ಅಪಘಾತ ರಹಿತ ಚಾಲನೆಗೆ ಆದ್ಯತೆ ಅಗತ್ಯ

ಡಿವೈಎಸ್ಪಿ ಎಂ.ಎಸ್‌.ಪಾಟೀಲ ಅಭಿಮತ ; ಚಾಲನಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Team Udayavani, Jul 15, 2022, 5:10 PM IST

21

ಹಾವೇರಿ: ಅಪಘಾತ ರಹಿತ ವಾಹನ ಚಾಲನೆಯಿಂದ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ಹೊರೆ ಕಡಿಮೆಯಾಗಿಸುವ ಜೊತೆಗೆ ಸಾರ್ವಜನಿಕರ ಪ್ರಾಣ ಹಾನಿ ತಡೆಯಬಹುದು. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಡಿವೈಎಸ್ಪಿ ಎಂ.ಎಸ್‌.ಪಾಟೀಲ ಹೇಳಿದರು.

ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗೀಯ ಕಚೇರಿ ಸಭಾಂಗಣದಲ್ಲಿ ಅಪಘಾತ ರಹಿತ ಚಾಲನಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಾಹನ ಚಾಲಕರು ಅಪಘಾತಗಳು ಸಂಭವಿಸದಂತೆ ಬಹಳ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಚಾಲಕರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಲ್ಲಿ ಅಪಘಾತಗಳು ಸಂಭವಿಸುವುದು ವಿರಳ. ಆದ್ದರಿಂದ, ಚಾಲಕರು ಸರಿಯಾದ ಸಮಯಕ್ಕೆ ನಿದ್ದೆ ಮಾಡಿ, ವಿಶ್ರಾಂತಿ ಪಡೆದು ಸಮಚಿತ್ತದಿಂದ ವಾಹನ ಚಲಾಯಿಸಬೇಕೆಂದು ಹೇಳಿದರು.

ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ್‌ ಮಾತನಾಡಿ, ಅಪಘಾತ ಆಕಸ್ಮಿಕವಾಗಿ ಸಂಭವಿಸುತ್ತವೆ. ಚಾಲಕರು ನಿರ್ಲಕ್ಷ್ಯ ವಹಿಸದೇ ಜಾಗ್ರತೆಯಿಂದ ವಾಹನ ಚಲಾಯಿಸಬೇಕು. ಇತ್ತೀಚೆಗೆ ಕೆಲವು ವರ್ಷಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಅಪಘಾತಗಳನ್ನು ತಪ್ಪಿಸಲು ಸಾಕಷ್ಟು ಮುಂಜಾಗ್ರತೆ ವಹಿಸುತ್ತಿದೆ. ಅಜಾಗರೂಕತೆ ಅಥವಾ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರ ಮೇಲೆ ಹದ್ದಿನ ಕಣ್ಣಿರಿಸಲಾಗುತ್ತಿದೆ. ಹಾಗಾಗಿ, ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ಅಪಘಾತಕ್ಕೀಡಾಗುವುದು ಕಡಿಮೆಯಾಗಿದೆ ಎಂದು ಹೇಳಿದರು.

ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಪಾಲಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆಯಾಗಿ ಬದಲಾಗುತ್ತಿದೆ. ಚಾಲಕರಲ್ಲಿ ಸಮಯ ಪ್ರಜ್ಞೆ, ಮುಂಜಾಗರೂಕತೆಗಳ ಜತೆಗೆ ಸಂಸ್ಥೆ ಕಡೆಯಿಂದ ಕಾಲಕಾಲಕ್ಕೆ ನೀಡಲಾಗುತ್ತಿರುವ ತರಬೇತಿ ಹಾಗೂ ಕಟ್ಟು ನಿಟ್ಟಿನ ನಿಯಮಾವಳಿಗಳು ಪೂರಕವಾಗಿವೆ ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಮಾತನಾಡಿ, ದೇಶದಲ್ಲಿ ಅನಾರೋಗ್ಯದ ಹೊರತಾಗಿಯೂ ಹೆಚ್ಚಾಗಿ ರಸ್ತೆ ಅಪಘಾತದಲ್ಲಿ ಮರಣ ಹೊಂದುತ್ತಿರುವವರ ಸಂಖ್ಯೆ ಅಧಿ ಕವಾಗಿದೆ. ಇದಕ್ಕೆ ವಾಹನ ಚಾಲಕರ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ಕಾರಣವಾಗಿದೆ. ವಾಹನಗಳನ್ನು ವೇಗವಾಗಿ ಚಲಾಯಿಸಬಾರದು. ಕುಟುಂಬದ ಸಮಸ್ಯೆ ಮತ್ತು ಕಚೇರಿ ಕೆಲಸದ ಒತ್ತಡದಲ್ಲಿ ವಾಹನ ಚಲಾಯಿಸುವುದರಿಂದ ಅಪಘಾತ ಸಂಭವಿಸುವುದು ಹೆಚ್ಚಾಗಿದೆ. ಕಾರಣ ವಾಹನ ಚಾಲಕರು ಏಕಾಗ್ರತೆಯಿಂದ ವಾಹನ ಚಲಾಯಿಸಬೇಕೆಂದು ಸಲಹೆ ನೀಡಿದರು.

ಒಂದೊಮ್ಮೆ ಅಪಘಾತ ಸಂಭವಿಸಿದಲ್ಲಿ ವಾಹನ ಚಾಲಕನ ಮೇಲೆ ಸೆಕ್ಷನ್‌ 279ರ ಅಡಿ ಕ್ರಿಮಿನಲ್‌ ಕೇಸ್‌ ದಾಖಲಿಸಿ ವಾಹನ ಚಾಲನಾ ಪರವಾನಗಿ ರದ್ದುಪಡಿಸಿ, ಜೈಲು ಶಿಕ್ಷೆ ವಿಧಿ ಸಲಾಗುತ್ತದೆ. ಆದ್ದರಿಂದ, ಚಾಲಕರು ಸುರಕ್ಷಿತವಾಗಿ ವಾಹನ ಚಲಾಯಿಸಬೇಕೆಂದು ಹೇಳಿದರು.

ಹುಬ್ಬಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲ ನಾರಾಯಣಪ್ಪ ಕುರುಬರ ಮಾತನಾಡಿ, ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರತಿ ವರ್ಷ 30 ಕೋಟಿ ರೂ. ಅಪಘಾತ ಪರಿಹಾರ ಪಾವತಿಸುತ್ತಿದೆ. ಇದಕ್ಕೆ ಸಂಸ್ಥೆಯ ಚಾಲಕರ ನಿರ್ಲಕ್ಷ್ಯತನ, ಅಜಾಗರೂಕತೆಯೇ ಕಾರಣವಾಗಿದೆ. ಹಾವೇರಿ ವಿಭಾಗದಿಂದ ಕಳೆದ ಏಳು ವರ್ಷದಲ್ಲಿ 22.16 ಕೋಟಿ ರೂ. ಅಪಘಾತ ಪರಿಹಾರ ಪಾವತಿಸಿದೆ. ಇದೇ ರೀತಿ, ಮುಂದುವರೆದಲ್ಲಿ ಸಂಸ್ಥೆ ಆರ್ಥಿಕವಾಗಿ ನಷ್ಟ ಅನುಭವಿಸುತ್ತದೆ. ಆದ್ದರಿಂದ ಎಲ್ಲರೂ ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

ಕಾರ್ಯಾಗಾರದಲ್ಲಿ ಹುಬ್ಬಳ್ಳಿ ಕೇಂದ್ರ ಕಚೇರಿ ಉಪ ಮುಖ್ಯಯೋಜನಾ ಮತ್ತು ಅಂಕಿ ಸಂಖ್ಯಾಧಿಕಾರಿ ಮಹದೇವಪ್ಪ ಮುಂಜಿ, ಹಾವೇರಿ ವಿಭಾಗೀಯ ಭದ್ರತಾ ಮತ್ತು ಜಾಗೃತಾಧಿಕಾರಿ ವಿ.ಎಚ್‌.ಜಗದೀಶ, ಹಾವೇರಿ ವಿಭಾಗೀಯ ಕಚೇರಿ ಆಡಳಿತಾಧಿಕಾರಿ ದಿವಾಕರ ಕೆ., ಹಾವೇರಿ ಶಹರ ಸಿಪಿಐ ಸುರೇಶ ಸಗರಿ, ಅಂಕಿಸಂಖ್ಯೆ ಸಹಾಯಕ ಸಂಚಾರ ಶಾಖೆಯ ವಿವೇಕಾನಂದ, ವಿಭಾಗೀಯ ಕಾರ್ಯಾಗಾರದ ಸಹಾಯಕ ಕುಶಲಕರ್ಮಿ ಚಂದ್ರು ಲಿಂಗಣ್ಣನವರ, ಸತೀಶ ಕಾಡನವರ ಇದ್ದರು.

ಮಲ್ಲಿಕಾರ್ಜುನ ಹಿಂಚಿಗೇರಿ ನಿರೂಪಿಸಿದರು.ಇತ್ತೀಚಿನ ಕೆಲವು ವರ್ಷಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಅಪಘಾತಗಳನ್ನು ತಪ್ಪಿಸಲು ಸಾಕಷ್ಟು ಮುಂಜಾಗ್ರತೆ ವಹಿಸುತ್ತಿದೆ. ಅಜಾಗರೂಕತೆ ಅಥವಾ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರ ಮೇಲೆ ಹದ್ದಿನ ಕಣ್ಣಿರಿಸಲಾಗುತ್ತಿದೆ. ಹಾಗಾಗಿ, ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಗಳು ಅಪಘಾತಕ್ಕೀಡಾಗುವುದು ಕಡಿಮೆಯಾಗಿದೆ. –ಅಶೋಕ ಪಾಟೀಲ್‌, ವಿಭಾಗೀಯ ಸಂಚಾರ ಅಧಿಕಾರಿ

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.