ಫುಡ್ ಪಾರ್ಕ್ ಸ್ಥಾಪನೆಗೆ ಕ್ರಮ


Team Udayavani, Jun 5, 2020, 4:10 PM IST

ಫುಡ್ ಪಾರ್ಕ್ ಸ್ಥಾಪನೆಗೆ ಕ್ರಮ

ಹಾವೇರಿ: ಕೃಷಿ ಪ್ರಧಾನ ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಫುಡ್‌ ಪಾರ್ಕ್‌ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಭರವಸೆ ನೀಡಿದರು.

ಇಲ್ಲಿಯ ಪ್ರವಾಸಿಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫುಡ್‌ ಪಾರ್ಕ್‌ ಸ್ಥಾಪನೆಯಿಂದ ಇಲ್ಲಿ ಬೆಳೆದ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ತಂದುಕೊಡುವಲ್ಲಿ ಸಹಕಾರಿಯಾಗಲಿದೆ. ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದ್ದು, ಈ ಅವಧಿಯಲ್ಲಿ ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಮೂರು ಸಾವಿರ ಕೋಟಿ ರೂ.ಗಳಿಗೂ ಅಧಿಕ ಅನುದಾನ ವಿವಿಧ ಯೋಜನೆಗಳಿಗೆ ಮಂಜೂರಾಗಿದೆ. ಇದರಲ್ಲಿ 2.25 ಕೋಟಿ ರೂ. ನೇರವಾಗಿ ಹಾವೇರಿ ಜಿಲ್ಲೆಗೆ ಮಂಜೂರಾಗಿದೆ. ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಶಿಕಾರಿಪುರ, ಶಿವಮೊಗ್ಗ ಸಂಪರ್ಕಿಸುವ 92 ಕಿ.ಮೀ.ಉದ್ದದ ನೂತನ ರೈಲು ಮಾರ್ಗ ಅನುಷ್ಠಾನಕ್ಕೆ 1700 ಕೋಟಿ ರೂ. ಮಂಜುರಾತಿ ದೊರೆತಿದೆ. ಹಾವೇರಿಯ ನೂತನ ವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭಕ್ಕೆ 600 ಕೋಟಿ ರೂ. ಮಂಜೂರಾತಿ ದೊರೆತಿದ್ದು, 46 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಹಾವೇರಿ ಜಿಲ್ಲೆಯ 245 ಕಿ.ಮೀ. ರಸ್ತೆ ಅಭಿವೃದ್ಧಿಗೆ 159.25 ಕೋಟಿ ರೂ. ಹಾಗೂ ಗದಗ ಜಿಲ್ಲೆಯ 160 ಕಿ.ಮೀ. ರಸ್ತೆ ಅಭಿವೃದ್ಧಿ 109.85 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಕೇಂದ್ರ ರಸ್ತೆ ಭೂ ಸಾರಿಗೆ ಸಚಿವಾಲಯದಿಂದ ಗಜೇಂದ್ರಗಡ-ಉಣಚಗೇರಿ ಕ್ರಾಸ್‌ನಿಂದ ರಾಜೂರುವರೆಗೆ 12 ಕಿ.ಮೀ. ಉದ್ದ ಚತುಷ್ಪಥ ರಸ್ತೆ ಕಾಮಗಾರಿಗೆ 92 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಶಾಸಕ ನೆಹರು ಓಲೇಕಾರ, ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ಧರಾಜ ಕಲಕೋಟಿ, ಮಾಜಿ ಶಾಸಕ ಶಿವರಾಜ ಸಜ್ಜನರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಕಪ್ಪತಗುಡ್ಡ ಆಗಲಿ ಇಎಸ್‌ಝೆಡ್‌ : ಜೀವವೈವಿಧ್ಯ ತಾಣವಾಗಿರುವ ಕಪ್ಪತಗುಡ್ಡವನ್ನು ಪರಿಸರ ಸೂಕ್ಷ ¾ ವಲಯವನ್ನಾಗಿ (ಇಕೋ ಸೆನ್ಸಿಟಿವ್‌ ಝೋನ್‌) ಘೋಷಿಸಲು ಯಾವುದೇ ಅಭ್ಯಂತರವಿಲ್ಲ. ಆದರೆ, ಬಫರ್‌ ಝೋನ್‌ ವ್ಯಾಪ್ತಿಯಲ್ಲಿ 50-60 ಹಳ್ಳಿಗಳು ಬರಲಿದ್ದು, ಅಲ್ಲಿಯ ರೈತರ ಜಮೀನುಗಳಿಗೆ ಒಂದಿಷ್ಟು ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ಸ್ಥಳೀಯ ರೈತರಿಗೆ ಹಾಗೂ ಪರಿಸರಕ್ಕೆ ತೊಂದರೆ ಆಗದಂತೆ ಸೂಕ್ಷ್ಮ ವಲಯವನ್ನಾಗಿ ಮಾಡಲಿ ಎಂದು ಸಂಸದ ಶಿವಕುಮಾರ ಉದಾಸಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಹಾಯಧನ : ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಹಾವೇರಿ ಜಿಲ್ಲೆಯ 1,81,431 ಹಾಗೂ ಗದಗ ಜಿಲ್ಲೆಯ 1,28,708 ಜನರಿಗೆ ತಲಾ ಎರಡು ಸಾವಿರದಂತೆ 60 ಕೋಟಿ ರೂ. ರೈತರ ಖಾತೆಗೆ ಜಮಾ ಮಾಡಲಾಗಿದೆ. ಮಹಿಳಾ ಜನಧನ್‌ ಯೋಜನೆಯಡಿ ಹಾವೇರಿ ಜಿಲ್ಲೆಯ 2.33 ಲಕ್ಷ ಹಾಗೂ ಗದಗ ಜಿಲ್ಲಾ 2.50 ಲಕ್ಷ ಜನರಿಗೆ ತಲಾ ಐದು ನೂರರಂತೆ ಎರಡು ತಿಂಗಳ ಪ್ರೋತ್ಸಾಹಧನವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಉಜ್ವಲ್‌ ಯೋಜನೆಯಡಿ ಹಾವೇರಿ ಜಿಲ್ಲೆಯ 80 ಸಾವಿರ ಹಾಗೂ ಗದಗ ಜಿಲ್ಲೆಯ 45 ಸಾವಿರ ಜನರಿಗೆ ಉಚಿತ ಸಿಲೆಂಡರ್‌ ಪೂರೈಸಲಾಗಿದೆ. ಗರೀಬ್‌ ಕಲ್ಯಾಣ ಯೋಜನೆಯಡಿ ಹಾವೇರಿ ಜಿಲ್ಲೆಯ 3,68,607 ಕುಟುಂಬಗಳಿಗೆ ಹಾಗೂ ಗದಗ ಜಿಲ್ಲೆಯ 2,28,830 ಕುಟುಂಬಗಳಿಗೆ ಎರಡು ತಿಂಗಳ ಉಚಿತ ಪಡಿತರ ವಿತರಿಸಲಾಗಿದೆ ಎಂದು ತಿಳಿಸಿದರು.

ಸ್ವಚ್ಛ ಭಾರತ ಮಿಷನ್‌ : ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಹಾವೇರಿ ಜಿಲ್ಲೆಗೆ 3.50 ಕೋಟಿ ರೂ. ಹಾಗೂ ಗದಗ ಜಿಲ್ಲೆಗೆ 8.28 ಕೋಟಿ ರೂ. ಮಂಜೂರಾತಿ ದೊರೆತಿದೆ. 15ನೇ ಹಣಕಾಸು ಯೋಜನೆಯಡಿ ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 20.88 ಕೋಟಿ ರೂ., ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 103.75 ಕೋಟಿ ರೂ. ಹಾಗೂ ಗದಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 24.69 ಕೋಟಿ ರೂ. ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 58.84 ಕೋಟಿ ರೂ. ಮಂಜೂರಾಗಿದೆ ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ ಯೋಜನೆಯಡಿ ಹಾವೇರಿ ಜಿಲ್ಲೆಯ 26,011 ಜನ ವೈದ್ಯಕೀಯ ಚಿಕಿತ್ಸೆ ಪಡೆದಿದ್ದು, 37.08 ಕೋಟಿ ರೂ. ಹಾಗೂ ಗದಗ ಜಿಲ್ಲೆಯ 13,527 ಜನರು ವೈದ್ಯಕೀಯ ಚಿಕಿತ್ಸೆ ಪಡೆದಿದ್ದು, 24.94 ಕೋಟಿ ರೂ. ನೆರವು ನೀಡಲಾಗಿದೆ. ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ 20.32 ಕೋಟಿ ರೂ. ಖರ್ಚು ಮಾಡಲಾಗಿದೆ. 7.25 ಲಕ್ಷ ಮಾನವ ದಿನಗಳನ್ನು ಸೃಜಿಸಿ ಜನರಿಗೆ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.