ದೇವಸ್ಥಾನ ಅಭಿವೃದ್ಧಿಗೆ 52 ಲಕ್ಷ ರೂ. ಅನುದಾನ

ಸುದ್ದಿಗೋಷ್ಠಿಯಲ್ಲಿ ಶಾಸಕ ಸಿ.ಎಂ.ಉದಾಸಿ ಮಾಹಿತಿ

Team Udayavani, Nov 29, 2020, 3:10 PM IST

temple-development-Grants

ಹಾನಗಲ್ಲ: ಧರ್ಮವನ್ನು ಉಳಿಸಲು ದೇವಾಲಯಗಳ ಅಭಿವೃದ್ಧಿ ಮುಖ್ಯವಾಗಿದೆ. ಹಾಗಾಗಿ, ತಾಲೂಕಿನ ಒಟ್ಟು 251 ಮುಜರಾಯಿ ದೇವಸ್ಥಾನಗಳಲ್ಲಿ ವಿವಿಧ ಗ್ರಾಮಗಳ 18 ದೇವಸ್ಥಾನಗಳ ಅಭಿವೃದ್ಧಿಗೆ 52 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದರು.

ಶನಿವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದೇವಸ್ಥಾನ ಸಮಿತಿಯವರು ತಮ್ಮ ದಾಖಲೆಗಳನ್ನು ಸಲ್ಲಿಸಿ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ. ಅಲ್ಲದೇ, ತಸ್ತಿಖ್‌ ಪಡೆಯುತ್ತಿರುವ 162 ದೇವಸ್ಥಾನಗಳ ಅರ್ಚಕರಿಗೆ ವರ್ಷಕ್ಕೆ 4 ಕಂತುಗಳಲ್ಲಿ ವಾರ್ಷಿಕ 48 ಸಾವಿರ ರೂ. ಬಿಡುಗಡೆಯಾಗಲಿದ್ದು, ಪ್ರಸಕ್ತ ಸಾಲಿನ ಎರಡುಕಂತುಗಳ ಮೊತ್ತ 38.88 ಲಕ್ಷ ರೂ. ಅನುದಾನಬಿಡುಗಡೆ ಮಾಡಲಾಗಿದೆ ಎಂದರು.

ಮುಜರಾಯಿ ದೇವಸ್ಥಾನಗಳನ್ನು ಹೊರತುಪಡಿಸಿ 2017-18, 2018-19 ಹಾಗೂ 2019-20ನೇ ಸಾಲಿನಲ್ಲಿ ಸರಕಾರದಿಂದ ಬಿಡುಗಡೆಯಾದ ಅನುದಾನದಡಿ ಆರಾಧನಾ ಯೋಜನೆಗೆ 9.37 ಲಕ್ಷ ರೂ., ವಿಶೇಷ ಘಟಕ ಯೋಜನೆಗೆ 22.44 ಲಕ್ಷ ರೂ. ಹಾಗೂ ಗಿರಿಜನ ಉಪ ಯೋಜನೆಗೆ 3.46 ಲಕ್ಷ ರೂ. ಸೇರಿದಂತೆ ಒಟ್ಟು 35.27 ಲಕ್ಷ ರೂ. ಅನುದಾನವನ್ನು ಆರಾಧನಾ ಸಮಿತಿಯ ನಿರ್ದೇಶನದಂತೆ ತಾಲೂಕಿನ 28 ದೇವಾಲಯಗಳ ಅಭಿವೃದ್ಧಿಗೆ ಬಿಡುಗಡೆ ಮಾಡಲು ಸೂಚಿಸಲಾಗಿದೆ. ಇದರಲ್ಲಿ 9 ದೇವಸ್ಥಾನಗಳು ಸಾಮಾನ್ಯ, 17 ವಿಶೇಷ ಘಟಕ ಯೋಜನೆಯ ದೇವಸ್ಥಾನಗಳುಹಾಗೂ 2 ಗಿರಿಜನ ಉಪಯೋಜನೆಯ ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದೆ. ಈ ದೇವಸ್ಥಾನ ಸಮಿತಿಯವರು ಸೂಕ್ತ ದಾಖಲೆಗಳನ್ನು ತಹಶೀಲ್ದಾರ್‌ ಕಾರ್ಯಾಲಯಕ್ಕೆ ಸಲ್ಲಿಸಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬಹುದು ಎಂದು ಸಿ.ಎಂ.ಉದಾಸಿ ತಿಳಿಸಿದರು.

ಇದನ್ನೂ ಓದಿ:ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ

ಆರಾಧನಾ ಯೋಜನೆಯಡಿ ತಾಲೂಕಿನ ಆಡೂರಿನ ಬನಶಂಕರಿ ದೇವಸ್ಥಾನ, ತಿಳವಳ್ಳಿಯ ವೀರಭದ್ರೇಶ್ವರ ದೇವಸ್ಥಾನ, ವರ್ದಿಯ ವೀರಭದ್ರೇಶ್ವರ ದೇವಸ್ಥಾನ, ಚಿಕ್ಕಾಂಶಿ-ಹೊಸೂರಿನ ದುರ್ಗಾದೇವಿ ದೇವಸ್ಥಾನ, ಮಲ್ಲಿಗ್ಗಾರ ಗ್ರಾಮದ ಸಿದ್ಧರಾಮೇಶ್ವರ ದೇವಸ್ಥಾನ, ಯಳವಟ್ಟಿಯ ಶಿಬಾರ ಜೀರ್ಣೋದ್ಧಾರ, ಹಾನಗಲ್ಲಿನ ಅನ್ನಪೂರ್ಣೇಶ್ವರಿ ದೇವಸ್ಥಾನ, ಹುಣಶೆಟ್ಟಿಕೊಪ್ಪದ ಬಸವೇಶ್ವರ ದೇವಸ್ಥಾನ, ಹಿರೇಕಾಂಶಿಯ ಲೋಕ ಪರಮೇಶ್ವರಿ ದೇವಸ್ಥಾನಗಳು ಅಭಿವೃದ್ಧಿಗೊಳ್ಳಲಿವೆ ಎಂದರು.

ವಿಶೇಷ ಘಟಕ ಯೋಜನೆಯಡಿ ತಾಲೂಕಿನ ಬೊಮ್ಮನಹಳ್ಳಿ ಮಾರುತಿ ದೇವಸ್ಥಾನ, ಕರಗುದರಿಯ ದ್ಯಾಮವ್ವನ ಪಾದಗಟ್ಟಿ, ಹಿರೇಬಾಸೂರಿನ ದುರ್ಗಾದೇವಿ ದೇವಸ್ಥಾನ, ಇನಾಂಲಕ್ಮಾಪೂರದ ಗುರುಸಿದ್ದೇಶ್ವರ ದೇವಸ್ಥಾನ, ಮಾಸನಕಟ್ಟೆಯ ಮಾತಂಗವ್ವ ದೇವಸ್ಥಾನ, ಇನಾಂದ್ಯಾಮನಕೊಪ್ಪದ ಕರೆಮ್ಮ ದೇವಿ ದೇವಸ್ಥಾನ, ವರ್ದಿಯ ಮಾತಂಗಮ್ಮದೇವಸ್ಥಾನ, ಹರಳಕೊಪ್ಪ ಗ್ರಾಮದ ಬಸವೇಶ್ವರ ದೇವಸ್ಥಾನ, ಗೆಜ್ಜೆಹಳ್ಳಿಯ ಮಾರುತಿ ದೇವಸ್ಥಾನ, ಅಕ್ಕಿಆಲೂರಿನ ಮಾತಂಗೇಶ್ವರಿ ದೇವಸ್ಥಾನ, ಶೀಗಿಹಳ್ಳಿ, ತುಮರಿಕೊಪ್ಪ, ಕಂಚಿನೆಗಳೂರ ಗ್ರಾಮಗಳ ಮಾತಂಗಮ್ಮ ದೇವಸ್ಥಾನ, ಬಾಳಿಹಳ್ಳಿಯ ಮಾರುತಿ ದೇವಸ್ಥಾನ, ಆಡೂರಿನ ದುರುಗಮ್ಮ ದೇವಸ್ಥಾನ, ಜಂಗಿನಕೊಪ್ಪದ ಕೃಷ್ಣ ದೇವಸ್ಥಾನ, ಆರೆಗೊಪ್ಪದ ಮಹಾತೆಂಗಮ್ಮನ ದೇವಸ್ಥಾನಗಳು ಹಾಗೂ ಗಿರಿಜನ ಉಪ ಯೋಜನೆಯಡಿ ತಾಲೂಕಿನ ಬಾದಾಮಗಟ್ಟಿ ಗ್ರಾಮದ ಮಾರುತಿ ದೇವಸ್ಥಾನ, ತಿಳವಳ್ಳಿ-ಯತ್ತಿನಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಗಳು ಸೇರಿದಂತೆ ಒಟ್ಟು 28 ದೇವಸ್ಥಾನಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.