ಎರಡನೇ ದಿನವೂ ಕುಗ್ಗದ ಉತ್ಸಾಹ

ಹಾಜರಾತಿ ಸಂಖ್ಯೆಯಲ್ಲಿ ಹೆಚ್ಚಳ ,ಅಂದಲಗಿ ಶಾಲೆ ಶಿಕ್ಷ‌ಕರೊಬ್ಬರಿಗೆ ಸೋಂಕು

Team Udayavani, Jan 3, 2021, 3:29 PM IST

ಎರಡನೇ ದಿನವೂ ಕುಗ್ಗದ ಉತ್ಸಾಹ

ಹಾವೇರಿ: ಜಿಲ್ಲೆಯಲ್ಲಿ ಶಾಲೆ ಪುನಾರಂಭಗೊಂಡ ಎರಡನೇ ದಿನವೂ ವಿದ್ಯಾರ್ಥಿಗಳು ಉತ್ಸಾಹದಿಂದಶಾಲೆಗೆ ಆಗಮಿಸಿದ್ದು, ಹಾಜರಾತಿ ಸಂಖ್ಯೆಯಲ್ಲಿಹೆಚ್ಚಳ ಕಂಡುಬಂದಿದೆ. ಶಿಗ್ಗಾವಿ ತಾಲೂಕಿನ ಅಂದಲಗಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರುಶಾಲೆ ಆರಂಭದ ಮೊದಲ ದಿನವಾದ ಶುಕ್ರವಾರ ಶಾಲೆಗೆ ಹಾಜರಾಗದಿದ್ದರಿಂದ ಇನ್ನುಳಿದ ಶಿಕ್ಷ‌ಕರು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ.

ಶಿಗ್ಗಾವಿ ತಾಲೂಕು ಅಂದಲಗಿ ಸರ್ಕಾರಿ ಶಾಲೆ ಶಿಕ್ಷ‌ಕರೊಬ್ಬರಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ. ಆದರೆ, ಅವರಿಗೆ ಮೂರು ದಿನಗಳ ಹಿಂದೆಯೇ ಜ್ವರ ಕಾಣಿಸಿಕೊಂಡಿದ್ದರಿಂದ ಅವರು ಶಾಲೆ ಪುನಾರಂಭಗೊಂಡರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಸೋಂಕಿತ ಶಿಕ್ಷ‌ಕರ ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಪತ್ನಿ ಕೂಡ ಶಿಕ್ಷ‌ಕಿಯಾಗಿದ್ದು, ಅವರು ಕ್ವಾರಂಟೈನ್‌ನಲ್ಲಿ ಇದ್ದಾರೆ. ಆದ್ದರಿಂದ ಆ ಶಾಲೆಯನ್ನು ಬಂದ್‌ ಮಾಡುವ ಸಂದರ್ಭ ಎದುರಾಗಿಲ್ಲ. ವಿದ್ಯಾರ್ಥಿಗಳು ಮತ್ತು ಶಿಕ್ಷ‌ಕ ಸಿಬ್ಬಂದಿ ಯಾವುದೇ ಆತಂಕವಿಲ್ಲದೆ ಎರಡನೇ ದಿನವೂ ಶಾಲೆಗೆ ಆಗಮಿಸಿದ್ದರು.

ಜಿಲ್ಲೆಯಲ್ಲಿ ಎರಡನೇ ದಿನ ಬಹುತೇಕಎಲ್ಲ ಶಾಲೆಗಳಲ್ಲಿ ಶೇ. 50ರಷ್ಟು ಹಾಜರಾತಿಕಂಡುಬಂದಿದೆ. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ಸಾಹದಿಂದಲೇ ತರಗತಿಗೆ ಆಗಮಿಸಿದ್ದರು. 6ರಿಂದ 9ನೆ ತರಗತಿವರೆಗಿನ ಮಕ್ಕಳು ವಿದ್ಯಾಗಮ ತರಗತಿಗೆ ಹಾಜರಾಗಿದ್ದರು. 146 ಪದವಿ ಪೂರ್ವ ಕಾಲೇಜುಗಳಿದ್ದು,ದ್ವಿತೀಯ ಪಿಯುಸಿಯಲ್ಲಿ 16,680 ವಿದ್ಯಾರ್ಥಿಗಳ ದಾಖಲಾತಿಯಿದೆ. ಈ ಪೈಕಿ ಶುಕ್ರವಾರ7,850 ವಿದ್ಯಾರ್ಥಿಗಳು ಹಾಜರಾಗಿದ್ದರು. 6ರಿಂದ 9ನೇ ತರಗತಿವರೆಗೆ 1.08 ಲಕ್ಷ ಮಕ್ಕಳ ದಾಖಲಾತಿಯಲ್ಲಿ, ಶುಕ್ರವಾರ 58,676 ವಿದ್ಯಾರ್ಥಿಗಳು ಹಾಜರಾಗಿದ್ದರು. ಅಂದರೆ ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದರು.

ಅಗತ್ಯ ಮುಂಜಾಗ್ರತೆ: ಜಿಲ್ಲಾದ್ಯಂತ ಶಾಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಹಾಗೂಕೋವಿಡ್‌-19 ಮುನ್ನೆಚ್ಚರಿಕೆ ವಹಿಸಲಾಗಿತ್ತು.ಶಾಲಾ ಕೊಠಡಿಯೊಳಗೆ ಮಕ್ಕಳಿಗೆ ವಿದ್ಯಾಗಮ ಪಠ್ಯಬೋಧನೆ, ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಲಾಯಿತು.

ಮೊದಲ ದಿನದಂತೆಯೇ ಶನಿವಾರ ಕೂಡ ವಿದ್ಯಾರ್ಥಿಗಳು ಶಾಲೆಗಳಿಗೆ ಮೊದಲ ದಿನದಂತೆಯೇ ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡು ಬಂದಿತು. ಜಿಲ್ಲೆಯಲ್ಲಿ ಶೇ. 50ಕ್ಕಿಂತಹೆಚ್ಚಿನ ಪ್ರಮಾಣದಲ್ಲಿ ಎರಡನೇ ದಿನ ಮಕ್ಕಳಹಾಜರಾತಿ ಇರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ತಿಳಿಸಿದರು.

ಹಾವೇರಿ ತಾಲೂಕಿನಲ್ಲಿ ಶೇ.55, ಹಾನಗಲ್ಲ ತಾಲೂಕಿನಲ್ಲಿ ಶೇ. 55, ಸವಣೂರ ತಾಲೂಕಿನಲ್ಲಿಶೇ. 53, ಬ್ಯಾಡಗಿ ಹಾಗೂ ರಾಣಿಬೆನ್ನೂರು ತಾಲೂಕಿನಲ್ಲಿ ಶೇ.50, ಹಿರೇಕೆರೂರ ತಾಲೂಕಿನಲ್ಲಿಶೇ.45 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ ಶೇ.40ರಷ್ಟು ಮಕ್ಕಳು ಶಾಲೆಗೆ ಆಗ ಮಿಸಿರುವುದಾಗಿ ತಿಳಿಸಿದ್ದಾರೆ.

ಪಾಲಕರ ಒಪ್ಪಿಗೆ ಪತ್ರದೊಂದಿಗೆ ವಿದ್ಯಾರ್ಥಿಗಳುಶಾಲೆಗೆ ಆಗಮಿಸುತ್ತಿದ್ದಾರೆ. ಬಹುದಿನಗಳ ನಂತರಶಾಲೆಯಲ್ಲಿ ಸ್ನೇಹಿತರು, ಶಿಕ್ಷಕರನ್ನು ಭೇಟಿ ಮಾಡಿದ ಸಂಭ್ರಮದಲ್ಲಿರುವ ದೃಶ್ಯ ಕಂಡುಬಂದಿತು.

ಜಿಲ್ಲೆಯ ಎಲ್ಲ ಶಾಲೆಗಳು ಆರಂಭವಾಗಿದ್ದು, ಎರಡನೇ ದಿನ ಮಕ್ಕಳ ಹಾಜರಾತಿಯಲ್ಲೂ ಏರಿಕೆಯಾಗಿದೆ. ಮಕ್ಕಳುಉತ್ಸಾಹದಿಂದಲೇ ಶಾಲೆಗೆ ಆಗಮಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಒಬ್ಬರು ಶಿ ಕ್ಷ‌ಕರಿಗೆ ಕೋವಿಡ್ ಪಾಸಿಟಿವ್‌ ಬಂದಿದ್ದರೂ ಅವರು ಶಾಲೆಗೆಬರದ್ದರಿಂದ ಯಾವುದೇ ಸಮಸ್ಯೆಯಾಗಿಲ್ಲ. ಅಂದಾನಪ್ಪ ವಡಗೇರಿ, ಡಿಡಿಪಿಐ ಹಾವೇರಿ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.