ಅಕಾಲಿಕ ಮಳೆಗೆ 892 ಹೆಕ್ಟೇರ್‌ ಬೆಳೆ ನಾಶ

ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಭತ್ತ ಬೆಳೆದ ರೈತರು ನೋವು ಅನುಭವಿಸುವಂತಾಗಿದೆ.

Team Udayavani, Nov 20, 2021, 6:22 PM IST

ಅಕಾಲಿಕ ಮಳೆಗೆ 892 ಹೆಕ್ಟೇರ್‌ ಬೆಳೆ ನಾಶ

ರಾಣಿಬೆನ್ನೂರ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಅಕಾಲಿಕ ಮಳೆಗೆ ಸುಮಾರು 892.3 ಹೆಕ್ಟೇರ್‌ ನಲ್ಲಿ ಬೆಳೆದಿದ್ದ ಭತ್ತ, ಜೋಳ, ಸೂರ್ಯಕಾಂತಿ, ಗೋವಿನಜೋಳ, ಹತ್ತಿ, ಶೇಂಗಾ, ಅವರೆ ಸೇರಿದಂತೆ ಮತ್ತಿತರ ಬೆಳೆಗಳು ಸಂಪೂರ್ಣ ನೆಲಕ್ಕಚ್ಚಿದ್ದು, ಸುಮಾರ 1.25 ಕೋಟಿಗೂ ಅಧಿಕ ನಷ್ಟವಾಗಿದೆ. ಇದರಿಂದ, ಅನ್ನದಾತರು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಕೊಯ್ಲಿಗೆ ಬಂದಿದ್ದ ಭತ್ತ ಸಂಪೂರ್ಣ ನೆಲಕ್ಕಚ್ಚಿದೆ. ಕಟಾವು ಮಾಡಿದ ಭತ್ತದ ರಾಶಿಗಳು ಮಳೆ ನೀರಿಗೆ ತೊಯ್ದು ಮೊಳಕೆಯೊಡದಿವೆ. ಇದರಿಂದ ರೈತರ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಭತ್ತ ಬೆಳೆದ ರೈತರು ನೋವು ಅನುಭವಿಸುವಂತಾಗಿದೆ.

ತಾಲೂಕಿನಲ್ಲಿ ಒಟ್ಟು 815 ಹೆಕ್ಟೇರ್‌ನಲ್ಲಿ ಭತ್ತ, 7.7 ಹೆಕ್ಟೇರ್‌ನಲ್ಲಿ ಜೋಳ, 18.8ಹೆಕ್ಟೇರ್‌ ನಲ್ಲಿ ಸೂರ್ಯಕಾಂತಿ, 30.3ಹೆಕ್ಟೇರ್‌ನಲ್ಲಿ ಗೋವಿನಜೋಳ, 6.8ಹೆಕ್ಟೇರ್‌ನಲ್ಲಿ ಶೇಂಗಾ, 5.7ಹೆಕ್ಟೇರ್‌ನಲ್ಲಿ ಅವರೆ, 8.0ಹೆಕ್ಟೇರ್‌ನಲ್ಲಿ ಹತ್ತಿ ಸೇರಿ 892.3ಹೆಕ್ಟೇರ್‌ನಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನೆಲಕ್ಕಚ್ಚಿ ಸುಮಾರ 1.25 ಕೋಟಿಗೂ ಅಧಿ ಕ ನಷ್ಟವಾಗಿದೆ. ಹಾನಿಗೊಳಗಾದ ಜಮೀನುಗಳಿಗೆ ಶುಕ್ರವಾರ ಕಂದಾಯ ಹಾಗೂ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
ನಡೆಸಿದರು.

ತಾಲೂಕಿನ ಕವಲೆತ್ತು, ಕೋಡಿಯಾಲ, ಮುದೆನೂರ, ನಾಗೇನಹಳ್ಳಿ, ಹೊಳೆಆನ್ವೇರಿ, ಕೋಟಿಹಾಳ, ತುಮ್ಮಿನಕಟ್ಟಿ, ಪತ್ಯಾಪುರ, ಗುಡಗೂರ, ಮೈದೂರ, ಚಿಕ್ಕಕುರವತ್ತಿ, ಚೌಡಯ್ಯದಾನಪುರ, ಗಂಗಾಪುರ, ಕಾಕೋಳ, ಹೂಲಿಹಳ್ಳಿ, ಕರೂರು, ಚಳಗೇರಿ, ಮಾಕನೂರ, ನದಿಹರಳಳ್ಳಿ, ಮೆಡ್ಲೆರಿ, ಐರಣಿ, ಸೋಮಲಾಪುರ, ಹಿರೇಬಿದರಿ, ಕೋಣನತಂಬಿಗಿ, ಉದಗಟ್ಟಿ, ಹೀಲದಹಳ್ಳಿ, ಬೇಲೂರ, ಕೆರೆಮಲ್ಲಾಪುರ, ಚಿಕ್ಕಹರಳಳ್ಳಿ, ದೇವರಗುಡ್ಡ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಗೆ 892.3 ಹೆಕ್ಟೇರ್‌ ಬೆಳೆ ನಷ್ಟವಾಗಿ ಸುಮಾರ 1.25 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹೀತೇಂದ್ರ ಗೌಡಪ್ಪಳವರ “ಉದಯವಾಣಿ’ಗೆ ತಿಳಿಸಿದ್ದಾರೆ.

ತಾಲೂಕಿನ ಮಾಕನೂರ ಗ್ರಾಮದಲ್ಲಿ ಬತ್ತದ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ನಷ್ಟ ಅನುಭವಿಸಿದ ರೈತರು ಭತ್ತದ ಬೆಳೆಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿದ ಅಕಾಲಿಕ ಮಳೆಗೆ ನಗರದ 1ಮನೆ, ಗ್ರಾಮೀಣ ಭಾಗದ ಇಟಗಿ 1, ಕುದರಿಹಾಳ ಗ್ರಾಮದ 1, ದೇವರಗುಡ್ಡದ 2, ಕವಲೆತ್ತ ಗ್ರಾಮದ 2 ಮನೆ ಸೇರಿ ಒಟ್ಟು ಸುಮಾರು 7 ಮನೆಗಳು ಭಾಗಶಃ ಬಿದ್ದಿರುವ ವರದಿಯಾಗಿದೆ. ಇನ್ನೂ ಮಳೆ ಮುಂದುವರೆದಿದ್ದು, ಇದರ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
ಶಂಕರ ಜಿ.ಎಸ್‌., ತಹಶೀಲ್ದಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.