ಸಮುದಾಯ ಭವನಕ್ಕೆ 2 ಕೋಟಿ ಅನುದಾನ

ಮುದೇನೂರು ಹಿರೇಮಠಕ್ಕೆ ಸಲ್ಲುತ್ತದೆ ಇಬ್ಬರು ಜಗದ್ಗುರುಗಳನ್ನು ನೀಡಿದ ಕೀರ್ತಿ: ಸ್ವಾಮೀಜಿ

Team Udayavani, Mar 15, 2022, 3:57 PM IST

17

ರಾಣಿಬೆನ್ನೂರ: ಕರ್ನಾಟಕ ರಾಜ್ಯ ನೀರಾವರಿ ನಿಗಮದಿಂದ ಮುದೇನೂರ ಹಿರೇಮಠದ ಆವರಣದಲ್ಲಿ ಬಡವರಿಗೆ ಅನುಕೂಲಕ್ಕಾಗಿ ಸಮುದಾಯ ಭವನ ನಿರ್ಮಿಸಲು 2 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಮುದೇನೂರ ಗ್ರಾಮದ ಹಿರೇಮಠದ ಆವರಣದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ, ಜಿಲ್ಲಾ ನಿರ್ಮಿತಿ ಕೇಂದ್ರ ಹಾಗೂ ಗ್ರಾಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಮುದಾಯ ಭವನ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಯಾತ್ರಿ ನಿವಾಸ ಸೇರಿದಂತೆ ಶ್ರೀಮಠಕ್ಕೆ ತೊಂದರೆ ಆಗದಂತೆ ತುಂಗಭದ್ರಾ ನದಿ ದಂಡೆಯಲ್ಲಿ ತಡೆಗೋಡೆ ನಿರ್ಮಿಸಲಾಗುವುದು. ಮುದೇನೂರಿನ ಹಿರೇಮಠದೊಂದಿಗೆ ನಮ್ಮ ಕುಟುಂಬಕ್ಕೆ ಅವಿನಾಭಾವ ಸಂಬಂಧವಿದೆ ಎಂದರು.

ಉಜ್ಜಯಿನಿ ಪೀಠದ ಸಿದ್ದಲಿಂಗ ಶಿವಾಚಾರ್ಯ ಭಗವತ್ಪಾದರು ಮಾತನಾಡಿ, ಮುದೇನೂರು ಮುಕ್ಕುಡೇಶ್ವರ ಮುನಿಗಳು ನೆಲೆಸಿದ ಗ್ರಾಮ ದಿನಗಳು ಉರುಳಿದಂತೆ ಮುದೇನೂರು ಎಂಬ ಹೆಸರು ಬಂದಿದೆ. ಈ ಗ್ರಾಮ ಕುಮುದ್ವತಿ ಮತ್ತು ತುಂಗಭದ್ರಾ ನದಿ ಸಂಗಮವಾಗಿದೆ. ನಮ್ಮ ಪೂರ್ವಾಶ್ರಮದ ತಾತಂದಿರ ಮೊಮ್ಮಕ್ಕಳಾಗಿ ನಾನು ಮತ್ತು ಸಂಸದ ರಾಘವೇಂದ್ರ ಒಂದೇ ವೇದಿಕೆ ಸೇರಿದ್ದೇವೆ. ಅವರ ಸಹಕಾರದಿಂದ ಹಿರೇಮಠದ ಅಭಿವೃದ್ಧಿಯಾಗಲಿ ಎಂದು ಹೇಳಿದರು.

ಹೊನ್ನಾಳಿ ಹಿರೇಕಲ್ಮಠದ ಡಾ| ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶ್ರೀ ಶೈಲ ಮತ್ತು ಉಜ್ಜಯಿನಿ ಪೀಠಗಳಿಗೆ ಇಬ್ಬರು ಜಗದ್ಗುರುಗಳನ್ನು ನೀಡಿದ ಕೀರ್ತಿ ಮುದೇನೂರು ಹಿರೇಮಠಕ್ಕೆ ಸಲ್ಲುತ್ತದೆ. ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯರು ಜನ್ಮ ಪಡೆದ ಮೂಲ ಹಿರೇಮಠದ ಅಭಿವೃದ್ಧಿಗಿಂತ ಶ್ರೀ ಶೈಲ ಪೀಠ ಹಾಗೂ ಭಕ್ತರ ಏಳ್ಗೆಗೆ ಒತ್ತು ನೀಡಿದ್ದರು ಎಂದರು.

ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೀರಾವರಿ ಯೋಜನೆಗೆ 206 ಕೋಟಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ರಾಣಿಬೆನ್ನೂರು ನಗರಾಭಿವೃದ್ಧಿಗೆ 30 ಕೋಟಿ ಅನುದಾನ ಒದಗಿಸಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇದಲ್ಲದೆ ಹಿರೇಮಠದಲ್ಲಿ ಗುರು ನಿವಾಸ ನಿರ್ಮಿಸಲು 25 ಲಕ್ಷ ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷ ಬೀರಪ್ಪ ಕರಿಯಣ್ಣನವರ, ಉಪಾಧ್ಯಕ್ಷೆ ಮಂಜುಳಾ ಪಾಟೀಲ, ಸದಸ್ಯರಾದ ರಾಜಶೇಖರಗೌಡ ಗಂಗನಗೌಡ್ರ, ನಾಗರಾಜಯ್ಯ ಬಿಳಸನೂರಮಠ, ಪ್ರಶಾಂತ ಮಣಕೂರ, ಹಿರಿಯಮ್ಮ ತಳವಾರ, ರೇಖಾ ಪುಟ್ಟಕ್ಕನವರ, ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಹುಬ್ಬಳ್ಳಿ ವಾಕರಸಾ ನಿಗಮ ನಿರ್ದೇಶಕ ಸಂತೋಷಕುಮಾರ ಪಾಟೀಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ ಇನ್ನಿತರರಿದ್ದರು.

ಹಿರೇಮಠದ ಅಭಿವೃದ್ಧಿಗೆ ಈಗ ಕಾಲ ಕೂಡಿ ಬಂದಿದೆ. ವಾಗೀಶ ಪಂಡಿತಾರಾಧ್ಯರ ಮೊಮ್ಮಗ ಉಜ್ಜಯಿನಿ ಶ್ರೀಗಳು ಮೂಲಮಠದ ಅಭಿವೃದ್ಧಿಗೆ ಒಲವು ತೋರಿದ್ದಾರೆ. ಹಿರೇಮಠ ರಾಜ್ಯದ ಗಮನ ಸೆಳೆಯಲು ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಆಸಕ್ತಿ ತೋರಬೇಕು.

-ಡಾ| ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಹೊನ್ನಾಳಿ ಹಿರೇಕಲ್ಮಠ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.