ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ
Team Udayavani, Jun 14, 2020, 7:03 AM IST
ಹಾವೇರಿ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಲ್ಲಿಯ ಅಂಬೇಡ್ಕರ್ ನಗರದಲ್ಲಿ ಸಂಭವಿಸಿದೆ. ರತ್ನವ್ವ ಗಾಳೆಪ್ಪನವರ ಎಂಬುವರ ಮನೆ ಬೆಂಕಿಗೆ ಆಹುತಿಯಾಗಿದ್ದು ಮನೆಯಲ್ಲಿನ ಟಿವಿ, ಫ್ರಿಡ್ಜ್, ಕ್ಯಾಮರ್, ಲೆನ್ಸ್, ಮಂಚ, ಬಟ್ಟೆಗಳು, ಅಡುಗೆ ಪಾತ್ರೆಗಳು ಸೇರಿದಂತೆ ಅಂದಾಜು ಎಂಟು ಲಕ್ಷ ರೂ. ಗಳಿಗೂ ಅಧಿಕ ಹಾನಿಯಾಗಿದೆ ಎಂದು ಕುಟುಂಬದವರು ಅಂದಾಜಿಸಿದ್ದಾರೆ.
ಬೆಂಕಿ ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಬೆಂಕಿ ಅವಘಡ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಆಗುವ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.