ಎತ್ತಿನಹೊಳೆ ಯೋಜನೆ ಜಮೀನು ಕೊಟ್ಟ ರೈತರು ಪರಿಹಾರ ಕೇಳಿದರೆ ಪೊಲೀಸರಿಗೆ ದೂರು ನೀಡ್ತಾರೆ


Team Udayavani, Sep 17, 2020, 12:40 PM IST

ಎತ್ತಿನಹೊಳೆ ಯೋಜನೆ ಜಮೀನು ಕೊಟ್ಟ ರೈತರು ಪರಿಹಾರ ಕೇಳಿದರೆ ಪೊಲೀಸರಿಗೆ ದೂರು ನೀಡ್ತಾರೆ

ಸಕಲೇಶಪುರ: ಎತ್ತಿನಹೊಳೆ ಯೋಜನೆಗಾಗಿ ಜಮೀನು ಕೊಟ್ಟ ರೈತರು ಪರಿಹಾರ ಕೇಳಿದ್ದಕ್ಕೆ ಯೋಜನೆ ಅಧಿಕಾರಿಗಳು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಐವರ ಮೇಲೆ ದೂರು ದಾಖಲಿಸಿರುವ ಘಟನೆ ನಡೆದಿದೆ.

ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಗಾಗಿ ಸುರಂಗ ಮಾರ್ಗ ಮಾಡಲು ಕಳೆದ 3 ವರ್ಷದ ಹಿಂದೆ ಕಾಮಗಾರಿ ಆರಂಭಿಸಲಾಗಿದೆ. ಗುತ್ತಿಗೆ ಪಡೆದಿರುವ ಕಂಪನಿಯವರು ರೈತರಿಂದ ಸ್ವಾಧೀನಕ್ಕೆ ಪಡೆದ ಭೂಮಿಗೆ ತಾತ್ಕಾಲಿಕವಾಗಿ 10,000 ರೂ., 20,000 ರೂ.ನಂತೆ ಗುಡ್‌ ವಿಲ್‌ ಹಣ ನೀಡಿ ಕಾಮಗಾರಿ ಆರಂಭಿಸಿದ್ದಾರೆ ಎಂದು ಹೇಳಿದರು.

ಪ್ರತಿದೂರು ದಾಖಲು: ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ರೈತರು, ಪರಿಹಾರ ಇಂದು ಸಿಗುತ್ತೆ, ನಾಳೆ ಸಿಗಬಹುದು ಎಂದು ಕಳೆದ 3 ವರ್ಷಗಳಿಂದ ಕಾಯುತ್ತಿದ್ದಾರೆ. ಆದರೆ, ಪರಿಹಾರ ಮಾತ್ರ ಸಿಕ್ಕಿಲ್ಲ. ಇದೀಗ ಸುರಂಗ ಮಾರ್ಗದ ಕಾಮಗಾರಿಮುಗಿಯುತ್ತ ಬಂದಿದೆ. ಇದರಿಂದ ಆತಂಕಗೊಂಡ ಸಂತ್ರಸ್ತರು ಪರಿಹಾರದ ಹಣ ನೀಡುವವರೆಗೂ ಕೆಲಸ ಮಾಡಲು ಬಿಡುವುದಿಲ್ಲ ಎಂದು ಅಡ್ಡಿ ಪಡಿಸಿದ್ದಾರೆ. ಇದನ್ನೇ ನೆಪವಾಗಿಟ್ಟುಕೊಂಡ ಯೋಜನೆಯ ಅಧಿಕಾರಿಗಳು, ಐವರು ಸಂತ್ರಸ್ತರ ಮೇಲೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ಸಹ ಯೋಜನೆಯ ಅಧಿಕಾರಿಗಳ ಮೇಲೆ ಪ್ರತಿದೂರು ದಾಖಲಿಸಿದ್ದಾರೆ.

ಪರಿಹಾರ ನೀಡಿಲ್ಲ: ಈ ಸಂದರ್ಭದಲ್ಲಿ ಕಾಂಗ್ರೆಸ್‌ ಯುವ ಮುಖಂಡ ಭುವನಾಕ್ಷ ಮಾತನಾಡಿ, ಬಯಲು ಸೀಮೆ ಜನರ ಕುಡಿಯುವ ನೀರಿನ ಬವಣೆ ನೀಗಿಸಲು ಕೈಗೊಳ್ಳಲಾಗಿರುವ ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ, ಕಾಮಗಾರಿ ಪ್ರಾರಂಭವಾಗಿ 3 ವರ್ಷಗಳಾಗುತ್ತ ಬಂದಿದ್ದರೂ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ದೂರಿದರು.

ಉಗ್ರ ಪ್ರತಿಭಟನೆ: ಇದಕ್ಕೆ ಸೊಪ್ಪು ಹಾಕದ ಯೋಜನೆ ಅಧಿಕಾರಿಗಳು ರೈತರ ವಿರೋಧದ ನಡುವೆ ಕಾಮಗಾರಿ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಪರಿಹಾರ ನೀಡುವವರೆಗೂ ಕಾಮಗಾರಿ ಆರಂಭಿಸುವುದು ಬೇಡ ಎಂದಿದ್ದೇವೆ. ಇದನ್ನು ವಿರೋಧಿಸಿದ್ದಕ್ಕೆ ಐವರು ಸಂತ್ರಸ್ತರ ಮೇಲೆ ಯೋಜನೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಬಹುತೇಕ ಸಂತ್ರಸ್ತರು ಬಡ ದಲಿತರಾಗಿದ್ದು, ಕೂಡಲೇ ದೂರನ್ನು ಹಿಂಪಡೆದು ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಸಂತ್ರಸ್ತರಿಂದ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ. ಈ ಕುರಿತು ಡಿವೈಎಸ್‌ಪಿ ಗೋಪಿ ಸೋಮವಾರ ಕಚೇರಿಗೆ ಬಂದು ಚರ್ಚೆ ಮಾಡಲು ಹೇಳಿದ್ದಾರೆ ಎಂದು ಹೇಳಿದರು. ಈ ವೇಳೆ ಸಂತ್ರಸ್ತರಾದ ನಾಗರಾಜ್‌, ಮಧುಕುಮಾರ್‌, ಹುಚ್ಚಯ್ಯ, ವಿರೇಶ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.