ಬಿಡಾಡಿ ದನಗಳ ಹಾವಳಿಗೆ ಜನತೆ ಹೈರಾಣ

ಹಟ್ಟಿ ಪಟ್ಟಣದಲ್ಲಿವೆ ಬಿಡಾಡಿ ದನಗಳ ಮೂರ್‍ನಾಲ್ಕು ಗುಂಪು ಒಂದೊಂದು ಗುಂಪಿನಲ್ಲಿ 25ರಿಂದ 30 ಜಾನುವಾರು

Team Udayavani, Nov 27, 2019, 12:06 PM IST

27-November-7

ಹಟ್ಟಿ ಚಿನ್ನದ ಗಣಿ: ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಇದರಿಂದ ಜನ, ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಪಟ್ಟಣದಲ್ಲಿ ಬಿಡಾಡಿ ದನಗಳ ಮೂರ್‍ನಾಲ್ಕು ಗುಂಪು ಇದ್ದು, ಒಂದು ಗುಂಪಿನಲ್ಲಿ 20ರಿಂದ 25 ದನಗಳಿವೆ. ಈ ಗುಂಪುಗಳು ಪಟ್ಟಣದ ಪ್ರಮುಖ ರಸ್ತೆ, ಬಡಾವಣೆಗಳಲ್ಲಿ ಠಿಕಾಣಿ ಹೂಡುತ್ತಿವೆ. ಕೆಲವೊಮ್ಮೆ ರಸ್ತೆಯಲ್ಲೇ ಮಲಗುವುದರಿಂದ ಜನ, ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ.

ಕಾಕಾನಗರದಿಂದ, ಪಾಮನಕೆಲ್ಲೂರು ಕ್ರಾಸ್‌ವರೆಗಿನ ಅಂದಾಜು 2 ಕಿ.ಮೀ. ದ್ವಿಪಥ ರಸ್ತೆ ಇದೆ. ಈ ರಸ್ತೆಯಲ್ಲಿ ಬಿಡಾಡಿ ದನಗಳು ಠಿಕಾಣಿ ಹೂಡುತ್ತಿವೆ. ರಸ್ತೆಯಲ್ಲೇ ಮಲಗುತ್ತಿವೆ. ವಾಹನ ಸವಾರರು ಎಷ್ಟೇ ಹಾರ್ನ್ ಹಾಕಿದರೂ ಅತ್ತಿತ್ತ ಸರಿಯುವುದಿಲ್ಲ. ಇದರಿಂದ ಸಂಚಾರಕ್ಕೆ ಅಡಚಣೆ ಆಗುತ್ತಿದೆ.

ಪಟ್ಟಣದ ಬಸ್‌ ನಿಲ್ದಾಣ, ದಾಸಪ್ಪಗೌಡ ಕಾಂಪ್ಲೆಕ್ಸ್‌, ಕೋಠಾ ಕ್ರಾಸ್‌, ಕಾಕಾನಗರ, ಕ್ಯಾಂಪ್‌ ಬಸ್‌ ನಿಲ್ದಾಣದಲ್ಲಿ ದನಗಳ ಗುಂಪು ರಸ್ತೆಯೇ ಮೇಲೆಯೇ ಇರುತ್ತದೆ. ಚಿನ್ನದ ಗಣಿ ಕ್ರೀಡಾಂಗಣಕ್ಕೆ ತೆರಳುವ ದನಗಳು ಅಲ್ಲಿಯೇ ಆಶ್ರಯ ಪಡೆಯುತ್ತಿವೆ. ಇಷ್ಟು ದಿನಗಳ ಕಾಲ ಎಲ್ಲಿದ್ದವೊ ಗೊತ್ತಿಲ್ಲ, ಆದರೆ ಕಳೆದ ವಾರದಿಂದ ದನಗಳು ರಸ್ತೆಯಲ್ಲಿಯೇ ಮಲಗುವುದು, ನಿಲ್ಲುವುದು ಮಾಡುತ್ತಿವೆ. ಇದರಿಂದ ಚಿನ್ನದ ಗಣಿಗೆ ವಾಹನಗಳಲ್ಲಿ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ, ನೌಕರರಿಗೆ ಸಮಸ್ಯೆ ಆಗುತ್ತಿದೆ.

ದನಗಳ ಕದನ: ಕೆಲವೊಮ್ಮೆ ದನಗಳ ಮಧ್ಯೆ ಕದನ ನಡೆಯುವುದರಿಂದ ವೇಗವಾಗಿ ಅತ್ತಿತ್ತ ಓಡುತ್ತವೆ. ಇಂತಹ ವೇಳೆ ಬೈಕ್‌ ಸವಾರರು, ಪಾದಚಾರಿಗಳಿಗೆ ಹಾದ ಉದಾಹರಣೆಗಳಿವೆ. ಬೈಕ್‌ ಸವಾರರು ದನಗಳ ಕಾದಾಟದ ಸಂದರ್ಭದಲ್ಲಿ ಯಾವ ಕಡೆ ತೆರಳಬೇಕೆಂದು ಯೋಚಿಸುವಾಗಲೆ ವಾಹಗಳ ಮೇಲೆ ಬಂದು ಬಿಡುತ್ತವೆ. ಇದರಿಂದ ವಾಹನಗಳು ಜಖಂಗೊಂಡರೆ, ಸವಾರರು ಗಾಯಗೊಂಡ ಘಟನೆಗಳು ನಡೆದಿವೆ. ಪಟ್ಟಣದಲ್ಲಿರುವ ದನಗಳಿಗೆ ಮಾಲೀಕರು ಇದ್ದಾರೆ. ಆದರೆ ಸಾಕಿದ ಜಾನುವಾರುಗಳನ್ನು ಅಡವಿಗೆ ಹೊಡೆದುಕೊಂಡು ಹೋಗಿ ಮೇಯಿಸುವ ಬದಲಿಗೆ, ಇಲ್ಲವೇ ಮನೆಯಲ್ಲಿ ಕಟ್ಟುವ ಬದಲಿಗೆ ರೋಡಿಗೆ ಬಿಟ್ಟಿದ್ದಾರೆ. ಶಾಲಾ ಮಕ್ಕಳು ರಸ್ತೆಯಲ್ಲಿ ಭಯದಿಂದ ಸಂಚರಿಸುವಂತಾಗಿದೆ. ಕೂಡಲೇ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜಾನುವಾರುಗಳನ್ನು ಕಟ್ಟಿ ಹಾಕಲು ಮಾಲೀಕರಿಗೆ ಸೂಚಿಸಬೇಕು. ಇಲ್ಲವೇ ಅವುಗಳನ್ನು ವಶಕ್ಕೆ ಪಡೆದು ಗೋಶಾಲೆಗೆ ಸಾಗಿಸಬೇಕೆಂದು ಮುನ್ನಾ ಮೆಕ್ಯಾನಿಕ್‌ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

ದನಗಳನ್ನು ರಸ್ತೆಗೆ ಬಿಡದಂತೆ ಮಾಲೀಕರು ಎಚ್ಚರ ವಹಿಸಬೇಕು. ರಸ್ತೆಗೆ ಬಿಡದಂತೆ ಸೂಚಿಸಿದರೂ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಬಿಡಾಡಿ ದನಗಳನ್ನು ಹಿಡಿಯುವ ಕಾರ್ಯ ಕೈಗೊಳ್ಳಲಾಗುವುದು.
ದುರುಗಪ್ಪ ಹಗೆದಾಳ,
ಮುಖ್ಯಾಧಿಕಾರಿ ಹಟ್ಟಿ ಪಟ್ಟಣ ಪಂಚಾಯಿತಿ

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.