ಗುದ್ದಲೀಶ್ವರ ಸ್ವಾಮಿಗಳ 120ನೇ ಯಾತ್ರಾ ಮಹೋತ್ಸವ


Team Udayavani, Jan 6, 2020, 2:40 PM IST

hv-tdy-3

ಗುತ್ತಲ: ಶ್ರೀ ಗುದ್ದಲೀಶ್ವರ ಸ್ವಾಮಿಗಳವರ 120ನೇ ಯಾತ್ರಾ ಮಹೋತ್ಸವವು ಹೊಸರಿತ್ತಿ ಗ್ರಾಮದಲ್ಲಿ ಜ. 6ರಿಂದ 15ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿವೆ ಎಂದು ಹೊಸರಿತ್ತಿಯ ಪೀಠದ 5ನೇ ಪೀಠಾಧಿಧ್ಯಕ್ಷರಾದ ಗುದ್ದಲೀಶ್ವರ ಮಠದ ಶ್ರೀ ಗುದ್ದಲೀಶ್ವರ ಸ್ವಾಮೀಜಿ ಹೇಳಿದರು.

ಹೊಸರಿತ್ತಿಯ ಗ್ರಾಮದ ಗುದ್ದಲೀಶ್ವರ ಮಠದಲ್ಲಿ ರವಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರು ಗದಿಗೆಪ್ಪಜ್ಜಯ್ಯನವರ ಸಾನ್ನಿಧ್ಯದಲ್ಲಿ ಯಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರಗಲಿದ್ದು, ಜ. 6ರಂದು ಬೆಳಗ್ಗೆ 9 ಗಂಟೆಗೆ ಗಂಗಾಪೂಜೆ ನಂತರ ಚೌಡೇಶ್ವರಿ ದೇವಿಗೆ ಮತ್ತು ಮುತ್ತೆ$çದೆಯರಿಗೆ ಉಡಿ ತುಂಬುವ ಕಾರ್ಯಕ್ರಮ. 10ಗಂಟೆಗೆ ದುಂಡಸಿ ವಿರಕ್ತ ಮಠದ ಕುಮಾರ ಸ್ವಾಮೀಜಿ, ಬೆಳ್ಳಟ್ಟಿ ರಾಮಲಿಂಗೇಶ್ವರಮಠದ ಬಸವರಾಜ ಸ್ವಾಮೀಜಿ, ಲಕ್ಕುಂಡಿ ಅಲ್ಲಮಪ್ರಭು ದೇವರಮಠದ ಸಿದ್ಧಲಿಂಗ ಸ್ವಾಮೀಜಿ, ದೊಡ್ಡಮೇಟೆಕುರ್ಕೆಯ ಶಶಿಧರ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಸಂಜೆ 4 ಗಂಟೆಗೆ ಹೊಸರಿತ್ತಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಸೇವೆಯ ರೊಟ್ಟಿ ಜಾತ್ರಾ ಉತ್ಸವ, ಸಂಜೆ 6 ಗಂಟೆಗೆ ಕಳಸಾರೋಹಣ, ರಾತ್ರಿ 7 ಗಂಟೆಗೆ ನಾಡೋಜ್‌ ಶ್ರೀಮನ್‌ ಮಹಾರಾಜ ನಿರಂಜನ ಪ್ರಣವ ಸ್ವರೂಪಿ ಜಗದ್ಗುರು ಡಾ| ಅನ್ನದಾನೀಶ್ವರ ಸ್ವಾಮೀಜಿ ಅವರಿಂದ ಯಾತ್ರಾ ಮಹೋತ್ಸವ ಉದ್ಘಾಟನೆಯಾಗಲಿದೆ. 8 ಗಂಟೆಗೆ ಮಕ್ಕಳಗೋಷ್ಠಿ ಹಮ್ಮಿಕೊಂಡಿದ್ದು, ಹತ್ತಿಮತ್ತೂರ ನಿಜಗುಣ ಸ್ವಾಮೀಜಿ ನೇತೃತ್ವವಹಿಸಲಿದ್ದಾರೆ. ಸಮ್ಮುಖ ನೆಗಳೂರ ಗುರುಶಾಂತೇಶ್ವರ ಶಿವಾಚಾರ್ಯರು ವಹಿಸುವರು. ಬಾಲ ಪ್ರತಿಭೆಗಳಾದ ಹೊನ್ನಿಕಾ ಸಂಗಮೇಶ ಪರಗಿ, ಆದಿತ್ಯಾ ಜೋಷಿ, ರುಬಿನಾ ಭಾಗವಹಿಸುವವರು.

ಜ. 7ರ ಮಂಗಳವಾರ ಸಂಜೆ 7ಕ್ಕೆ ನಡೆಯಲಿರುವ ಮಹಿಳಾ ಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸಬಾವಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಬೆಳಗಾವಿ ಖಾರದವೀರಬಸವ ಸ್ವಾಮೀಜಿ ಸಮ್ಮುಖ, ದಳವಾಯಿಮಠದ ಶಿವಕುಮಾರ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಹಾವೇರಿ ಹರಸೂರ ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ತಿಪ್ಪಾಯಿಕೊಪ್ಪದ ಮಹಾಂತ ದೇವರು ಸಾನ್ನಿಧ್ಯ ವಹಿಸಲಿದ್ದಾರೆ.

ಜ. 8ರಂದು ರಾತ್ರಿ 7ಕ್ಕೆ ಕೃಷಿ ಗೋಷ್ಠಿ ನೇತೃತ್ವವನ್ನು ಗುತ್ತಲ ಕಲ್ಮಠದ ಗುರುಸಿದ್ಧ ಸ್ವಾಮೀಜಿ, ತಿಪ್ಪಾಯಿಕೊಪ್ಪದ ವಿರುಪಾಕ್ಷ ಸ್ವಾಮೀಜಿ, ಗುಡ್ಡದ ಆನ್ವೇರಿ ವಿರಕ್ತಮಠದ ಶಿವಯೋಗಿಶ್ವರ ಸ್ವಾಮೀಜಿ, ಹಿರೇಸಿಂದೋಗಿ ಸಚ್ಚಿದಾನಂದ ಸ್ವಾಮೀಜಿ, ಸದಾಶಿವಪೇಟೆಯ ಗದಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಪೊಲೀಸ್‌ ಇಲಾಖೆಯ ಡಿಸಿಪಿ ರವಿ ಡಿ. ಚನ್ನಣ್ಣನವರ, ಡಾ| ಸಿ. ಸೋಮಶೇಖರ ಪಾಲ್ಗೊಳ್ಳಲಿದ್ದಾರೆ. ಜ. 9 ರಂದು ಚನ್ನೂರಿನ ಶ್ರೀಮಠದಲ್ಲಿ ಧ್ವಜಾರೋಹಣ, ಸರ್ವಧರ್ಮ ಸಾಮೂಹಿಕ ವಿವಾಹ, ಮಹಾಗಣಾರಾಧನೆ, ಪುಷ್ಟ ರಥೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಜ. 10 ರಂದು ರಕ್ತದಾನ ಶಿಬಿರ, ಮಹಾಗಣಾರಾಧನೆ, ಮಹಾರಥೋತ್ಸವ ಜರುಗಲಿವೆ. ಜ. 11ರಂದು ಮಹಾಗಣಾರಾಧನೆ, ಕಡುಬಿನ ಕಾಳಗ ಜರುಗುವುದು. ಅಂದು ರಾತ್ರಿ 7ಗಂಟೆಗೆ ಸಿಂಹಾಸರೋಹಣ ಕಾರ್ಯಕ್ರಮದ ನೇತೃತ್ವವನ್ನು ಮುರುಘಾಮಠದ ಮಲ್ಲಿಕಾರ್ಜುನ

ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಅಕ್ಕಿಆಲೂರ ಶಿವಬಸವ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರುಹಾಗೂ ಗಣ್ಯರು ಭಾಗವಹಿಸುವರು. ಜ.15 ರಂದು ಮಕರ ಸಂಕ್ರಾತಿ ಪುಣ್ಯಕಾಲದಲ್ಲಿ ತೆಪ್ಪೋತ್ಸವ ಜರುಗಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುತ್ತಣ್ಣ ಮಠದ, ಅರುಣ ಶಟ್ಟರ, ಕೆ.ಎಂ. ಶಶಿಧರ, ಕೆ.ಎಸ್‌.ಉಮೇಶ, ಮಹೇಶ ಪಟ್ಟಣಶಟ್ಟಿ, ಮೃತ್ಯುಂಜಯ ತೆಲಗಿ, ಸುರೇಶ ಗುರಣ್ಣನವರ ಇತರರಿದ್ದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.