ಉತ್ಸಾಹದಿಂದ ಮತದಾನ ಮಾಡಿದ ಮತದಾರರು
Team Udayavani, Apr 24, 2019, 4:46 PM IST
ಹಾನಗಲ್ಲ: ಮತದಾನಕ್ಕೆ ಆಗಮಿಸಿದ ವಿಕಲಚೇತನ ರಮೇಶ ಕಮಡೊಳ್ಳಿ
ಹಾನಗಲ್ಲ: ಲೋಕಸಭೆ ಚುನಾವಣೆ ಮತದಾನಕ್ಕಾಗಿ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹ, ವೃದ್ಧರು, ವಿಕಲಚೇತನರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡು ತಮಗೆ ಯೋಗ್ಯವೆನಿಸಿದ ಅಭ್ಯರ್ಥಿಗೆ ಮತ ನೀಡಿ ಸಂಭ್ರಮಿಸಿದರು.
ಮಂಗಳವಾರ ಬೆಳಗ್ಗೆ 7ಕ್ಕೆ ಆರಂಭವಾದ ಮತದಾನ ಮಧ್ಯಾಹ್ನ ತುಸು ನಿಧಾನ ಗತಿಯಲ್ಲೇ ಸಾಗಿತ್ತು. ಮಧ್ಯಾಹ್ನ 2ಗಂಟೆ ಹೊತ್ತಿಗೆ ಶೇ.50 ಮತದಾನವಾಗಿತ್ತು. ಪಟ್ಟಣಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಮತದಾನ ನಡೆದಿರುವುದು ಕಂಡು ಬಂದಿತು. ಸಂಜೆ ಹೊತ್ತಿಗೆ ಶೇ.60 ರಷ್ಟಾಗಿತ್ತು.
ತಾಲೂಕಿನಾದ್ಯಂತ ಪೊಲೀಸ್ ಇಲಾಖೆ ಭದ್ರತೆ ಕಲ್ಪಿಸಿತ್ತು. ಎಲ್ಲಿಯೂ ಮತಯಂತ್ರಗಳು ಕೈಕೊಡದೇ ಮತದಾನ ಸುಗಮವಾಗಿ ಸಾಗಿತು. ವಿಕಲಚೇತನರಿಗೆ ವ್ಯವಸ್ಥೆಗೊಳಿಸಿದ್ದ ಸೌಲಭ್ಯಗಳನ್ನು ಸ್ಕೌಟ್-ಗೈಡ್ಸ್ಗಳ ಸಹಾಯಕರಿಂದ ವ್ಹೀಲ್ ಚೇರ್ಗಳಲ್ಲಿ ಆಗಮಿಸಿ ಮತದಾನ ಮಾಡಿದರು.
ಮಾತಿನ ಚಕಮಕಿ: ಪಟ್ಟಣದ ಜನತಾ ಬಾಲಕಿಯರ ಪ್ರೌಢಶಾಲೆ ಮತಗಟ್ಟೆಗೆ ಶಾಸಕ ಸಿ.ಎಂ. ಉದಾಸಿ ಮತದಾನ ಮಾಡಲು ಆಗಮಿಸಿದ್ದ ಸಂದರ್ಭದಲ್ಲಿ, ವ್ಯಕ್ತಿಯೋರ್ವ ಗುರುತಿನ ಚೀಟಿ ತರಲಿಲ್ಲವಾದ್ದರಿಂದ ಮತಗಟ್ಟೆ ಅಧಿಕಾರಿ ಮತ ನೀಡಲು ನಿರಾಕರಿಸಿದರು. ಮಧ್ಯೆ ಪ್ರವೇಶಿಸಿದ ಸಿ.ಎಂ. ಉದಾಸಿ ಅಧಿಕಾರಿಗಳಿಗೆ ಚುನಾವಣೆ ಆಯೋಗ ನೀಡಿರುವ ಮತದಾರರ ಮಾಹಿತಿ ಚೀಟಿ ಪರಿಗಣಿಸುವಂತೆ ಮನವಿ ಮಾಡಿದರು.
ಇದಕ್ಕೊಪ್ಪದ ಮತಗಟ್ಟೆ ಅಧಿಕಾರಿ ಯಾವುದಾದರೂ ಗುರುತಿನ ಚೀಟಿ ತರಲೇಬೇಕೆಂದು ಪಟ್ಟು ಹಿಡಿದರು. ಈ ಸಮಯದಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ಶಾಸಕರು ತಮ್ಮ ಗುರುತಿನ ಚೀಟಿ ತೋರಿಸಿ ಮತದಾನ ಮಾಡಿ, ಉಳಿದ ಕೆಲವು ಮತದಾರರಿಗೂ ಚುನಾವಣೆ ಆಯೋಗ ನೀಡಿರುವ ಚೀಟಿ ಪರಿಗಣಿಸುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ