3924 ಕುಟುಂಬಕ್ಕೆ 392 ಲಕ್ಷ ರೂ. ಪರಿಹಾರ

•ಹಾನಿಯಾಗಿರುವ ಮನೆಗಳ ಸರ್ವೇ ಕಾರ್ಯ ಪೂರ್ಣ •ತಲಾ 10 ಸಾವಿರ ರೂ. ಜಮೆ

Team Udayavani, Aug 27, 2019, 1:05 PM IST

hv-tdy-1

ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೋಮವಾರ ವಿವಿಧ ತಾಲೂಕು ಆಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಹಾವೇರಿ: ಜಿಲ್ಲೆಯಲ್ಲಿ 159 ಹಳ್ಳಿಗಳು ನೆರೆ ಹಾಗೂ ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ್ದು, ನಿತ್ಯೋಪಯೋಗಿ ಸಾಮಗ್ರಿಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರದ ಮಾರ್ಗಸೂಚಿಯಂತೆ ಹತ್ತು ಸಾವಿರ ರೂ. ಪ್ರಥಮ ಕಂತಾಗಿ ಪರಿಹಾರ ನೀಡಲು 3924 ಕುಟುಂಬಗಳನ್ನು ಗುರುತಿಸಿದ್ದು, 392 ಲಕ್ಷ ರೂ. ಪರಿಹಾರವನ್ನು ವಿತರಣೆ ಮಾಡಲಾಗಿದೆ ಎಂದು ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರು ತಿಳಿಸಿದರು.

ಮನೆಹಾನಿ ಮರು ಸರ್ವೇ ಕುರಿತಂತೆ ಸೋಮವಾರ ವಿವಿಧ ತಾಲೂಕು ಆಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾಹಿತಿ ಪಡೆದರು. ಅತಿವೃಷ್ಟಿ ಹಾಗೂ ನೆರೆಯಿಂದ ಜಿಲ್ಲೆಯಲ್ಲಿ ಹಾನಿಯಾಗಿರುವ ಮನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದೆ. ಹತ್ತು ಸಾವಿರ ರೂ. ತುರ್ತು ಪರಿಹಾರ ಹಣ ಆರ್‌ಟಿಜಿಎಸ್‌ ಮೂಲಕ ಜಮೆ ಮಾಡಲು ಬಾಕಿ ಉಳಿದಿರುವ ಸಂತ್ರಸ್ತರಿಗೆ ಈ ಸಂಜೆಯೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು.

ಪೂರ್ಣ ಪ್ರಮಾಣದ ಕುಸಿದ ಮನೆಗಳು, ಗಂಭೀರ ಸ್ವರೂಪ ಹಾನಿ ಹಾಗೂ ಅರೆ ಕುಸಿದ ಮನೆಹಾನಿಗಳ ಕುರಿತಂತೆ ಸ್ಪಷ್ಟವಾಗಿ ವಿಭಾಗ ಮಾಡಿ ಎನ್‌.ಡಿ.ಆರ್‌.ಎಫ್‌. ಮಾರ್ಗಸೂಚಿಯಂತೆ ಪರಿಹಾರ ಪಾವತಿಸಬೇಕಾಗಿದೆ. ಹಾಗೂ ರಾಜೀವ ಗಾಂಧಿ ವಸತಿ ನಿಗಮದ ವೆಬ್‌ಸೈಟ್‌ಗೆ ತುರ್ತಾಗಿ ಅಪ್‌ಲೋಡ್‌ ಮಾಡಬೇಕು ಹಾಗೂ ಮಾಹಿತಿಯನ್ನು ಅಂತಿಮಗೊಳಿಸುವ ಮುನ್ನ ಎಂಜಿನಿಯರ್‌, ನೋಡಲ್ ಅಧಿಕಾರಿಗಳು ಸರ್ವೇಗಾಗಿ ನಿಯೋಜಿತ ಅಧಿಕಾರಿಗಳು ಅಧಿಕೃತತೆ ಕುರಿತಂತೆ ಪ್ರಮಾಣಿಕರಿಸಬೇಕು ಎಂದು ಸೂಚಿಸಿದರು.

ತುರ್ತು ಪರಿಹಾರ ಹಣವನ್ನು ವಿಳಂಬವಿಲ್ಲದೆ ಆರ್‌.ಟಿ.ಜಿ.ಎಸ್‌. ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡಬೇಕು. ಬ್ಯಾಂಕ್‌ ಖಾತೆ ಅಥವಾ ದಾಖಲೆಗಳ ತಪ್ಪಿನಿಂದ ಖಾತೆಗೆ ಹಣ ಜಮೆ ಆಗದಿದ್ದರೆ ತತಕ್ಷಣ ಸ್ಪಂದಿಸಿ ಸರಿಪಡಿಸಬೇಕು ಎಂದು ಸೂಚಿಸಿದರು.

ಅಪಾರ ಪ್ರಮಾಣದ ಹಾನಿ: ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ 198 ಮನೆಗಳು ಕುಸಿದಿರುವ ಕುರಿತಂತೆ ವರದಿ ಸಲ್ಲಿಕೆಯಾಗಿದ್ದು, ಪರಿಹಾರಕ್ಕಾಗಿ 197.05 ಲಕ್ಷ ರೂ. ಅವಶ್ಯವಿದೆ. 3025 ಮನೆಗಳು ಗಂಭೀರ ಸ್ವರೂಪದ ಹಾನಿಯಾಗಿದ್ದು, 2876.77 ಲಕ್ಷ ರೂ. ಪರಿಹಾರ ನೀಡಬೇಕಾಗಿದೆ. 10,367 ಅರೇ ಕುಸಿದ ಮನೆಗಳು ಎಂದು ಗುರುತಿಸಲಾಗಿದೆ. ಈ ಮನೆಗಳಿಗೆ 2590.50 ಲಕ್ಷ ರೂ. ಪರಿಹಾರ ಒದಗಿಸಬೇಕಾಗಿದೆ. ಈ ವರೆಗೆ 390 ಲಕ್ಷ ರೂ. ಪರಿಹಾರ ನೀಡಲಾಗಿದೆ.

1,23,065 ಹೆಕ್ಟೇರ್‌ ಕೃಷಿ ಬೆಳೆ ಹಾನಿಯಾಗಿದ್ದು, 9594 ಲಕ್ಷ ರೂ. ಪರಿಹಾರ ನೀಡಬೇಕಾಗಿದೆ. 9866 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, 1487.23 ಲಕ್ಷ ರೂ. ಪರಿಹಾರ ಹಣ ನೀಡಬೇಕಾಗಿದೆ.

ನದಿಪಾತ್ರ ಪರಿವರ್ತನೆಯಿಂದ 7914 ಹೆಕ್ಟೇರ್‌ ಕೃಷಿ ಭೂಮಿ ಹಾನಿಯಾಗಿದ್ದು, 2968 ಲಕ್ಷ ರೂ. ಪರಿಹಾರ ಒದಗಿಸಬೇಕಾಗಿದೆ. 5125 ಹೆಕ್ಟೇರ್‌ ಭೂಮಿಯಲ್ಲಿ ಹೂಳು ತುಂಬಿರುವ ಬಗ್ಗೆ ಸರ್ವೇ ಮಾಡಲಾಗಿದೆ.

625.19 ಲಕ್ಷ ರೂ. ಪರಿಹಾರ ಒದಗಿಸಬೇಕಾಗಿದೆ. 134 ಸೇತುವೆಗಳು ಹಾನಿಯಾಗಿದ್ದು, 80.40 ಲಕ್ಷ ರೂ. ದುರಸ್ತಿಗೆ ಬೇಕಾಗಿದೆ. 122 ಸಣ್ಣ ಕೆರೆಗಳಿಗೆ ಹಾನಿಯಾಗಿದ್ದು, 183 ಲಕ್ಷ ರೂ. ದುರಸ್ತಿಗೆ ಅನುದಾನ ಅವಶ್ಯವಿದೆ. 18.39 ಲಕ್ಷ ರೂ.ನಷ್ಟು ನಗರ ಪ್ರದೇಶದಲ್ಲಿ ರಸ್ತೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳು ಹಾನಿಯಾಗಿವೆ ಎಂದು ಮಾಹಿತಿ ನೀಡಿದರು.

2323 ವಿದ್ಯುತ್‌ ಕಂಬಗಳು, 28.15 ಕಿ.ಮೀ ವಿದ್ಯುತ್‌ ಲೈನ್‌, 172 ಟ್ರಾನ್ಸಫಾರ್ಮರ್‌ ಹಾಳಾಗಿದ್ದು ಒಟ್ಟಾರೆ ಮರು ಸ್ಥಾಪನೆ 266.87 ಲಕ್ಷ ರೂ.ಬೇಕಾಗಿದೆ. 150 ಕುಡಿಯುವ ನೀರಿನ ಪೈಪ್‌ಗ್ಳ ಸಂಪರ್ಕಗಳು ಹಾಳಾಗಿದ್ದು, 225 ಲಕ್ಷ ರೂ. ಅವಶ್ಯವಾಗಿದೆ. 1753 ಸರ್ಕಾರಿ ಶಾಲಾ ಕೊಠಡಿಗಳು, ಅಂಗನವಾಡಿ ಇತರ ಕಟ್ಟಡಗಳು ಹಾನಿಯಾಗಿದ್ದು, 1593.73 ಲಕ್ಷ ರೂ. ಮರು ದುರಸ್ತಿಗೆ ಅನುದಾನ ಬೇಕಾಗಿದೆ. 24 ಆರೋಗ್ಯ ಇಲಾಖೆ ಕಟ್ಟಡಗಳು ಹಾನಿಯಾಗಿದ್ದು, 48 ಲಕ್ಷ ರೂ. ದುರಸ್ತಿಗೆ ಅನುದಾನ ಬೇಕಾಗಿದೆ. 90 ಮೀನುಗಾರಿಕೆ ಬುಟ್ಟಿ, 270 ಮೀನಿನ ಬಲೆಗಳು ಹಾನಿಯಾಗಿದ್ದು, 15.60 ಲಕ್ಷ ರೂ. ಅವಶ್ಯವಾಗಿದೆ.

ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು. ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ, ಹಾವೇರಿ ತಹಶೀಲ್ದಾರ್‌ ಶಿವಕುಮಾರ, ಚುನಾವಣಾ ತಹಶೀಲ್ದಾರ್‌ ಪ್ರಶಾಂತ ನಾಲವಾರ, ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆ ಉಪನಿರ್ದೇಶಕ ವಿನೋದ ಹೆಗ್ಗಳಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ, ಹಾವೇರಿ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ನಪೂರ್ಣ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.