ಎತ್ತಿನಹೊಳೆ ಯೋಜನೆ ಕಾಮಗಾರಿ ಕಾರ್ಮಿಕರಿಗಿಲ್ಲ ಶುದ್ಧ ನೀರು


Team Udayavani, Mar 6, 2021, 4:40 PM IST

ಎತ್ತಿನಹೊಳೆ ಯೋಜನೆ ಕಾಮಗಾರಿ ಕಾರ್ಮಿಕರಿಗಿಲ್ಲ ಶುದ್ಧ ನೀರು

ಆಲೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆಯ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ವಲಸೆ ಕಾರ್ಮಿಕರಿಗೆ, ಗುತ್ತಿದಾರರು ಶುದ್ಧ ಕುಡಿಯುವ ನೀರು ಸೇರಿ ಹಲವು ಸೌಲಭ್ಯ ಕಲ್ಪಿಸದೇ, ಹೀನಾಯವಾಗಿ ದುಡಿಸಿಕೊಳ್ಳುತ್ತಿದ್ದಾರೆ.

ತಾಲೂಕಿನ ಕಾಮತಿಕೂಡಿಗೆ ಬಳಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಕಾಲುವೆ ನಿರ್ಮಾಣ ಕಾಮಗಾರಿ ಯಲ್ಲಿ 25 ರಿಂದ 30 ವಲಸೆ ಕಾರ್ಮಿಕರು ತೊಡಗಿಕೊಂಡಿದ್ದಾರೆ.ಇವರು ಮೂಲತಃ ಪಶ್ಚಿಮ ಬಂಗಾಳದಿಂದ ಬಂದವರು. ಗುತ್ತಿಗೆದಾರರು ಶುದ್ಧ ಕುಡಿಯುವ ನೀರು ಒದಗಿಸಿದ ಕಾರಣ, ಕಾಲುವೆ ಯಲ್ಲಿ ಜಿನುಗುತ್ತಿರುವ ನೀರನ್ನು ಲೋಟ, ಪ್ಲಾಸ್ಟಿಕ್‌ ಬಾಟಲ್‌ನಲ್ಲಿ ತುಂಬಿಕೊಂಡು ಸೇವಿಸುತ್ತಿದ್ದಾರೆ.

ಅಡುಗೆಗೂ ಕಲುಷಿತ ನೀರು: ಮೊದಲು ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದ್ದಗುತ್ತಿಗೆದಾರರು, ನಂತರ ಟ್ಯಾಂಕರ್‌ ತುಕ್ಕು ಹಿಡಿದು ತೂತು ಬಿದ್ದಿದೆ ಎಂದು ಹೇಳಿ ನೀರು ಪೂರೈಕೆ ನಿಲ್ಲಿಸಿದ್ದಾರೆ. ಇತ್ತ ಇದ್ದ ಟ್ಯಾಂಕರ್‌ ಅನ್ನು ದುರಸ್ತಿ ಪಡಿಸದೇ, ಅತ್ತ ಬೇರೆ ಟ್ಯಾಂಕರ್‌ನಿಂದ ನೀರು ಪೂರೈಕೆ ಮಾಡದೇ, ಕಾಲುವೆ ಯಲ್ಲಿ ಜಿನುಗುವಕೆಂಪು, ಗೋಡು ಮಣ್ಣು ಮಿಶ್ರಿತ ನೀರನ್ನೇ ಕುಡಿಯುಲು, ಅಡುಗೆಗೆ ಬಳಸುವಂತಹ ಪರಿಸ್ಥಿತಿ ಇದೆ. ಸುಮಾರು 150 ಅಡಿ ಆಳದ ಕಾಲುವೆಯಲ್ಲಿಹಿಟಾಚಿ ಯಂತ್ರಗಳಿಂದ ಮಣ್ಣು ತೆಗೆದು ಅದನ್ನು

ಟಿಪ್ಪರ್‌ಗಳಲ್ಲಿ ಹೊರಗಡೆ ಸಾಗಿಸುವ ಕೆಲಸ ಮಾಡುತ್ತಿರುವ ಈ ಕಾರ್ಮಿಕರು, ಕೆಲಸದ ಸ್ಥಳದಲ್ಲಿ ಗುಡಾರಗಳನ್ನು ಹಾಕಿಕೊಂಡು, ಅಲ್ಲಿಯೇ ಸಿಗುವ ಕಲ್ಲುಗಳನ್ನು ಇಟ್ಟು ಆಹಾರ ಬೇಯಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಕನಿಷ್ಠ ಅವರಿಗೆ ಆಹಾರ ತಯಾರಿಕೆಗೆ ಸೂಕ್ತ ಸಲಕರಣೆಗಳನ್ನು ಒದಗಿಸದಿರುವುದು ವಿಪರ್ಯಾಸವೇ ಸರಿ.

ಭಾಷೆ ಸಮಸ್ಯೆ: ಪಶ್ಚಿಮ ಬಂಗಾಳದಿಂದ ಬಂದಿರುವ ಈ ಕಾರ್ಮಿಕರಿಗೆ ಕನ್ನಡ ಬರುವುದಿಲ್ಲ, ಹೀಗಾಗಿ ಸ್ಥಳೀಯರನ್ನು ಮಾತನಾಡಿಸಿ ಸಹಕಾರಪಡೆಯಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ, ಆಳದ ಕಾಲುವೆಯಲ್ಲಿ ಕೆಲಸಮಾಡುವ ಕಾರಣ, ಕಾರ್ಮಿಕರು ನೀರು, ಇತರೆ ತಿಂಡಿ ತಿನಿಸು ಖರೀದಿಗೆ ಪದೇ ಪದೆ ಅಂಗಡಿ ಬಳಿಬರುವುದು ಕಷ್ಟದ ಕೆಲಸ. ಹೀಗಾಗಿ ಕಾರ್ಮಿಕರಿಗೆಅವರು ಕೆಲಸ ಮಾಡುವ ಜಾಗಕ್ಕೆ ಸೂಕ್ತ ಸೌಲಭ್ಯ ಒದಗಿಸುವ ವ್ಯವಸ್ಥೆ ಗುತ್ತಿಗೆದಾರರು ಮಾಡಬೇಕಿದೆ. ಬಯಲು ಸೀಮೆಯ ಜನರಿಗೆ ಕೋಟ್ಯಂತರ ರೂ.ವೆಚ್ಚದಲ್ಲಿ ನೀರು ಪೂರೈಸಲು ನಡೆಸುತ್ತಿರುವ ಈ ಕಾಮಗಾರಿ ಮಹತ್ವದ್ದು. ಆದರೆ, ಆ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರಿಗೆ ಶುದ್ಧ ನೀರು ಸಿಗದೆಕಲುಷಿತ ನೀರು ಬಳಸುವ ಸ್ಥಿತಿ ಬಂದಿರುವುದು ದುರಂತವೇ ಸರಿ. ಕೂಡಲೇ ಸಂಬಂಧಪಟ್ಟಅಧಿಕಾರಿಗಳು, ಗುತ್ತಿಗೆದಾರರು ಕಾರ್ಮಿಕರಿಗೆಸೌಲಭ್ಯ ಒದಗಿಸುವ ವ್ಯವಸ್ಥೆ ಮಾಡಬೇಕಿದೆ.

 

ಕುಮಾರಸ್ವಾಮಿ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.