309 ಕೋಟಿ ರೂ. ಕ್ರಿಯಾ ಯೋಜನೆ


Team Udayavani, Sep 7, 2019, 11:13 AM IST

hv-tdy-2

ಹಾವೇರಿ: ಜಿಪಂ ಸಾಮಾನ್ಯ ಸಭೆಯ ಚರ್ಚೆಯಲ್ಲಿ ಪಾಲ್ಗೊಂಡ ಶಾಸಕರು ಹಾಗೂ ಜಿಪಂ ಅಧ್ಯಕ್ಷರು.

ಹಾವೇರಿ: ಹಾವೇರಿ ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳ 2019-20ನೇ ಸಾಲಿನ 30979.67 ಲಕ್ಷ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಸರ್ವಾನುಮತದಿಂದ ಅನುಮೋದನೆ ನೀಡಿತು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 31 ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಿ ಲಿಂಕ್‌ ಡಾಕ್ಯೂಮೆಂಟ್ ಅಡಿ 2019-20ನೇ ಸಾಲಿನಲ್ಲಿ ತಯಾರಿಸಲಾದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಸಂದರ್ಭದಲ್ಲಿ ಜಿಪಂನ ಶಾಸನಬದ್ಧ ಅಭಿವೃದ್ಧಿ ಅನುದಾನದ 2019-20ನೇ ಸಾಲಿನ 565 ಲಕ್ಷ ರೂ.ಗೆ ಪಂಚಾಯತ್‌ ರಾಜ್‌ ಇಂಜಿನಿಯರ್‌ ವಿಭಾಗದಿಂದ ತಯಾರಿಸಲಾದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಶಾಸನಬದ್ಧ ಅನುದಾನದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಕಟ್ಟಡದ ಮಳೆ ನೀರು ಕೊಯ್ಲು, ಶೆಡ್‌ ನಿರ್ಮಾಣ, ಕೊಠಡಿಗೆ ಪಿಓಪಿ, ಪ್ಯಾನ್‌, ವಾಲ್ ಪ್ಯಾನ್‌, ವಾರ್ಡ್‌ರೋಬ್‌ ಹಾಗೂ ನೆಲ ಹಾಸಿಗೆ ಪ್ಲೋರಿಂಗ್‌ ಮ್ಯಾಟ್ ಅಳವಡಿಕೆ, ನೀರಿನ ಟ್ಯಾಂಕ್‌ ನಿರ್ಮಾಣ, ಹಳೆ ಕಚೇರಿ ನಿರ್ವಹಣೆಗಾಗಿ 75 ಲಕ್ಷ ರೂ.ಗಳನ್ನು ಕಾಯ್ದಿರಿಸಲಾಗಿದೆ. ಈ ಕುರಿತಂತೆ ಸದಸ್ಯರು ಆಕ್ಷೇಪಣೆ ವ್ಯಕ್ತಪಡಿಸಿ, ಯಾವುದೇ ಸದಸ್ಯರ ಗಮನಕ್ಕೆ ತರದೆ ಅನುದಾನ ಒದಗಿಸಲಾಗಿದೆ ಎಂದರು. ಆಕ್ಷೇಪಣೆ ಹಿನ್ನೆಲೆಯಲ್ಲಿ ಈ ಕಾಮಗಾರಿಗಳನ್ನು ಬದಲಿಸಿ ಜಿಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅತಿಥಿ ಗೃಹದ ವಿನ್ಯಾಸಕ್ಕೆ ಬಳಸಲು ತಿದ್ದುಪಡಿಯೊಂದಿಗೆ ಶಾಸನಬದ್ಧ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಯಾವ ಇಲಾಖೆಗೆ ಎಷ್ಟು ಹಣ?.. ಶಿಕ್ಷಣ ಇಲಾಖೆ 15902.47 ಲಕ್ಷ ರೂ., ಲೋಕ ಶಿಕ್ಷಣ ಇಲಾಖೆಗೆ 32.67 ಲಕ್ಷ ರೂ., ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆಗೆ 202.94 ಲಕ್ಷ ರೂ., ವೈದ್ಯಕೀಯ ಮತ್ತು ಜನಾರೋಗ್ಯಕ್ಕೆ 3390.38 ಲಕ್ಷ ರೂ., ಆಯುಷ್‌ ಇಲಾಖೆಗೆ 246.29 ಲಕ್ಷ ರೂ., ಕುಟುಂಬ ಕಲ್ಯಾಣ ಇಲಾಖೆಗೆ 1417.56 ಲಕ್ಷ ರೂ., ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 1839.50 ಲಕ್ಷ ರೂ., ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ 706.91 ಲಕ್ಷ ರೂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2715.83 ಲಕ್ಷ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 135.06 ಲಕ್ಷ ರೂ., ಕೃಷಿ ಇಲಾಖೆಗೆ 471.29 ಲಕ್ಷ ರೂ., ತೋಟಗಾರಿಕೆ ಇಲಾಖೆಗೆ 495.35 ಲಕ್ಷ ರೂ., ಪಶುಸಂಗೋಪನೆ ಇಲಾಖೆಗೆ 342.27 ಲಕ್ಷ ರೂ. , ಮೀನುಗಾರಿಕೆ ಇಲಾಖೆಗೆ 87.17 ಲಕ್ಷ ರೂ., ಅರಣ್ಯ ಇಲಾಖೆಗೆ 511.26 ಲಕ್ಷ ರೂ., ಸಹಕಾರ ಇಲಾಖೆಗೆ 20.10 ಲಕ್ಷ ರೂ., ಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಕ್ಕೆ 395.38 ಲಕ್ಷ ರೂ., ಸಣ್ಣ ನೀರಾವರಿ ಇಲಾಖೆಗೆ 62.48 ಲಕ್ಷ ರೂ., ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಕ್ಕೆ 67.27 ಲಕ್ಷ ರೂ., ರೇಷ್ಮೆ ಇಲಾಖೆಗೆ 185.16 ಲಕ್ಷ ರೂ., ರಸ್ತೆ ಮತ್ತು ಸೇತುವೆಗೆ 620 ಲಕ್ಷ ರೂ., ಸಚಿವಾಲಯ ಆರ್ಥಿಕ ಸೇವೆಗಳಿಗೆ 73.27 ಲಕ್ಷ ರೂ., ಕೈಮಗ್ಗ ಮತ್ತು ಜವಳಿ ಇಲಾಖೆಗೆ 38.25 ಲಕ್ಷ ರೂ., ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ 7 ಲಕ್ಷ ರೂ., ಕಲೆ ಮತ್ತು ಸಂಸ್ಕೃತಿಗೆ 10 ಲಕ್ಷ ರೂ., ಉದ್ಯೋಗ ಮತ್ತು ತರಬೇತಿಗೆ 103.05 ಲಕ್ಷ ರೂ., ಅಂಗವಿಕಲರ ಮತ್ತು ಹಿರಿಯರ ಕಲ್ಯಾಣ ನಾಗರಿಕರ ಕಲ್ಯಾಣಕ್ಕೆ 118.02 ಲಕ್ಷ ರೂ., ಕೃಷಿ ಮಾರುಕಟ್ಟೆಗೆ 20 ಲಕ್ಷ ರೂ., ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ 323.40 ಲಕ್ಷ ರೂ., ಲೋಕೋಪಯೋಗಿ ಕಾರ್ಯಕ್ರಮಗಳಿಗೆ 439.34 ಲಕ್ಷ ರೂ. ಒಳಗೊಂಡಂತೆ 30979.67 ಲಕ್ಷ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಯಿತು.

ಶಾಸನಬದ್ಧ ಅನುದಾನದಲ್ಲಿ ಮುಂದುವರೆದ ಕಾಮಗಾರಿಗಳಿಗೆ 6.50 ಲಕ್ಷ ರೂ., ಸಾಮಾನ್ಯ ಕಾಮಗಾರಿಗೆ 387.85 ಲಕ್ಷ ರೂ., ವಿಕಲಚೇತನರ ಅಭಿವೃದ್ಧಿ ಕಾಮಗಾರಿಗಳಿಗೆ 33.90 ಲಕ್ಷ ರೂ. ಒಳಗೊಂಡಂತೆ ಇತರ 267 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 565 ಲಕ್ಷ ರೂ.ಗಳ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಅಮಾನತಿಗೆ ಆಗ್ರಹ: ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಗ್ರಾಮೀಣ ಕುಡಿಯುವ ನೀರು ಯೋಜನೆಗಾಗಿ ತಯಾರಿಸಲಾದ 43.89 ಕೋಟಿ ರೂ. ಕ್ರಿಯಾ ಯೋಜನೆಗೆ ಕಳೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲು ನಿರಾಕರಿಸಿದಂತೆ ಈ ಸಭೆಯಲ್ಲೂ ಅನುಮೋದನೆ ನೀಡಲಿಲ್ಲ. ಸದಸ್ಯರ ಅಭಿಪ್ರಾಯಗಳನ್ನು ಕಡೆಗಣಿಸಿ ಅಧಿಕಾರಿಗಳೇ ಕ್ರಿಯಾಯೋಜನೆ ತಯಾರಿಸಿ ಅನುಮೋದನೆ ಪಡೆದಿದ್ದಾರೆ. ಈ ಕ್ರಿಯಾ ಯೋಜನೆಯನ್ನು ರದ್ದುಪಡಿಸಬೇಕು. ಕ್ರಿಯಾ ಯೋಜನೆ ತಯಾರಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.

ಜಿಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ ಮಾತನಾಡಿ, ಜಿಲ್ಲಾ ಪಂಚಾಯಿತಿ ಸದಸ್ಯರ ಅನುಮೊದನೆ ಪಡೆಯದೇ, ಶಾಸಕರ ಗಮನಕ್ಕೆ ತರದೆ ಕ್ರಿಯಾ ಯೋಜನೆಯನ್ನು ಅಧಿಕಾರಿಗಳ ಹಂತದಲ್ಲಿ ಅನುಮೋದನೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಸೆ.9ರಂದು ಗ್ರಾಮೀಣಾಭಿವೃದ್ಧಿ ಸಚಿವರು ಬೆಳಗಾವಿಯಲ್ಲಿ ಸಭೆ ಕರೆದಿದ್ದಾರೆ. ಈ ಕುರಿತಂತೆ ಸಚಿವರ ಗಮನಕ್ಕೆ ತರಲಾಗುವುದು. ಸದಸ್ಯರ ಶಿಫಾರಸ್ಸಗಳನ್ನು ಪರಿಗಣಿಸುವಂತೆ ಮನವಿ ಮಾಡುವುದಾಗಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ಶಾಸಕ ನೆಹರು ಓಲೇಕಾರ, ಜಿಪಂ ಪ್ರಭಾರ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಜಿ.ಪಂ ಉಪಕಾರ್ಯದರ್ಶಿ ಜಿ.ಗೋವಿಂದಸ್ವಾಮಿ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.