ಫಲವತ್ತಾದ ಮಣ್ಣು ಕೊಚ್ಚಿ ಹೋಯ್ತು!


Team Udayavani, Aug 29, 2019, 3:00 PM IST

29-Agust-28

ಎಚ್.ಕೆ. ನಟರಾಜ
ಹಾವೇರಿ:
ಜಿಲ್ಲೆಯಲ್ಲಿ ಇತ್ತೀಚೆಗೆ ಉಲ್ಬಣಿಸಿದ ನದಿಗಳ ಪ್ರವಾಹದಿಂದ ಬರೋಬರಿ 13267 ಹೆಕ್ಟೇರ್‌ ಕೃಷಿ ಪ್ರದೇಶದ ಫಲವತ್ತಾದ ಮಣ್ಣು ಹಾಳಾಗಿದ್ದು, ಅಂದಾಜು 36.38ಕೋಟಿ ರೂ.ಗಳಷ್ಟು ಹಾನಿ ಸಂಭವಿಸಿದೆ.

ಕೃಷಿ ಭೂಮಿಯಲ್ಲಿ ಮಣ್ಣು ಸಂಗ್ರಹ ಹಾಗೂ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದ್ದರಿಂದ ಜಿಲ್ಲೆಯಲ್ಲಿ ಶಿಗ್ಗಾವಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 7986 ಹೆಕ್ಟೇರ್‌ ಪ್ರದೇಶದ ಮಣ್ಣು ಹಾಳಾಗಿ, 23.68 ಕೋಟಿ ರೂ.ಗಳಷ್ಟು ಹಾನಿ ಸಂಭವಿಸಿದೆ. ಉಳಿದಂತೆ ಹಾವೇರಿ ತಾಲೂಕಿನಲ್ಲಿ 1974 ಹೆಕ್ಟೇರ್‌ (445ಲಕ್ಷ ರೂ.ಗಳಷ್ಟು ಹಾನಿ), ರಾಣಿಬೆನ್ನೂರು ತಾಲೂಕಿನಲ್ಲಿ 488 ಹೆಕ್ಟೇರ್‌ (59.54ಲಕ್ಷ ರೂ. ಗಳಷ್ಟು ಹಾನಿ), ಹಿರೇಕೆರೂರು ತಾಲೂಕಿನಲ್ಲಿ 248 ಹೆಕ್ಟೇರ್‌ (30.26ಲಕ್ಷ ರೂ. ಗಳಷ್ಟು ಹಾನಿ), ಸವಣೂರು ತಾಲೂಕಿನಲ್ಲಿ 1199 ಹೆಕ್ಟೇರ್‌ (377ಲಕ್ಷ ರೂ. ಗಳಷ್ಟು ಹಾನಿ), ಹಾನಗಲ್ಲ ತಾಲೂಕಿನಲ್ಲಿ 1372 ಹೆಕ್ಟೇರ್‌ (356ಲಕ್ಷ ರೂ. ಗಳಷ್ಟು ಹಾನಿ) ಹಾನಿ ಸಂಭವಿಸಿದೆ.

ಜಿಲ್ಲಾಡಳಿತ ಸಲ್ಲಿಸಿದ ಮೊದಲ ವರದಿಯಲ್ಲಿ ನೆರೆಯಿಂದ ಮಣ್ಣು, ಮರಳು ಕೊಚ್ಚಿಬಂದು 400 ಹೆಕ್ಟೇರ್‌ ಕೃಷಿ ಭೂಮಿ ಹಾಳಾಗಿದೆ. ನೆರೆಯಿಂದ ನದಿ ಪಾತ್ರ ಬದಲಾಗಿ ಅಪಾರ ಪ್ರಮಾಣದ ಮಣ್ಣು ಕೊಚ್ಚಿ ಹೋಗಿ 165 ಹೆಕ್ಟೇರ್‌ ಪ್ರದೇಶದ ಮಣ್ಣು ಹಾಳಾಗಿದೆ. ಇದರಿಂದಾಗಿ ಒಟ್ಟು 1.10 ಕೋಟಿ ರೂ.ಗಳಷ್ಟು ಹಾನಿಯಾಗಿದೆ ಎಂದು ವರದಿ ಸಿದ್ಧಪಡಿಸಿತ್ತು. ಜನಪ್ರತಿನಿಧಿಗಳ ಕಟ್ಟುನಿಟ್ಟಿನ ಆದೇಶ ಪಾಲನೆ ಬಳಿಕ ನಡೆಸಿದ ಮರು ಸಮೀಕ್ಷೆಯಿಂದ ಈಗ ಕೃಷಿ ಭೂಮಿ ಹಾನಿ ಪ್ರಮಾಣ 13267ಹೆಕ್ಟೇರ್‌ಗೆ ಏರಿದೆ.

ರಾಷ್ಟ್ರೀಯ ಪ್ರಾಕೃತಿಕ ವಿಪತ್ತು ನಿಧಿಯಡಿ ಕೃಷಿ ಭೂಮಿಯಲ್ಲಿ ನೆರೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು, ಮರಳು ಸಂಗ್ರಹವಾದರೆ ಹೆಕ್ಟೇರ್‌ಗೆ 12,200ರೂ. ಹಾಗೂ ನದಿ ಉಕ್ಕಿ ತನ್ನ ಪಾತ್ರ ಬದಲಾಯಿಸಿ ಹಿಗ್ಗಿಸಿಕೊಂಡು ಮಣ್ಣು ಕೊಚ್ಚಿ ಹೋದರೆ ಹೆಕ್ಟೇರ್‌ಗೆ 37,500 ರೂ. ಪರಿಹಾರ ಕೊಡಲು ಅವಕಾಶವಿದೆ. ಕೃಷಿ ಇಲಾಖೆ ಸಮೀಕ್ಷೆ ಪ್ರಕಾರ ಜಿಲ್ಲೆಗೆ 36.48 ಕೋಟಿ ರೂ.ಗಳಷ್ಟು ಕೃಷಿ ಭೂಮಿಯ ಮಣ್ಣು ಪರಿಹಾರ ಸಿಗುವ ನಿರೀಕ್ಷೆ ಇದೆ.

ಜಿಲ್ಲೆಯಲ್ಲಿ ನೆರೆಯಿಂದ ಕೋಟ್ಯಂತರ ರೂ. ಮೌಲ್ಯದ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ ಅಪಾರ ಹಾನಿಯಾಗಿದ್ದು, ರೈತರು ಹೆಚ್ಚಿನ ಪರಿಹಾರ ನಿರೀಕ್ಷೆಯಲ್ಲಿದ್ದಾರೆ.

ಸರ್ಕಾರಕ್ಕೆ ವರದಿ..
ಮೊದಲ ವರದಿ ವೇಳೆ ಪ್ರಾಥಮಿಕ ಸಮೀಕ್ಷಾ ವರದಿ ನೀಡಲಾಗಿತ್ತು. ಈಗ ಮರು ಸಮೀಕ್ಷೆ ಮಾಡಲಾಗಿದ್ದು ಜಿಲ್ಲೆಯಲ್ಲಿ 13267 ಹೆಕ್ಟೇರ್‌ ಕೃಷಿ ಪ್ರದೇಶದ ಮಣ್ಣು ಹಾಳಾಗಿ, ಅಂದಾಜು 36.38ಕೋಟಿಗಳಷ್ಟು ಹಾನಿಯಾಗಿರುವ ಬಗ್ಗೆ ವರದಿ ತಯಾರಿಸಲಾಗಿದೆ. ಸರ್ಕಾರಕ್ಕೆ ಹಾನಿ ವರದಿ ಸಲ್ಲಿಸಲಾಗಿದೆ.
ಬಿ. ಮಂಜುನಾಥ
 ಜಂಟಿ ನಿರ್ದೇಶಕರು, ಕೃಷಿ ಇಲಾಖೆ
ಮಣ್ಣು ಹಾನಿ ದೊಡ್ಡ ನಷ್ಟ.
ನೆರೆಯಿಂದಾಗಬಹುದಾದ ಮಣ್ಣು ಹಾನಿ ದೊಡ್ಡ ನಷ್ಟವಾಗಿದೆ. ಕೃಷಿ ಭೂಮಿಯ ಫಲವತ್ತಾದ ಪದರು ಕೊಚ್ಚಿ ಕೊಂಡು ಹೋದರೆ ಅದು ಮೊದಲಿನಂತಾಗಲು ಹಲವು ವರ್ಷಗಳೇ ಬೇಕಾಗುತ್ತದೆ. ಜಿಲ್ಲೆಯಲ್ಲಿ ನೆರೆಯಿಂದ ನದಿ ಪಾತ್ರ ಹಿಗ್ಗಿ ಅಪಾರ ಪ್ರಮಾಣದ ಮಣ್ಣು ಕೊಚ್ಚಿ ಹೋಗಿದೆ. ವಿಪತ್ತು ನಿಯಲ್ಲಿ ಮಣ್ಣು ಹಾನಿಗೆ ಪರಿಹಾರ ಕೊಡಲು ಅವಕಾಶವಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಬಸವರಾಜ ಬೊಮ್ಮಾಯಿ,
 ಗೃಹ ಸಚಿವರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.