ವಾಲ್ಮೀಕಿ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಮಂಜೂರು
Team Udayavani, Nov 12, 2019, 1:14 PM IST
ಹಿರೇಕೆರೂರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ 75 ಲಕ್ಷ ರೂ. ಹಾಗೂ ಮಾಸೂರು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು 20 ಲಕ್ಷ ರೂ. ಮಂಜೂರಾಗಿದೆ ಎಂದು ಮಾಜಿ ಶಾಸಕ ಬಿ.ಸಿ.ಪಾಟೀಲ ತಿಳಿಸಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಮಾಸೂರು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು ಮಂಜೂರಾತಿ ಪತ್ರವನ್ನು ರಟ್ಟಿಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ತಳವಾರ ಅವರಿಗೆ ವಿತರಿಸಿ ಮಾತನಾಡಿದರು. ಸಮುದಾಯ ಭವನ ನಿರ್ಮಿಸಲು ಅನುದಾನ ನೀಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ನಿಯಮಾವಳಿಯಂತೆ ಮಾಸೂರು ಗ್ರಾಮಕ್ಕೆ 20 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಈ ಹಣ ಸಮುದಾಯ ಭವನ ನಿರ್ಮಾಣಕ್ಕೆ ಸಾಲುವುದಿಲ್ಲ, ಹಾಗಾಗಿ ಇನ್ನೂ 30 ಲಕ್ಷ ರೂ. ಅನುದಾನ ನೀಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಟ್ಟಿಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ತಳವಾರ, ಶಿವಶಂಕರ ಹುಲ್ಲತ್ತಿ, ಹನುಮಂತಪ್ಪ ಗಿರಿಯಣ್ಣನವರ, ವಾಸು ಮಕರಿ, ಮಾರುತೆಪ್ಪ ಗಿರಿಯಣ್ಣನವರ, ಬಸಪ್ಪ ಮಟ್ಟಿಮನಿ, ಬಸವರಾಜ ಗಿರಿಯಣ್ಣನವರ, ಚೌಡಪ್ಪ ಸಾವಜ್ಜಿ, ಅಶೋಕ ನಾಗೇನಹಳ್ಳಿ, ಬಸಣ್ಣ ಕಾಗೇರ, ಪ್ರವೀಣ ಹೊಳಬಸಣ್ಣನವರ, ರಾಜು ಸಿಂಧೋಳಿ, ರಾಮಪ್ಪ ಹಿತ್ತಲಮನಿ, ರಾಮಣ್ಣ ಹಳದಮ್ಮನವರ, ಪರಮೇಶಪ್ಪ ಕಳಗೊಂಡ, ಸಂತೋಷ ಹುಲ್ಲತ್ತಿ, ದೇವೇಂದ್ರಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ