ಅವರಿಗೆ ಖುಷಿ..ಇವರಿಗೆ ಕಸಿವಿಸಿ..


Team Udayavani, Oct 11, 2019, 6:12 PM IST

Udayavani Kannada Newspaper

„ಎಚ್‌.ಕೆ. ನಟರಾಜ
ಹಾವೇರಿ: ರಾಜ್ಯದ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸಲು ಕಾರಣರಾದ ಅನರ್ಹ ಶಾಸಕರನ್ನು ಓಲೈಸಲು ಹಾಗೂ ಅನರ್ಹ ಶಾಸಕ ಕ್ಷೇತ್ರದಲ್ಲಿರುವ ಪಕ್ಷದ ಮಾಜಿ ಶಾಸಕರನ್ನು ಸಮಾಧಾನ ಪಡಿಸಲು ಸರ್ಕಾರ, ನಿಗಮ-ಮಂಡಳಿ ಸ್ಥಾನಮಾನ ಹಂಚಿಕೆ ಮಾಡಿದ್ದು, ಇದಕ್ಕೆ ಹಿರೇಕೆರೂರು ಕ್ಷೇತ್ರದಲ್ಲಿ ಮಿಶ್ರ ಪತ್ರಿಕ್ರಿಯೆ ವ್ಯಕ್ತವಾಗಿದೆ.

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಗುರಿಯೊಂದಿಗೆ ಸರ್ಕಾರ, ಅನರ್ಹ ಶಾಸಕ ಬಿ.ಸಿ. ಪಾಟೀಲ ಅವರ ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಶಾಸಕ ಯು.ಬಿ. ಬಣಕಾರ ಅವರಿಗೆ ಕೃಷಿ ಉತ್ಪನ್ನ ಮತ್ತು ಸಂಸ್ಕರಣ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ.

ತನ್ಮೂಲಕ ಅನರ್ಹ ಶಾಸಕ ಬಿ.ಸಿ. ಪಾಟೀಲರಿಗೆ ಉಪಚುನಾವಣೆಯಲ್ಲಿ ಟಿಕೆಟ್‌ ಖಚಿತ ಎಂಬ ಸಂದೇಶ ನೀಡಿದೆ. ಆದರೆ, ಸರ್ಕಾರದ ಈ ನಿರ್ಧಾರವನ್ನು ಬಿ.ಸಿ. ಪಾಟೀಲ ಬೆಂಬಲಿಗರು ಮಾತ್ರ ಸ್ವಾಗತಿಸುತ್ತಿದ್ದು, ಮಾಜಿ ಶಾಸಕ ಯು.ಬಿ. ಬಣಕಾರ ಬೆಂಬಲಿಗರು ತಿರಸ್ಕರಿಸುತ್ತಿರುವುದು ಉಭಯ ನಾಯಕರನ್ನು ಗೊಂದಲದಲ್ಲಿ ಸಿಲುಕಿಸಿದಂತಾಗಿದೆ.

ನಿಗಮದ ಅಧಿಕಾರ ನೀಡಿ ಅನರ್ಹರನ್ನು ಓಲೈಸುವ, ಉಪ ಚುನಾವಣೆಯ ಟಿಕೆಟ್‌ ಆಕಾಂಕ್ಷಿ ಮುಖಂಡರನ್ನು ಸಂತೈಸುವ ಸರ್ಕಾರದ ಈ ಅಧಿಕಾರ ಹಂಚಿಕೆಯ ನಿರ್ಧಾರ, ಬಿ.ಸಿ. ಪಾಟೀಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಖುಷಿ ಮೂಡಿಸಿದೆ.

ಮುಂದಿನ ಉಪ ಚುನಾವಣೆಯಲ್ಲಿ ಬಿ.ಸಿ. ಪಾಟೀಲರಿಗೆ ಟಿಕೆಟ್‌ ಪಕ್ಕಾ ಎಂಬ ಸಂಭ್ರಮ ಕಾರ್ಯಕರ್ತರಲ್ಲಿ ಮನೆ ಮಾಡಿದೆ. ಆದರೆ, ಮಾಜಿ ಶಾಸಕ ಯು.ಬಿ. ಬಣಕಾರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಾತ್ರ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ತಮ್ಮ ನಾಯಕನಿಗೆ ಮುಂದಿನ
ಉಪ ಚುನಾವಣೆಯಲ್ಲಿ ಟಿಕೆಟ್‌ ತಪ್ಪಿಸುವ ತಂತ್ರ ಇದಾಗಿದೆ ಎಂಬ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಯಾವುದೇ ಕಾರಣಕ್ಕೂ ನಿಗಮದ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳಬಾರದೆಂದು ಕಾರ್ಯಕರ್ತರು ಯು.ಬಿ. ಬಣಕಾರ ಅವರ ಮೇಲೆ ಭಾರಿ ಒತ್ತಡ ಹೇರುತ್ತಿದ್ದಾರೆ. ಬದಲಾಗುವ ರಾಜಕೀಯ ಸ್ಥಿತ್ಯಂತರ ಏನೇ ಇದ್ದರೂ ಉಪ ಚುನಾವಣೆಯಲ್ಲಿ ಯು.ಬಿ. ಬಣಕಾರ ಸ್ಪರ್ಧೆಗಿಳಿಯಲೇ ಬೇಕು. ಯು.ಬಿ. ಬಣಕಾರ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಕೊಡಲೇಬೇಕು.

ಒಂದು ವೇಳೆ ಕೊಡದಿದ್ದರೆ ಪಕ್ಷೇತರವಾಗಿ ಆದರೂ ಸ್ಪರ್ಧಿಸಿ, ಗೆದ್ದು ಕ್ಷೇತ್ರದಲ್ಲಿ ಹಿಡಿತ ಸಾಧಿಸಬೇಕು. ಸರ್ಕಾರದ ಬೇರೆ ಯಾವುದೇ ಅಧಿಕಾರ ಆಮಿಷಕ್ಕೆ ಒಳಗಾಗಬಾರದೆಂದು ಕಾರ್ಯಕರ್ತರು ಈ ಮೊದಲಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದು, ಇದಕ್ಕಾಗಿ ಬೃಹತ್‌ ಪ್ರತಿಭಟನೆಯನ್ನೂ ಮಾಡಿ ತಮ್ಮ ಒತ್ತಡ ಬಹಿರಂಗಪಡಿಸಿದ್ದರು. ಈ ಒತ್ತಡ ನಡುವೆಯೂ ಸರ್ಕಾರ ಯು.ಬಿ. ಬಣಕಾರ ಅವರಿಗೆ ನಿಗಮದ ಅಧಿಕಾರ ನೀಡಿ ಸಮಾಧಾನ ಪಡಿಸಲು ಮುಂದಾಗಿರುವುದಕ್ಕೆ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಕೆಂಡ ಕಾರುತ್ತಿದ್ದಾರೆ.

ಒಟ್ಟಾರೆ ಅಧಿಕಾರ ಹಂಚಿಕೆಯೊಂದಿಗೆ ಎರಡು ಗುರಿ ಈಡೇರಿಸಿಕೊಳ್ಳುವ ಸರ್ಕಾರದ ಈ ನಿರ್ಧಾರ, ಹಿರೇಕೆರೂರು ಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೋ, ಇಲ್ಲವೇ ವಿಫಲವಾಗುತ್ತೋ ಎಂಬುದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.