ಕಬ್ಬು ಬೆಳೆಗಾರರಿಗೆ ಮುಂಗಡ ಸಾಲದ ಆಮಿಷ

ಬೇರೆಡೆ ಕಬ್ಬು ಮಾರಾಟ ಮಾಡಿದರೆ ದಂಡ

Team Udayavani, Nov 27, 2020, 4:46 PM IST

Advance-loan-lure-for-sugarcane-growers

ಹಾವೇರಿ: ಕಬ್ಬು ಬೆಳೆಗಾರರಿಗೆ ಮುಂಗಡ ಸಾಲ ನೀಡುವ ಆಮಿಷವೊಡ್ಡಿ, ತಾವು ಬೆಳೆದ ಕಬ್ಬನ್ನು ಬೇರೆಡೆಗೆ ಮಾರಾಟ ಮಾಡಿದರೆ ದಂಡ ವಿ ಧಿಸುವ ನಿಬಂಧನೆ ಹೇರಿ ತಾಲೂಕಿನ ಸಂಗೂರು ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆದಾರರು ಕಬ್ಬು ಬೆಳೆಗಾರರೊಂದಿಗೆ ಅನ ಧಿಕೃತವಾಗಿ ಒಪ್ಪಂದ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ತಾಲೂಕಿನ ಸಂಗೂರು ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆದಾರರು ಕಾರ್ಖಾನೆಗೆ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳಿಗೆ ಕಬ್ಬು ಪೂರೈಕೆಗೆ ಸಂಬಂಧಪಟ್ಟಂತೆ ಒಪ್ಪಂದ ಮಾಡಿಕೊಳ್ಳುತ್ತಿದೆ. ಒಪ್ಪಂದ ಪತ್ರದಲ್ಲಿನ ಕೆಲ ಷರತ್ತುಗಳಿಂದ ವರ್ಷಪೂರ್ತಿ ಕಷ್ಟಪಟ್ಟು, ಶ್ರಮ ವಹಿಸಿ ಬೆಳೆದ ಕಬ್ಬನ್ನು ತಮಗೆ ಬೇಕಾದ ಕಾರ್ಖಾನೆಗಳಿಗೆ ಮಾರಾಟ ಮಾಡುವಂತಿಲ್ಲ ಎಂಬ ಅಂಶ ಉಲ್ಲೇಖವಾಗಿದ್ದು ಕಬ್ಬು ಬೆಳೆಗಾರರು ಆಕ್ರೋಶಗೊಳ್ಳುವಂತೆ ಮಾಡಿದೆ.

ರೈತರಿಗೆ ಮಾರಕ: 2020-21ನೇ ಹಂಗಾಮಿನ ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ಕಬ್ಬು ಪೂರೈಕೆ ಮಾಡುವ ಹಾಗೂ ಕೊಳ್ಳಲು ಕಬ್ಬು ಬೆಳೆಗಾರರೊಂದಿಗೆ ಮಾಡಿಕೊಂಡ ಒಪ್ಪಂದ ಪತ್ರದಲ್ಲಿರುವಂತೆ ರೈತರು ಕಾರ್ಖಾನೆಗಾಗಿ ಕಾಯ್ದಿಟ್ಟ ಕ್ಷೇತ್ರದಲ್ಲಿನ ಕಬ್ಬನ್ನು 2021ರ ಫೆಬ್ರವರಿ ತಿಂಗಳಿಗಿಂತ ಮೊದಲೇ ನಮ್ಮ ಕಾರ್ಖಾನೆಗೆ ಆಗಲಿ ಅಥವಾ ಬೇರೆ ಕಾರ್ಖಾನೆ, ಏಜೆಂಟರಿಗೆ ಆಗಲಿ ಪೂರೈಸಿದರೆ ಅಂತಹ ಕಾಯ್ದಿಟ್ಟ ಪ್ರದೇಶಕ್ಕೆ ಪಡೆದಂತೆ ಮುಂಗಡ ಸಾಲದ ಹಣ ಹಾಗೂ ಬ್ಯಾಂಕ್‌ ವಿಧಿಸುವ ಬಡ್ಡಿ ಸಮೇತ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ:ಗ್ರಾಮೀಣ ನಿವೇಶನ ರಹಿತರಿಗೆ ಸೂರು

ಅಲ್ಲದೆ ಕಾಯ್ದಿಟ್ಟ ಕ್ಷೇತ್ರಕ್ಕೆ ಎಕರೆಗೆ 5,000 ರೂ.ನಂತೆ ದಂಡ ಸಹ ರೈತನೇ ಭರಿಸಬೇಕೆಂಬ ಷರತ್ತು ವಿಧಿ ಸಲಾಗಿದೆ. ಇದು ಕಬ್ಬು ಬೆಳೆಗಾರರಿಗೆ ಮಾರಕವಾಗಿದ್ದು, ಬೇರೆ ಕಡೆ ಕಬ್ಬನ್ನು ಮಾರದಂತೆ ಕಬ್ಬು ಬೆಳೆಗಾರರನ್ನು ಕಟ್ಟಿ ಹಾಕಲು ಕಾರ್ಖಾನೆಯವರು ಈ ತಂತ್ರ ಮಾಡುತ್ತಿದ್ದಾರೆಂದು ಕಬ್ಬು ಬೆಳೆಗಾರರು ದೂರಿದ್ದಾರೆ.

 ಗುತ್ತಿಗೆದಾರರಿಂದ ಆಮಿಷ: ಕಾರ್ಖಾನೆಯ ಗುತ್ತಿಗೆದಾರರು ಮಾಡಿಕೊಳ್ಳುತ್ತಿರುವ ಒಪ್ಪಂದದಲ್ಲಿನ ಕೆಲ ನಿಬಂಧನೆಗಳು ಕಬ್ಬು ಬೆಳೆಗಾರರನ್ನು ಆಮಿಷಕ್ಕೊಳಗಾಗುವಂತೆ ಮಾಡಿವೆ. ಒಪ್ಪಂದ ಪತ್ರದಲ್ಲಿರುವಂತೆ ಕಾಯ್ದಿರಿಸಿದ ಕಬ್ಬಿನ ಕ್ಷೇತ್ರಕ್ಕೆ ಪ್ರತಿ ಎಕರೆಗೆ 20 ಸಾವಿರ ರೂ.ನಂತೆ ಮುಂಗಡ ಸಾಲವೆಂದು ಡಿಸೆಂಬರ್‌-ಜನವರಿ ತಿಂಗಳಲ್ಲಿ ಬ್ಯಾಂಕ್‌ ಮೂಲಕ ನೀಡಲಾಗುವುದು ಎಂಬ ಆಮಿಷ ಒಡ್ಡುವ ಮೂಲಕ ಕಬ್ಬು ಬೆಳೆಗಾರರನ್ನು ಕಾರ್ಖಾನೆಯತ್ತ ಸೆಳೆಯುವ ತಂತ್ರಕ್ಕೆ ಗುತ್ತಿಗೆದಾರರು ಮುಂದಾಗಿದ್ದಾರೆ.

ಮುಂಗಡ ಸಾಲ ನೀಡಲಾಗುತ್ತದೆ ಎಂಬ ಕಾರಣದಿಂದ ಅನೇಕ ಕಬ್ಬು ಬೆಳೆಗಾರರು ಒಪ್ಪಂದ ಪತ್ರಕ್ಕೆ ಮುಂದಾಗುತ್ತಿದ್ದಾರೆ. ಮುಂಗಡ ಹಣ ಸಿಗುತ್ತದೆ ಎಂಬ ಆಸೆಯಿಂದ ಒಪ್ಪಂದ ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ಬೇರೆ ಕಾರ್ಖಾನೆಗಳಲ್ಲಿ ಹೆಚ್ಚಿನ ದರ ಇದ್ದರೂ ಅಲ್ಲಿಗೆ ಕಬ್ಬು ಮಾರಾಟ ಮಾಡಲು ರೈತರಿಗೆ ಸಾಧ್ಯವಾಗದ ಸ್ಥಿತಿ ಎದುರಾಗಬಹುದು. ಅಲ್ಲದೇ ಈ ಒಪ್ಪಂದ ಮುರಿದುಕೊಂಡು ಒಂದು ವೇಳೆ ರೈತ ಬೇರೆಡೆ ಕಬ್ಬು ಮಾರಾಟ ಮಾಡಿದ್ದೇ ಆದರೆ ಪ್ರತಿ ಎಕರೆಗೆ 5 ಸಾವಿರ ರೂ.ನಂತೆ ದಂಡ ವಿಧಿ ಸುವ ಹಕ್ಕು ಕಾರ್ಖಾನೆ ಹೊಂದಿರುತ್ತದೆ ಎಂದು ಒಪ್ಪಂದ ಪತ್ರದಲ್ಲಿನ ಷರತ್ತುಗಳಲ್ಲಿ ಕಾಣಿಸಲಾಗಿದೆ.

 

-ಸಂಗೂರು ಕಾರ್ಖಾನೆಯ ಗುತ್ತಿಗೆದಾರು ಅನ ಧಿಕೃತವಾಗಿ ಕಬ್ಬು ಬೆಳೆಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಕಬ್ಬು ಬೆಳೆಗಾರರನ್ನು ಹಿಡಿದಿಟ್ಟುಕೊಳ್ಳುವ ತಂತ್ರಕ್ಕೆ ಮುಂದಾಗಿದ್ದಾರೆ. ಈ ಮೂಲಕ ಕಾರ್ಖಾನೆಯ ಗುತ್ತಿಗೆದಾರರು ಕಬ್ಬು ಬೆಳೆಗಾರರ ಮೇಲೆ ಪ್ರಹಾರ ನಡೆಸುತ್ತಿದ್ದು, ಸರ್ಕಾರ ಮಧ್ಯ ಪ್ರವೇಶಿಸಿ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು.

ಶಿವಾನಂದ ಗುರುಮಠ, ರಾಜ್ಯಾಧ್ಯಕ್ಷರು, ಕಬ್ಬು ಬೆಳೆಗಾರರ ಸಂಘ

ವೀರೇಶ ಮಡ್ಲಾರ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.