ಪ್ರತಿ ಹೆಕ್ಟೇರ್‌ಗೆ 50 ಸಾವಿರ ನೆರೆ ಪರಿಹಾರ ನೀಡಿ

ಅರ್ಹರಿಗೆ ಪರಿಹಾರ ಸಿಗದಿದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

Team Udayavani, Sep 3, 2022, 5:59 PM IST

ಪ್ರತಿ ಹೆಕ್ಟೇರ್‌ಗೆ 50 ಸಾವಿರ ನೆರೆ ಪರಿಹಾರ ನೀಡಿ

ಬ್ಯಾಡಗಿ: ಅತಿವೃಷ್ಟಿಯಿಂದಾಗಿ ಬ್ಯಾಡಗಿ ಮತಕ್ಷೇತ್ರದ ರೈತರು ಸಂಕಷ್ಟಕ್ಕೀಡಾಗಿರುವುದು ಎಷ್ಟು ಸತ್ಯವೋ ಮತಕ್ಷೇತ್ರದಾದ್ಯಂತ ಯಾವುದೇ ಪರಿಹಾರ ಕಾರ್ಯ ನಡೆಯದೇ ಇರುವುದೂ ಅಷ್ಟೇ ಸತ್ಯವಾಗಿದೆ. ಡೊಡ್ಡ ಅಥವಾ ಸಣ್ಣ ಹಿಡುವಳಿದಾರರೆಂದು ಪ್ರತ್ಯೇಕಿಸದೇ ಪ್ರತಿ ಹೆಕ್ಟೇರ್‌ ಕೃಷಿಭೂಮಿಗೆ ಕೂಡಲೇ 50 ಸಾವಿರ ರೂ.ಪರಿಹಾರ ಘೋಷಣೆ ಮಾಡಬೇಕೆಂದು ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಸರ್ಕಾರವನ್ನುಆಗ್ರಹಿಸಿದರು.

ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರಂತರ ಮಳೆಯಿಂದ ತಾಲೂಕಿನಾದ್ಯಂತ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಸಂಪೂರ್ಣ ಹಾಳಾಗಿದೆ. ಮಳೆ ಸುರಿಯುತ್ತಿರುವ ಕಾರಣ ಬಿತ್ತನೆ ಮಾಡಿದ ಕ್ಷೇತ್ರದಲ್ಲಿ ರೈತರ ಕೈಗೆ ಬೆಳೆ ಸಿಗುವ ಅನುಮಾನಗಳಿವೆ. ಕೂಡಲೇ ಸರ್ಕಾರ ಸಣ್ಣ ಮತ್ತು ದೊಡ್ಡ ಹಿಡುವಳಿದಾರರನ್ನು ಪ್ರತ್ಯೇಕಿಸದೇ ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂ. ಪರಿಹಾರ ಘೋಷಿಸುವಂತೆ ಆಗ್ರಹಿಸಿದರು.

ಪಹಣಿ ಹಿಡಿದು ಹಣ ವಿತರಿಸಲಿ: ನೆರೆಯಂತಹ ಸಮಯದಲ್ಲಿ ಮನೆ ಕಳೆದುಕೊಂಡಿದ್ದಲ್ಲದೇ ಜನ, ಜಾನುವಾರು ಬೀದಿಗೆ ಬರುವ ಮೂಲಕ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿ ಅರ್ಜಿ ಸಲ್ಲಿಸಲು ಕಚೇರಿಗೆ ಬರಬೇಕೆಂಬುದು ಮೂರ್ಖತನದ ಪರಮಾವಧಿ. ಕೂಡಲೇ ಅಧಿಕಾರಿಗಳು ನೆರೆಯಲ್ಲಿ ಬದುಕು ಕಳೆದುಕೊಂಡವರನ್ನು ಪತ್ತೆ ಹಚ್ಚುವ ಮೂಲಕ ತಾವೇ ಸ್ವಯಂಪ್ರೇರಿತರಾಗಿ ಅರ್ಜಿ ಪಡೆದು ಪರಿಹಾರ ವಿತರಣೆ ಮಾಡುವಂತೆ ಆಗ್ರಹಿಸಿದರು.

ಮನೆ ಪರಿಹಾರದಲ್ಲಿ ಹಗರಣ: ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಮನೆಗಳು ಬಿದ್ದು ಬಡವರು ಬೀದಿಗೆ ಬಂದಿದ್ದಾರೆ. ಆದರೆ ನಿಜವಾಗಿಯೂ ಮನೆ ಕಳೆದುಕೊಂಡವರಿಗೆ ಪರಿಹಾರ ಸಿಗುತ್ತಿಲ್ಲ. ಬದಲಾಗಿ ಶಾಸಕರ ಹಿಂಬಾಲಕರು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಬೀಳದ ಮನೆಗಳಿಗೆ ಪರಿಹಾರ ಕೊಡಿಸಲು ಮುಂದಾಗುತ್ತಿದ್ದಾರೆ. ಇದರಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿದ್ದು, ಕೂಡಲೇ ತನಿಖೆ ನಡೆಸುವ ಮೂಲಕ ಶಾಸಕರ ಹಿಂಬಾಲಕರ ಅಕ್ರಮ ಬಯಲಿಗೆ ತರಬೇಕೆಂದು ಆಗ್ರಹಿಸಿದರು. ಅಲ್ಲದೇ, ಅರ್ಹರಿಗೆ ಪರಿಹಾರ ಸಿಗದಿದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ರಸ್ತೆ ಗುಂಡಿ ಮುಚ್ಚಿ: ಮುಖಂಡ ಪ್ರಕಾಶ ಬನ್ನಿಹಟ್ಟಿ ಮಾತನಾಡಿ, ಪುರಸಭೆ, ಲೋಕೋಪಯೋಗಿ, ಪಿಎಂಜಿಎಸ್‌ವೈ, ಜಿಪಂ ಸೇರಿದಂತೆ ತಾಲೂಕಿನ ಎಲ್ಲ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಮೂಲಕ ಜನರ ಜೀವ ಉಳಿಸಿ ಪುಣ್ಯಕಟ್ಟಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಅಧ್ಯಕ್ಷ ಅಲ್ಪಸಂಖ್ಯಾತ ಘಟಕದ ಯೂನಸ್‌ ಅಹಮ್ಮದ ಸವಣೂರ, ಮುಖಂಡರಾದ ಶಶಿಧರ (ತೋಟಪ್ಪ) ಅಕ್ಕಿ, ಜಗದೀಶಗೌಡ ಪಾಟೀಲ, ಮಂಜುನಾಥ ಬೋವಿ, ಮಹೇಶ ಉಜನಿ ಇತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.