ಹೆಸ್ಕಾಂ ಕಚೇರಿ ಗೇಟಿಗೆ ಬೀಗ ಹಾಕಿ ಪ್ರತಿಭಟಿಸಿದ ರೈತ
Team Udayavani, Dec 28, 2019, 1:15 PM IST
ಹಾವೇರಿ: ಹೊಲದಲ್ಲಿದ್ದ ವಿದ್ಯುತ್ ಕಂಬಗಳನ್ನು ತೆಗೆದಿರುವುದು ಹಾಗೂ ಜಮೀನಿನಲ್ಲಿರುವ ಪಂಪ್ ಸೆಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ರೈತನೋರ್ವ ಹೆಸ್ಕಾಂ ಕಚೇರಿ ಗೇಟಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಕುರುಬಗೊಂಡ ಗ್ರಾಮದ ಭರಮಗೌಡ ರಾಯಣ್ಣನವರ ಪ್ರತಿಭಟನೆ ಮಾಡಿದ ರೈತ. ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರು ಬಂದು ಹೆಸ್ಕಾಂ ಕಚೇರಿ ಆವರಣ ಗೇಟಿಗೆ ಬಾಗಿಲು ಹಾಕಿ ಪ್ರತಿಭಟನೆ ಆರಂಭಿಸಿದರು. ಇದರಿಂದ ಆಗ ತಾನೇ ಕಚೇರಿಗೆ ಆಗಮಿಸುತ್ತಿದ್ದ ಕಚೇರಿಯ ಸಿಬ್ಬಂದಿ, ಅಧಿಕಾರಿಗಳು ಗೇಟಿನ ಹೊರಗೇ ನಿಲ್ಲಬೇಕಾಯಿತು. ಅಧಿಕಾರಿ, ಸಿಬ್ಬಂದಿಗಳು ಎಷ್ಟೇ ಮನವೊಲಿಸಿದರೂ ರೈತ ಗೇಟು ತೆಗೆಯಲು ಒಪ್ಪಲಿಲ್ಲ. ಆಗ ಕಚೇರಿ ಸಿಬ್ಬಂದಿಗಳೇ ಬಲವಂತದಿಂದ ಆತನನ್ನು ಪಕ್ಕಕ್ಕಿ ತಳ್ಳಿ ಗೇಟ್ ತೆಗೆದು ಒಳ ನಡೆದರು.
ರೈತನೊಂದಿಗೆ ಅಧಿಕಾರಿ, ಸಿಬ್ಬಂದಿಗಳು ವಾಗ್ವಾದ ನಡೆಸುತ್ತಿದ್ದಂತೆ ನೂರಾರು ಜನರು ಜಮಾಯಿಸಿ ಕೆಲಹೊತ್ತು ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತನನ್ನು ಸಮಾಧಾನಗೊಳಿಸಿ, ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳ ಎದುರು ಕರೆದೊಯ್ದರು.
ದೂಡಿ ಒಳಗೆ ಬಂದರು: ಕಚೇರಿಯ ಹಿರಿಯ ಅಧಿಕಾರಿಗಳ ಎದುರು ಬಂದ ರೈತ ಭರಮಗೌಡ, ಕಳೆದ ಒಂದು ವರ್ಷದಿಂದ ಅಲೆದಾಡಿದರೂ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿಲ್ಲ. ಮೊನ್ನೆ ನಾನು ಅವರಿಗೆ ಎಚ್ಚರಿಕೆ ಕೊಟ್ಟಂತೆ ಇಂದು ಗೇಟಿಗೆ ಕೀಲಿ ಹಾಕಿ ಪ್ರತಿಭಟನೆ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ನನ್ನನ್ನು ಬಲವಂತದಿಂದ ದೂಡಿ ಕೀಲಿ ತೆಗೆದರು. ಇವರ ವರ್ತನೆಯಿಂದ ಪೆಟ್ರೋಲ್ ಸುರಿದುಕೊಂಡು ಕಚೇರಿ ಎದುರೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನಿಸುವಷ್ಟು ಕೋಪ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಅಧಿಕಾರಿ : ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಹಾಯಕ ಇಂಜಿನಿಯರ್ ಸಿ.ವಿ. ಹೊಸಮನಿ, ಪ್ರತಿಭಟನಾನಿರತ ರೈತನ ಹೊಲದಲ್ಲಿದ್ದ ವಿದ್ಯುತ್ ಕಂಬಗಳನ್ನು ಇಲಾಖೆಯಿಂದ ತೆಗೆದಿಲ್ಲ. ಪಕ್ಕದ ಹೊಲದವರು ತೆಗೆದಿರಬಹುದು. ಕಂಬಗಳು ಅಲ್ಲಿಯೇ ಇವೆ. ಇನ್ನು ರೈತನ ಹೊಲ ವ್ಯಾಪ್ತಿಯಲ್ಲಿ 25 ಎಚ್ಪಿ ವಿದ್ಯುತ್ ಪರಿವರ್ತಕವಿದ್ದು, ಅದನ್ನು ಇವತ್ತೇ 63 ಎಚ್ಪಿ ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಅಳವಡಿಸಿ ರೈತನ ಹೊಲಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗುವುದು. ಬಳಿಕ ಅಕ್ರಮ-ಸಕ್ರಮ ಯೋಜನೆಯಡಿ ಅದನ್ನು ಸಕ್ರಮಗೊಳಿಸಲಾಗುವುದು. ಸದ್ಯಕ್ಕೆ ವಿದ್ಯುತ್ ಸಂಪರ್ಕ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್