ಕರ್ನಾಟಕ ಪಬ್ಲಿಕ್‌ ಶಾಲೆಗೆ 140ನೇ ವರ್ಷದ ಸಂಭ್ರಮ


Team Udayavani, Feb 16, 2019, 10:28 AM IST

16-february-15.jpg

ಬಂಕಾಪುರ: ನಾರಾಯಣಪುರ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ರಾಜ್ಯದ 176 ಪಬ್ಲಿಕ್‌ ಸ್ಕೂಲಗಳಲ್ಲಿ ಪ್ರಥಮವಾಗಿ ಅಸ್ತಿತ್ವಕ್ಕೆ ಬಂದ ಏಕೈಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

1880ರಲ್ಲಿ 1ನೇ ತರಗತಿಯಿಂದ ಗ್ರಾಮದ ದುಂಡಿ ಬಸವೇಶ್ವರ ದೇವಸ್ಥಾನದಲ್ಲಿ ಬೆರಳಣಿಕೆ ಮಕ್ಕಳೊಂದಿಗೆ ಪ್ರಾರಂಭವಾದ ಈ ಶಾಲೆ; ಪ್ರಸ್ತುತ 139 ವರ್ಷಗಳನ್ನು ಪೂರೈಸಿ 14ನೇ ದಶಮಾನೋತ್ಸವ ಸಂಭ್ರಮ ಆಚರಿಸಿಕೊಳ್ಳಲು ಸಜ್ಜಾಗಿದೆ.

1890ರ ದಶಕದಲ್ಲಿ ಶಿಕ್ಷಣ ಪ್ರೇಮಿಗಳಾದ ದಿ| ಸಾಧು ಮರಿಬಸಪ್ಪನವರ ನಾಲ್ಕು ಏಕರೆ ಜಮೀನನ್ನು ಶಾಲೆಗೆ ದಾನಮಾಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದರು. ಅಂದಿನ ಅಗಡಿ ಗ್ರಾಮದ ಶಿಕ್ಷಕ ದಿ| ಸಂಗಣ್ಣವರ ಉತ್ತಮ ಶಿಕ್ಷಣ ನೀಡುವ ಮೂಲಕ ಭೂ ದಾನಿಗಳ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಹಲವಾರು ಶಿಕ್ಷಣ ಪ್ರೇಮಿಗಳ, ಜನಪ್ರತಿನಿಧಿಗಳ ಹಾಗೂ ಗ್ರಾಮದ ಶಾಲಾ ಸುಧಾರಣಾ ಸಮಿತಿ ಸದಸ್ಯರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ದಿ| ವಿ.ಡಿ. ರಾಯಣ್ಣವರ ಹಾಗೂ ಜಿಪಂ ಮಾಜಿ ಸದಸ್ಯ ಶಶಿಧರ ಹೊನ್ನಣ್ಣವರ ಶ್ರಮದ ಪ್ರತಿಫಲವಾಗಿ 1991ರಲ್ಲಿ ಪ್ರಾಥಮಿಕ ಶಾಲೆ ಪ್ರೌಢ ಶಾಲೆಯಾಗಿ ಬಡ್ತಿ ಹೊಂದಿತು. ನಂತರ 1994ರಲ್ಲಿ ಪದವಿ ಪೂರ್ವ ಕಾಲೇಜ ಆಗಿ ಮೇಲ್ದರ್ಜೆಗೇರಿತು. ಸತತ 3 ವರ್ಷ 100ಕ್ಕೆ 100 ಫಲಿತಾಂಶ ನೀಡುವ ಮೂಲಕ ಪ್ರಾಥಮಿಕ, ಪ್ರೌಢ, ಕಾಲೇಜ್‌ ಸಂಯೋಜನೆಗೊಂಡು 29-5-2018 ರಂದು ಕರ್ನಾಟಕ ಪಬ್ಲಿಕ್‌ ಶಾಲೆಯಾಗಿ ಸರ್ಕಾರದಿಂದ ಮಾನ್ಯತೆ ಪಡೆದು ಶಾಸಕ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆಗೊಂಡಿತು. ಈ ಮೂಲಕ ರಾಜ್ಯದ ಪ್ರಥಮ ಪಬ್ಲಿಕ್‌ ಸ್ಕೂಲ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಸದ್ಯ ನಾರಾಯಣಪೂರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ 500 ಮಕ್ಕಳು ಜ್ಞಾನಾರ್ಜನೆ ಮಾಡುತ್ತಿದ್ದು, 22 ಶಿಕ್ಷಕರು ಬೋಧಿಸುತ್ತಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪಿ.ವೈ. ನಾಯಕ ಅವರ ಶ್ರಮದ ಪ್ರತಿಫಲವಾಗಿ ಈ ಶಾಲೆಯ ವಿದ್ಯಾರ್ಥಿಗಳು ಚಕ್ರ ಎಸೆತ, ಭರ್ಚಿ ಎಸೆತದಲ್ಲಿ ರಾಷ್ಟ್ರ ಮಟ್ಟ ಹಾಗೂ ಕಬಡ್ಡಿ, ಕುಸ್ತಿ ಸೇರಿದಂತೆ ವಿವಿಧ ಅಥ್ಲೇಟಿಕ್ಸ್‌ ರಾಜ್ಯಮಟ್ಟದ ಕ್ರೀಡೆಗಳಲ್ಲಿ ಸಾಧನೆಗೈದು ಗ್ರೂಪ್‌ ಮಟ್ಟದಲ್ಲಿ ಸತತ ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಭಾಜನವಾಗಿದೆ. ಶ್ರೀ ದುಂಡಿಬಸವೇಶ್ವರ ಯುವಕ ಸಂಘದವರು ಕಾಲೇಜು ನಿರ್ಮಾಣಕ್ಕೆ 1.28 ಎಕರೆ ಜಾಗೆ ದಾನ ನೀಡಿದ ಪ್ರತಿಫಲವಾಗಿ ಭವ್ಯ ಕಟ್ಟಡ ತಲೆ ಎತ್ತಿ ನಿಂತಿದೆ. ಶಾಲಾ ಆವರಣದಲ್ಲಿ ಕೈ ತೋಟ, ವಿಶಾಲವಾದ ಕ್ರೀಡಾಂಗಣ, ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತೇಕ ಶೌಚಾಲಯ ನಿರ್ಮಿಸುವ ಮೂಲಕ ಮಾದರಿ ಶಾಲೆಯಾಗಿದೆ.

ಫೆ. 16,17 ರಂದು ನಡೆಯಲಿರುವ 14ನೇ ದಶಮಾನೋತ್ಸವ ಸಮಾರಂಭಕ್ಕೆ ಸುರೇಶ ಅರ್ಕಸಾಲಿ ಅವರಿಂದ ಶಾಲಾ ಗೋಡೆಗಳ ಮೇಲೆ ಕನಕದಾಸರ ಅರಮನೆ, ಸಂತ ಶಿಶುನಾಳ ಷರೀಫ್‌, ಬಂಕಾಪುರ ಕೋಟೆ ಆವರಣ ಶಾಲೆಯ ಸುಂದರವಾದ ನೋಟ ಚಿತ್ರ ಬಿಡಿಸುವ ಮೂಲಕ ಶಾಲೆಗೆ ಹೊಸ ಮೇರಗು ನೀಡಲಿದ್ದಾರೆ.

ಸದಾಶಿವ ಹಿರೇಮಠ

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.