ಬುದ್ಧಿ ಹೇಳಿದಕ್ಕೆ ಕಾರು ಹತ್ತಿಸಿ ಕೊಂದ!

ಘಟನೆಯಲ್ಲಿ ಓರ್ವ ಸಾವು, 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

Team Udayavani, Oct 20, 2021, 6:21 PM IST

ಘಟನೆಯಲ್ಲಿ ಓರ್ವ ಸಾವು 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

ಚನ್ನರಾಯಪಟ್ಟಣ/ಬಾಗೂರು: ಮದ್ಯ ಸೇವಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಮಾಡಿ ಕೊಂಡಾಗ ಬುದ್ಧಿವಾದ ಹೇಳಿದ್ದಕ್ಕೆ ಕುಪಿತಗೊಂಡ ಯುವಕನೋರ್ವ ಸಿನಿಮೀಯ ರೀತಿಯಲ್ಲಿ ಗುಂಪಿನ ಮೇಲೆ ಕಾರು ಚಲಾಯಿಸಿದ್ದರಿಂದ ಓರ್ವ ಸಾವನ್ನಪ್ಪಿದರೆ, 6 ಮಂದಿ ಗಾಯಗೊಂಡಿದ್ದಾರೆ.

ತಾಲೂಕಿನ ಬಾಗೂರು ಹೋಬಳಿ ಎಂ.ಶಿವರ ಗ್ರಾಮದ ಮುಂಭಾಗ ಯುವಕರು ವ್ಯಾಜ್ಯ ಮಾಡಿಕೊಂಡಿದ್ದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಗ್ರಾಮದ ಹಿರಿಯರು ಯುವಕರಿಗೆ ಬುದ್ಧಿ ಹೇಳಿ ಕಳುಹಿಸಿದ್ದರು. ಈ ವೇಳೆ ಕೋಪಗೊಂಡ ಯುವಕ ಏಕಾಏಕಿ ಕಾರು ಹತ್ತಿಸಿ ಓರ್ವನ ಬಲಿ ಪಡೆದಿದ್ದಲ್ಲದೆ 6 ಮಂದಿಗೆ ಗಾಯ ಮಾಡಿದ್ದಾನೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ:ಎಂ.ಶಿವರ ಗ್ರಾಮದ ನಂದೀಶ್‌(48) ಮೃತ ವ್ಯಕ್ತಿ.

ಇದೇ ಗ್ರಾಮದ ಗಿರೀಶ್‌ ಎಂಬವರ ಕಾಲು ಮುರಿದಿದೆ. ಇನ್ನು ಶರತ್‌, ಶಿವರಾಜ್‌, ಬಸವರಾಜ್‌, ಚೇತನ್‌ ಹಾಗೂ ಸೋಮನಹಳ್ಳಿ ಹರೀಶ್‌ಗೆ ಪೆಟ್ಟಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ನವೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ಘಟನೆ ವೇಳೆ ಗುಂಪಿನಲ್ಲಿದ್ದ ನಂದೀಶ್‌ ಹಾಗೂ ಗಿರೀಶ್‌ಗೆ ತೀವ್ರವಾಗಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ನಂದೀಶ್‌ ದಾರಿ ಮಧ್ಯೆ ಮೃತರಾದರೆ, ಗಿರೀಶ್‌ ಕಾಲು ಮುರಿದಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಪಿ ನಲ್ಲಿದ್ದ ಶರತ್‌, ಶಿವರಾಜ್‌, ಬಸವರಾಜ್‌, ಚೇತನ್‌ ಹಾಗೂ ಸೋಮನಹಳ್ಳಿ ಹರೀಶ್‌ಗೆ ಸಣ್ಣ ಪುಟ್ಟ ಗಾಯವಾಗಿದೆ. ವೇಗವಾಗಿ ಕಾರು ಬರುವಾಗ ಅಲ್ಲಿದ್ದ ಅನೇಕ ಮಂದಿ ದೂರ ಓಡಿ ಹೋಗಿದ್ದಾರೆ. ಇಲ್ಲದಿದ್ದರೆ ಇನ್ನೂ 2-3 ಮಂದಿ ಮೃತಪಡುತ್ತಿದ್ದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಾರೇಹಳ್ಳಿ ಉಪ ಪೊಲೀಸ್‌ ಠಾಣೆ ಸಿಬ್ಬಂದಿ ಕಾರ್ಯಾಚರಣೆ ಮೇರೆಗೆ ಕಾರು ಚಾಲಕ ನವೀನ್‌ ನನ್ನು ಬಂಧಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ಮುಂದುವರಿಸಲಾಗಿದೆ.

ಸಿನಿಮೀಯ ರೀತಿಯಲ್ಲಿ ಕಾರನ್ನು ಹತ್ತಿಸಿದ ಆರೋಪಿ-

ಬಾಗೂರು ಹೋಬಳಿ ಎಂ.ಶಿವರ ಗ್ರಾಮ ವೃತ್ತದ ಎಂಎಸ್‌ಐಎಲ್‌ ಮದ್ಯದ ಅಂಗಡಿಯಲ್ಲಿ ಮದ್ಯ ಖರೀದಿಸಿ ಅಲ್ಲೇ ಸೇವನೆ ಮಾಡಿದ ಯುವಕರು, ಮದ್ಯ ಸೇವನೆ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಗ್ರಾಮದ ಹಿರಿಯರಾದ ನಂದೀಶ್‌, ಗಿರೀಶ್‌ ಹಾಗೂ ಇತರರು ಯುವಕರ ಜಗಳ ನಿಲ್ಲಿಸುವಂತೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

ಹೊಂಗೇಹಳ್ಳಿ ರಂಗೇಗೌಡರ ಪುತ್ರ ನವೀನ್‌ ತನ್ನ ಕಾರಿನ ಮೂಲಕ ಸುಮಾರು 300 ಮೀಟರ್‌ವರೆಗೆ ಹೋಗಿ ಅಲ್ಲಿಂದ ಕಾರು ತಿರುಗಿಸಿಕೊಂಡು ಬಂದು ಬುದ್ಧಿ ಹೇಳಿದವರು ನಿಂತಿದ್ದ ಗುಂಪಿನ ಮೇಲೆ ಸಿನಿಮೀಯ ಮಾದರಿಯಲ್ಲಿ ಕಾರನ್ನು ಹರಿಸಿದ್ದಾನೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.