗಳು: ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸಿದ್ದರು. ಆದರೆ ಕಾಮಗಾರಿ ಆರಂಭವಾಗುವುದು ತಡವಾಯಿತಲ್ಲದೇ ಯೋಜನೆ ಕೈತಪ್ಪುವ ಹಂತಕ್ಕೂ ಬಂದು ತಲುಪಿತ್ತು.ಆದರೆ ಚಾರುಶ್ರೀಗಳ ಸತತ ಒತ್ತಡದಿಂದ ಅನುದಾನ ಬಿಡುಗಡೆ ಮಾಡಿ 2018ರ ಮಹಾಮಸ್ತಕಾಭಿಷೇಕ ವೇಳೆ ಕಾಮಗಾರಿಗೆ ಚಾಲನೆ ದೊರೆಯಿತಾದವರು ಕಾಮಗಾರಿ ಪ್ರಾರಂಭ ಮಾಡುವಲ್ಲಿ ಆಡಳಿತಾರುಢ ಸರ್ಕಾರಗಳು ಆಸಕ್ತಿ ತೋರಲಿಲ್ಲ.

ರೇವಣ್ಣ ಮನಸ್ಸು ಮಾಡಲಿಲ್ಲ: ಜಿಲ್ಲೆಯ ಪ್ರಭಾವಿ ರಾಜಕಾರಣಿ ರಾಜ್ಯದ ಸೂಪರ್‌ ಸಿಎಂ ಎಂಬ ಖ್ಯಾತಿ ಪಡೆದಿದ್ದ ಎಚ್.ಡಿ.ರೇವಣ್ಣ ಲೋಕೋಪಯೋಗಿ ಮಂತ್ರಿಯಾಗಿದ್ದರೂ ಕಾಮಗಾರಿಯನ್ನು ಶರವೇಗದಲ್ಲಿ ಮಾಡಿಸಲು ವಿಫ‌ಲರಾದರು. ಅವರ ಆಡಳಿತದ ಅವಧಿಯಲ್ಲಿ ಪ್ರಾಕೃತ ವಿವಿ ಕಾಮಗಾರಿ ಬಗ್ಗೆ ಶ್ರವಣಬೆಳಗೊಳದಲ್ಲಿ ಲೋಕೋಪಯೋಗಿ ಅಧಿಕಾರಿಗಳ ಸಭೆ ನಡೆಸಲಿಲ್ಲ. ರೇವಣ್ಣ ಒಮ್ಮೆ ಅಧಿಕಾರಿಗಳಿಗೆ ಆದೇಶಿಸಿದ್ದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣವಾಗುತ್ತಿತ್ತು ಎಂದು ರಾಜಕೀಯ ಮುಖಂಡರು ಅಭಿಪ್ರಾಯಪಡುತ್ತಾರೆ.

ಅಧಿಕಾರ ಅಸಡ್ಡೆ: ಪ್ರಾಕೃತ ವಿಶ್ವ ವಿದ್ಯಾಲಯ ಧವಲತೀರ್ಥಂ ಕಾಮಗಾರಿಯನ್ನು ಮನಸೋ ಇಚ್ಛೆ ಮಾಡಲಾಗುತ್ತಿಲ್ಲ. ಕಳಪೆ ಕಾಮಗಾರಿ ಆಗಬಾರದೆಂದು ಪ್ರತಿ ಹಂತದ ಕಾಮಗಾರಿಯನ್ನು ಜೈನ ಮಠದ ಅಧಿಕಾರಿಗಳು ಮುಂದೆ ನಿಂತು ನೋಡುವುದರಿಂದ ಗುತ್ತಿಗೆದಾರ ಗುಣಮಟ್ಟದಲ್ಲಿ ಕೆಲಸ ಮಾಡಬೇಕಿದೆ. ಗುಣಮಟ್ಟದ ಕೆಲಸ ಮಾಡುವುದರಿಂದ ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳಿಗೆ ಮಾಮೂಲಿ ದೊರೆಯುವುದಿಲ್ಲ ಹಾಗಾಗಿ ಅಧಿಕಾರಿಗಳು ಮುತುವರ್ಜಿ ವಹಿಸದೇ ಅಸಡ್ಡೆ ತೋರುತ್ತಿದ್ದಾರೆ.

ಕಾರ್ಯ ಪ್ರಗತಿ: ವಿವಿಯ ಗ್ರಂಥಾಲಯ ಶ್ರುತ ಬಂಡಾರ ನೆಲ ಅಂತಸ್ತು 20,575 ಚದರ ಅಡಿ ಮೊದಲ ಅಂತಸ್ತು 7,600 ಅಡಿ ಒಟ್ಟು 28,175 ಚದರಡಿ ಇದ್ದು ಕೇವಲ ಪಿಲ್ಲರ್‌ ಮಾತ್ರ ಹಾಕಲಾಗಿದೆ. ಬೋಧನಾ ಕೊಠಡಿಗಳು ನೆಲ ಅಂತಸ್ತು, ಮೊದಲ ಹಾಗೂ ಎರಡನೇ ಅಂತಸ್ತು ತಲಾ 12,500 ಅಡಿ ಇದ್ದು ಕೇವಲ ಪಿಲ್ಲರ್‌ ಮಾತ್ರ ಹಾಕಲಾಗಿದೆ. ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮೂರು ಅಂತಸ್ತು ನಿರ್ಮಾಣ ಮಾಡಬೇಕಿದ್ದು ಕೇವಲ ನೆಲ ಅಂತಸ್ತು ಮಾತ್ರ ನಿರ್ಮಾಣ ಮಾಡಲಾಗಿದೆ. ಅಡುಗೆ ಮನೆ ನೆಲ ಹಾಗೂ ಮೊದಲ ಅಂತಸ್ತು ಕಟ್ಟಡ ನಿರ್ಮಿಸಬೇಕಿದ್ದು ನೆಲ ಅಂತಸ್ತಿನ ಕಾಮಗಾರಿ ಮುಕ್ತಾಯವಾಗಿದ್ದು ಮೊಲದ ಅಂತಸ್ತಿನ ಕಾಮಗಾರಿ ಪ್ರಾರಂಭಿಸಬೇಕಿದೆ.

ಮೂಲ ಸೌಕರ್ಯಗಳಿಗೆ ಯೋಜನೆ ತಯಾರಾಗಿಲ್ಲ: ಹಾಸನ ಜಿಲ್ಲೆಯ ಪ್ರಥಮ ವಿವಿ ಇದಾಗಿದೆ. ಕಾಮಗಾರಿ ನಡೆಯುತ್ತಿದೆ ಆದರೆ ವಿವಿ ಉದ್ಘಾಟನೆ ವೇಳೆಗೆ ವಿವಿ ಕ್ಯಾಂಪಸ್‌ಗೆ ಕುಡಿಯುವ ನೀರು, ರಸ್ತೆ, ವಿದ್ಯುತ್‌ ದೀಪ ಸೇರಿದತೆ ಮೂಲ ಸೌಕರ್ಯಗಳು ಆಗಬೇಕಿದೆ. ಈ ಬಗ್ಗೆ ಜಿಲ್ಲಾಡಳಿತ ಯೋಜನೆ ತಯಾರು ಮಾಡಿಲ್ಲ.

ಹೇಮವತಿ ನದಿಯಿಂದ ಶ್ರವಣಬೆಳಗೊಳಕ್ಕೆ ಕುಡಿಯುವ ನೀರು ನೀಡಲಾಗುತ್ತಿದೆ ಅದೇ ನೀರನ್ನು ಇಲ್ಲಿಗೆ ಲಿಂಕ್‌ ಮಾಡಬೇಕಿದೆ. ಇನ್ನು ಮುಖ್ಯ ರಸ್ತೆಯಿಂದ ವಿವಿ ಕ್ಯಾಂಪಸ್‌ ಒಳಕ್ಕೆ ಪ್ರವೇಶ ಮಾಡುವ ರಸ್ತೆ ನಿರ್ಮಾಣ ಹಾಗೂ ಮೀಡಿಯನ್‌ ಲೈಟ್ ಅಳವಡಿಕೆಗೆ ಸುಮಾರು 3 ಕೋಟಿ ರೂ. ಅನುದಾನ ಅಗತ್ಯವಿದ್ದರೂ ಈವರೆಗೂ ಇಲಾಖೆ ಯೋಜನೆ ತಯಾರು ಮಾಡಿಲ್ಲ.

 

• ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.