ಅಸುರಕ್ಷಿತ ಲೈಂಗಿಕ ಸಂಬಂಧ ಏಡ್ಸ್‌ ಸೋಂಕಿಗೆ ಆಹ್ವಾನ


Team Udayavani, Dec 6, 2021, 1:39 PM IST

ಅಸುರಕ್ಷಿತ ಲೈಂಗಿಕ ಸಂಬಂಧ ಏಡ್ಸ್‌ ಸೋಂಕಿಗೆ ಆಹ್ವಾನ

ಅರಸೀಕೆರೆ: ಅಸುರಕ್ಷಿತ ಲೈಂಗಿಕ ಸಂಪರ್ಕದ ಮೂಲಕ ಬಹುತೇಕ ಯುವ ಜನಾಂಗದಲ್ಲಿ ಹರಡುತ್ತಿರುವ ಏಡ್ಸ್‌ ಬಗ್ಗೆ ಜನರಲ್ಲಿ ಜಾಗೃತಿಮೂಡಿಸುವುದು ಆರೋಗ್ಯ ಇಲಾಖೆಯ ಜತೆಗೆ ಸರ್ಕಾರದ ಎಲ್ಲಾ ಇಲಾಖೆಗಳ ಅತ್ಯಂತಜವಾಬ್ದಾರಿಯುತ ಕೆಲಸವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಸ್‌.ನಾಗಪ್ಪ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಿನಗಂಡಸಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬಿತ್ತಿ ಪತ್ರಗಳ ರಚನಾ ಸ್ಪರ್ಧೆ ಹಾಗೂ ಜನಜಾಗೃತಿ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಏಡ್ಸ್‌ ಅಸುರಕ್ಷಿತ ಲೈಂಗಿಕ ಸಂಬಂಧದಿಂದ ಹರಡುವ ಸೋಂಕಾಗಿದ್ದು,ಸೋಂಕಿತ ವ್ಯಕ್ತಿಯ ದೇಹದಲ್ಲಿ ರೋಗ ನಿರೋಧಕಶಕ್ತಿ ಕುಗ್ಗಿಸುವಂತೆ ಮಾಡಿ ಅವಕಾಶವಾದಿ ರೋಗ ರುಜಿನಗಳು ದೇಹವನ್ನು ಪ್ರವೇಶಿಸುವಂತೆ ಮುಕ್ತ ಆಹ್ವಾನವನ್ನು ನೀಡುತ್ತದೆ ಎಂದರು.

ಮಾನವ ಸಂಪನ್ಮೂಲಕ್ಕೆ ಮಾರಕವಾಗಿರುವ ಏಡ್ಸ್‌ ಶೇ.31 ಹದಿಹರೆಯದ ಯುವಕರಲ್ಲಿಕಂಡುಬರುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಅರಸೀಕೆರೆತಾಲೂಕು 3ನೇ ಸ್ಥಾನದಲ್ಲಿದೆ. ಆದಕಾರಣಯುವಕರು ಜಾಗೃತರಾಗಬೇಕಿದೆ ಎಂದರು. ಈ ಬಗ್ಗೆಜಾಗೃತಿ ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆಭಿತ್ತಿ ಪತ್ರ ಬರೆಯುವ ಸ್ಪರ್ಧೆಯನ್ನು ನಡೆಸುತ್ತಿದ್ದು,ಪ್ರಥಮ ಬಹುಮಾನ 3000 ರೂ. ದ್ವಿತೀಯಬಹುಮಾನ 2.500 ರೂ. ತೃತೀಯ ಬಹುಮಾನ1.500 ರೂಗಳನ್ನು ನೀಡಲಾಗುತ್ತದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ ಮಾತನಾಡಿ, ನಾವು ಎಚ್ಚರದಿಂದ್ದರೆ ಏಡ್ಸ್‌ ಅಪಾಯಕಾರಿಯಲ್ಲ. ಏಡ್ಸ್‌ ಸೋಂಕಿತರು ಮುಖ್ಯವಾಗಿ ತಮ್ಮಲ್ಲಿ ಆತ್ಮಸ್ಥೈರ್ಯವನ್ನುಬೆಳೆಸಿಕೊಳ್ಳುವ ಜತೆಗೆ ಸರ್ಕಾರ ಉಚಿತವಾಗಿನೀಡುವ ಚಿಕಿತ್ಸೆಯನ್ನು ಕಾಲಕಾಲಕ್ಕೆ ಪಡೆಯಬೇಕು ಎಂದರು.

ಅಧ್ಯಕ್ಷತೆಯನ್ನು ಗಂಡಸಿ ಸರ್ಕಾರಿ ಪ್ರೌಡಶಾಳೆಮುಖ್ಯ ಶಿಕ್ಷಕಿ ಶೋಭಾ ಅವರು ವಹಿಸಿದ್ದರು, ಗಂಡಸಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ತಿಮ್ಮರಾಜು, ದಂತ ವೈದ್ಯೆಡಾ.ಸೌಮ್ಯ, ಆರೋಗ್ಯ ಇಲಾಖೆ ಆಪ್ತಸಮಾಲೋಚಕರಾದ ತಿಮ್ಮೇಗೌಡ, ಆರೋಗ್ಯ ನಿರೀಕ್ಷಕರಾದ ಜಾಬ್ಬೀರ್‌ ಪಾಷಾ ಇತರರು ಇದ್ದರು.

ಟಾಪ್ ನ್ಯೂಸ್

vidhana-soudha

Cauvery ಜಲ ವಿವಾದ ; ಸೆ. 26 ರಂದು ಬೆಂಗಳೂರು ನಗರ ಬಂದ್ ಗೆ ಕರೆ

1wwewqe

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Server problem: ಸರ್ವರ್‌ ಸಮಸ್ಯೆ; ಪಡಿತರದಾರರ ಅಲೆದಾಟ

Server problem: ಸರ್ವರ್‌ ಸಮಸ್ಯೆ; ಪಡಿತರದಾರರ ಅಲೆದಾಟ

tdy-5

Alcohol: ಮದ್ಯ ಸೇವನೆ ಚಾಲೆಂಜ್‌-ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಸೇವಿಸಿ ಸಾವು

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

tdy-17

Channarayapatna: ತಹಶೀಲ್ದಾರ್‌ ಕುರ್ಚಿ ಕಾಳಗ: ದಿನವೂ ಕಡತಕ್ಕೆ ಬದಲಾಗುತ್ತೆ ಸಹಿ

TDY-16

Aluru: ಸಿಡಿಮದ್ದು ಸ್ಫೋಟದಿಂದ ಮನೆಗಳಿಗೆ ಹಾನಿ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

ಆನ್‌ಲೈನ್‌ ಗಣೇಶನ ಆರಾಧನೆ….!

ಆನ್‌ಲೈನ್‌ ಗಣೇಶನ ಆರಾಧನೆ….!

vidhana-soudha

Cauvery ಜಲ ವಿವಾದ ; ಸೆ. 26 ರಂದು ಬೆಂಗಳೂರು ನಗರ ಬಂದ್ ಗೆ ಕರೆ

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

1wwewqe

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.