ವೋಟರ್‌ ಐಡಿಗೆ ಆಧಾರ್‌ ಲಿಂಕ್‌-ಜಿಲ್ಲೆ ಗೆ 5ನೇ ಸ್ಥಾನ

ಮತದಾರರ ಗುರುತಿನ ಚೀಟಿಗೆ ಆಧಾರ್‌ ಕಾರ್ಡ್‌ ಸಂಖ್ಯೆ ಜೋಡಣೆಯಲ್ಲಿ ಶೇ. 21.41 ಪ್ರಗತಿ ಸಾಧನೆ

Team Udayavani, Aug 19, 2022, 3:44 PM IST

23

ಹಾವೇರಿ: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆ ಜೋಡಣೆಗೆ ಚುನಾವಣಾ ಆಯೋಗ ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವೋಟರ್‌ ಐಡಿಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆ ಆರಂಭಗೊಂಡಿದ್ದು, ಶೇ. 21.41ರಷ್ಟು ಪ್ರಗತಿ ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ಆ.1ರಿಂದ ಈ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಇದುವರೆಗೆ 12,70,440 ಮತದಾರರಲ್ಲಿ 2,71,988ರಷ್ಟು ಮತದಾರರ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ರಾಜ್ಯದಲ್ಲಿ ಜಿಲ್ಲೆ ಈ ಕಾರ್ಯದಲ್ಲಿ 5ನೇ ಸ್ಥಾನದಲ್ಲಿದೆ.

ಜಿಲ್ಲೆಯಲ್ಲಿ 6,51,543 ಪುರುಷ, 6,18,718 ಮಹಿಳೆಯರು ಹಾಗೂ 27ಜನರ ತೃತೀಯ ಲಿಂಗಿಗಳು ಸೇರಿ 12,70,440 ಮತದಾರರಿದ್ದಾರೆ. ಈಗಾಗಲೇ ಜಿಲ್ಲೆಯ 18 ವರ್ಷ ಮೇಲ್ಪಟ್ಟ 13,51,232 ಜನರಿಗೆ ಆಧಾರ್‌ ಕಾರ್ಡ್‌ ನೀಡಲಾಗಿದೆ. ಎಲ್ಲರೂ ತಮ್ಮ ಆಧಾರ್‌ ಸಂಖ್ಯೆಗಳನ್ನು ಮತದಾರರ ಚೀಟಿಗೆ ಲಿಂಕ್‌ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದ್ದಾರೆ.

ಆಧಾರ್‌ ಇಲ್ಲದವರಿಗೆ ಅನ್ಯ ಕಾರ್ಡ್‌ಗೆ ಅವಕಾಶ: ಈವರೆಗೆ ಆಧಾರ್‌ ಕಾರ್ಡ್‌ ಪಡೆಯದವರು ಮತದಾರರ ಚೀಟಿಗೆ ನರೇಗಾ ಜಾಬ್‌ ಕಾರ್ಡ್‌, ಬ್ಯಾಂಕ್‌, ಅಂಚೆ ಕಚೇರಿಯಿಂದ ನೀಡಲಾದ ಭಾವಚಿತ್ರವಿರುವ ಪಾಸ್‌ಪುಸ್ತಕಗಳು, ಕಾರ್ಮಿಕ ಮಂತ್ರಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮೆ ಸ್ಮಾರ್ಟ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಪಾನ್‌ಕಾರ್ಡ್‌, ಎನ್‌ಪಿಆರ್‌ ಅಡಿ ಆರ್‌ ಜಿಐ ಮೂಲಕ ನೀಡಲಾದ ಸ್ಮಾರ್ಟ್‌ಕಾರ್ಡ್‌, ಇಂಡಿಯನ್‌ ಪಾಸ್‌ಪೋರ್ಟ್‌, ಭಾವಚಿತ್ರವಿರುವ ಪಿಂಚಣಿ ದಾಖಲೆ, ಕೇಂದ್ರ, ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ದಿಮೆಗಳು ಅಥವಾ ಸಾರ್ವಜನಿಕ ನಿಯಮಿತ ಕಂಪನಿಗಳಿಂದ ಉದ್ಯೋಗಿಗಳಿಗೆ ನೀಡಲಾದ ಭಾವಿಚಿತ್ರರುವ ಸೇವಾ ಗುರುತಿನ ಚೀಟಿ, ಸಂಸತ್‌, ವಿಧಾನಸಭೆ, ವಿಪ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಮೂಲಕ ನೀಡಲಾದ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ಈ ದಾಖಲೆಗಳಲ್ಲಿ ಯಾವುದಾದರೊಂದನ್ನು ಅಪ್‌ ಲೋಡ್‌ ಮಾಡಬಹುದು. ಮತದಾರರ ಚೀಟಿಗೆ ಆಧಾರ್‌ ಜೋಡಣೆ ಕುರಿತು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ಹಾಗೂ ದುರ್ಬಲ ಪ್ರದೇಶಗಳಲ್ಲಿ ವಿಶೇಷ ಪ್ರಾಶಸ್ತÂ ನೀಡಲು ಚುನಾವಣಾ ಆಯೋಗ ಸೂಚಿಸಿದೆ.

ಜಿಲ್ಲೆಯ 6ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,470 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರು ತಮ್ಮ ಹೆಸರಿನೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿಕೊಳ್ಳಬೇಕು. ನಮೂನೆ-6ಬಿ ನಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿ ಸಿದ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಅಥವಾ ಸ್ವತಃ ಮತದಾರರೇ ತಮ್ಮ ಮೊಬೈಲ್‌ನಲ್ಲಿ ಆ್ಯಪ್‌ ಮುಖಾಂತರ ಆನ್‌ಲೈನ್‌ ಮೂಲಕ ಚುನಾವಣಾ ಆಯೋಗದ ನಿಗದಿತ ಸಾಫ್ಟ್‌ವೇರ್‌ಗಳ ಮೂಲಕ ಅರ್ಜಿ ಸಲ್ಲಿಸಿ ಆಧಾರ್‌ ಸಂಖ್ಯೆ ಜೋಡಣೆಗೆ ಅವಕಾಶ ಕಲ್ಪಿಸಲಾಗಿದೆ.

ಮತದಾರರ ಚೀಟಿಗೆ ಬೀಳಲಿದೆ ಕಡಿವಾಣ

ಮತದಾರರ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಇಲ್ಲದ್ದರಿಂದ ಒಬ್ಬರೇ ಎರಡು ಕಡೆಗಳಲ್ಲಿ ಮತದಾರರ ಚೀಟಿ ಪಡೆಯುವುದಕ್ಕೆ ಕಡಿವಾಣ ಬೀಳಲಿದೆ. ಬಹಳಷ್ಟು ಪ್ರಕರಣಗಳಲ್ಲಿ ಮದುವೆಯಾದ ನಂತರ ಮಹಿಳೆಯದ್ದು ತವರು ಮನೆ ಹಾಗೂ ಪತಿಯ ಮನೆಯಲ್ಲೂ ಮತದಾರರ ಗುರುತಿನ ಚೀಟಿಗಳು ಚಾಲ್ತಿಯಲ್ಲಿರುತ್ತವೆ. ಬಿಎಲ್‌ಒಗಳು ಹುಡುಕಿ ಈಗಾಗಲೇ ಅಂತಹ ಪ್ರಕರಣಗಳನ್ನು ಡಿಲೀಟ್‌ ಮಾಡುತ್ತಿದ್ದಾರೆ. ಆದರೂ, ಕೆಲವು ಹಾಗೆಯೇ ಉಳಿದುಕೊಂಡಿದ್ದವು. ಆಧಾರ್‌ ಲಿಂಕ್‌ ಆದರೆ ಒಂದು ಕಡೆಯಲ್ಲಿ ಮಾತ್ರ ವೋಟರ್‌ ಐಡಿ ಉಳಿದುಕೊಳ್ಳಲಿದೆ.

ಮತದಾರರ ಗುರುತಿನ ಚೀಟಿ ಹೊಂದಿರುವ ಜಿಲ್ಲೆಯ ಪ್ರತಿಯೊಬ್ಬ ಮತದಾರರು ತಮ್ಮ ವೋಟರ್‌ ಐಡಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಬೇಕು. ಈ ಕಾರ್ಯ ಯಶಸ್ವಿಯಾಗಲು, ದೋಷರಹಿತ ನಿಖರವಾದ ಮತದಾರರ ಪಟ್ಟಿ ತಯಾರಿಕೆಗೆ ಎಲ್ಲರೂ ಕೈಜೋಡಿಸಬೇಕು. ಮತದಾರರು ನೇರವಾಗಿ ವೆಬ್‌ಸೈಟ್‌ ಮೂಲಕ ಲಿಂಕ್‌ಗೆ ಅವಕಾಶವಿದೆ. ಇಲ್ಲವೇ, ನಿಮ್ಮ ಮತಗಟ್ಟೆಯ ಬಿಎಲ್‌ಒ ಬಳಿಯೂ ಅರ್ಜಿ ಸಲ್ಲಿಸಿ ಲಿಂಕ್‌ ಮಾಡಿಸಬಹುದು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.