686 ಕ್ವಿಂಟಲ್ ಅಕ್ರಮ ಮೆಕ್ಕೆಜೋಳ ಬೀಜ ವಶ
Team Udayavani, Jun 10, 2021, 6:40 PM IST
ಹಾವೇರಿ: ಕೃಷಿ ಇಲಾಖೆ ಜಿಲ್ಲಾ ಅಧಿಕಾರಿಗಳ ತಂಡ ರಾಣಿಬೆನ್ನೂರ ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಶ್ರೀ ಮಾತಾ ಸೀಡ್ಸ್ ಕಂಪನಿ ಮೇಲೆ ದಾಳಿ ನಡೆಸಿ ಮೇಲೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು 2.1 ಕೋಟಿ ಮೌಲ್ಯದ ಒಟ್ಟು 686 ಕ್ವಿಂಟಲ್ ಮೆಕ್ಕೆಜೋಳ ಬಿತ್ತನೆ ಬೀಜ ವಶಪಡಿಸಿಕೊಂಡಿದೆ.
ಬುಧವಾರ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ರಾಣಿಬೆನ್ನೂರ ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಶ್ರೀ ಮಾತಾ ಸೀಡ್ಸ್ ಕಂಪನಿ ಮೇಲೆ ದಾಳಿ ನಡೆಸಿ ಅನಧಿ ಕೃತವಾಗಿ ದಾಸ್ತಾನು ಮಾಡಿದ್ದ 2.1 ಕೋಟಿ ಮೌಲ್ಯದ ಒಟ್ಟು 686 ಕ್ವಿಂಟಲ್ ಮೆಕ್ಕೆಜೋಳ ಬಿತ್ತನೆ ಬೀಜ ವಶಪಡಿಸಿಕೊಂಡು ಸಂಬಂಧಿಸಿದ ದಾಸ್ತಾನುಗಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಮಾರಾಟಗಾರರು ಪರವಾನಗಿ ಇಲ್ಲದೇ ಬಿತ್ತನೆ ಬೀಜ, ರಸಗೊಬ್ಬರ ಮಾಡುವುದು ಕಂಡುಬಂದಲ್ಲಿ ಅಂಥವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಪರವಾನಗಿ ಹೊಂದದೇ ದಾಸ್ತಾನು ಮಳಿಗೆ, ಗೋದಾಮುಗಳಲ್ಲಿ ಬಿತ್ತನೆ ಬೀಜ ದಾಸ್ತಾನು ಮಾಡಿದ್ದಲ್ಲಿ ಅಂತಹ ಮಾರಾಟಗಾರರು/ದಾಸ್ತಾನುಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಎಲ್ಲ ಮಾರಾಟಗಾರರು ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಮಾಡಬೇಕು, ಕಡ್ಡಾಯವಾಗಿ ರೈತರಿಗೆ ರಶೀದಿ ನೀಡಬೇಕು, ಅನಧಿಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, ಅವ ಧಿ ಮುಗಿದ ಕೃಷಿ ಪರಿಕರ ಮಾರುವುದು ಹಾಗೂ ಅನ ಧಿಕೃತವಾಗಿ ಬೀಜ-ರಸಗೊಬ್ಬರ ಪರಿಕರಗಳನ್ನು ದಾಸ್ತಾನು ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ಪರವಾನಗಿ ಅಮಾನತು ಹಾಗೂ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಲಾಗಿದೆ.
ಸೀಡ್ಸ್ ಕಂಪನಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ರಾಣಿಬೆನ್ನೂರಿನ ಉಪ ಕೃಷಿ ನಿರ್ದೇಶಕರಾದ ಸ್ಫೂರ್ತಿ, ಸಹಾಯಕ ಕೃಷಿ ನಿರ್ದೇಶಕ (ಜಾರಿದಳ-2) ಪ್ರಾಣೇಶ, ಸಹಾಯಕ ಕೃಷಿ ನಿರ್ದೇಶಕ (ಜಾರಿದಳ-1) ನಾರನಗೌಡ, ಸಹಾಯಕ ಕೃಷಿ ನಿರ್ದೇಶಕ (ಕೇಂದ್ರ) ಸುನೀಲ್ ನಾಯ್ಕ, ರಾಣಿಬೆನ್ನೂರು ಸಹಾಯಕ ಕೃಷಿ ನಿರ್ದೇಶಕ ಹಿತೇಂದ್ರ ಗೌಡಪ್ಪಳವರ ಇತರರು ಇದ್ದರು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
MUST WATCH
ಹೊಸ ಸೇರ್ಪಡೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ