![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವೈಜ್ಞಾನಿಕವಾಗಿ ಬೆಳೆ ಬೆಳೆಯಲು ರೈತರಿಗೆ ಸಲಹೆ
Team Udayavani, Jun 1, 2020, 4:05 PM IST
![ವೈಜ್ಞಾನಿಕವಾಗಿ ಬೆಳೆ ಬೆಳೆಯಲು ರೈತರಿಗೆ ಸಲಹೆ](https://www.udayavani.com/wp-content/uploads/2020/06/Hv-tdy-3-620x340.jpg)
ರಾಣಿಬೆನ್ನೂರ: ಕೃಷಿ ಪ್ರಭಲವಾಗಿದ್ದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಸರ್ಕಾರ ರೈತರಿಗೆ ಮೂಲ ಸೌಲಭ್ಯ ಒದಗಿಸಲು ಮುಂದಾಗಿದ್ದು, ಇದರ ಸದುಪಯೋಗವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಮಳೆಗಾಲದಲ್ಲಿ ರೈತರಿಗೆ ಅಪ್ಪರ್ ತುಂಗಾ ಕಾಲುವೆಯಿಂದ ಆಗುವ ತೊಂದರೆ ಕುರಿತು ತಾಲೂಕಿನ ಚಿಕ್ಕಮಾಗನೂರ ಗ್ರಾಮದ ಅಪ್ಪರ್ ತುಂಗಾ ಕಾಲುವೆ ಹಾಗೂ ಸಂಪರ್ಕ ರಸ್ತೆ ವೀಕ್ಷಿಸಿ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಬಹುತೇಕ ವಿದ್ಯಾವಂತರು ಇನ್ನು ಮುಂದೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದನ್ನು ಭವಿಷ್ಯದಲ್ಲಿ ಕಾಣಬಹುದು ಎಂದರು.
ಇದರಿಂದ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಾಗಲಿದೆ. ಇನ್ನು ಮುಂದೆ ಕೃಷಿ ಒಂದು ಉದ್ದಿಮೆಯಾಗಿ ಪರಿವರ್ತನೆಯಾಗಲಿದೆ. ಇದರ ಪೂರ್ವಕವಾಗಿ ಸರ್ಕಾರ ರೈತರಿಗೆ ವಿದ್ಯುತ್ ಮತ್ತು ನೀರಾವರಿ ಸೌಲಭ್ಯ ಸೇರಿದಂತೆ ಪಶು ಸಾಕಾಣಿಕೆ ಉತ್ತೇಜನ ನೀಡಲಿದೆ. ಆದಕಾರಣ ಯುವಕರು ಬೆಳೆ ವೈಜ್ಞಾನಿಕವಾಗಿ ಬೆಳೆಯಲು ಮುಂದಾಗಬೇಕು ಎಂದರು.
ಅಪ್ಪರ್ ತುಂಗಾ ಕಾಲುವೆಯಿಂದ ರೈತರಿಗೆ ಅನುಕೂಲಕರವಾದ ರೀತಿಯಲ್ಲಿ ನೀರು ಹರಿಸಲಾಗುವುದು. ಮಳೆಗಾಲದಲ್ಲಿ ಕಾಲುವೆ ಒಡೆದು ರೈತರ ಬೆಳೆ ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಮುಖ್ಯ ಕಾಲುವೆಯಿಂದ ಉಪಕಾಲುವೆ ಮೂಲಕ ನೀರು ಹರಿಸಲು ಹಾಗೂ ಉಪಕಾಲುವೆಗಳನ್ನು ಸದ್ಯದಲ್ಲಿಯೇ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದರು.
ಅಪ್ಪತುಂಗಾ ಯೋಜನೆಯ ಅಭಿಯಂತರ ಆನಂದ ಕುಲಕರ್ಣಿ, ರವಿಕುಮಾರ ಟಿ., ಮನು ಕೆ. ಮತ್ತು ರೈತರಾದ ಸಿದ್ದಣ್ಣ ಕೆಂಚಕ್ಕನವರ, ರಮೇಶ ಯಡಚಿ, ಶಿವನಾಗಪ್ಪ ಕಿಟ್ಟದ, ಜಯಣ್ಣ ಕರೆಡೇರ, ಮಹೇಶ ಸಿರಗೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.