ದೇಶಕ್ಕೆ ಕೃಷಿ ಚಟುವಟಿಕೆಯೇ ಆಧಾರ ಸ್ತಂಭ

ರೈತನ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತಾಗಿ, ದೇಶದ ರೈತ ಸ್ವಾವಲಂಬಿ ಜೀವನ ನಡೆಸಬೇಕೆಂದರು.

Team Udayavani, Feb 18, 2022, 6:14 PM IST

ದೇಶಕ್ಕೆ ಕೃಷಿ ಚಟುವಟಿಕೆಯೇ ಆಧಾರ ಸ್ತಂಭ

ಶಿಗ್ಗಾವಿ: ಸ್ವಾತಂತ್ರ್ಯ ನಂತರ ನಮ್ಮನಾಳಿದ ವಿದೇಶಿ ಸಂಸ್ಕೃತಿಯ ರಾಜಕಾರಣಿಗಳಿಗೆ ನಮ್ಮ ನಾಡಿನ ಕೃಷಿ ಕ್ಷೇತ್ರದ ಮಹತ್ವದ ಅರಿವಿಲ್ಲದ ಪರಿಣಾಮ ಇಂದಿನ ಕೃಷಿ ಕ್ಷೇತ್ರ ದುಸ್ಥಿತಿ ತಲುಪಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಹೇಳಿದರು.ತಾಲೂಕಿನ ಶಾಡಂಬಿ ಗ್ರಾಮದಲ್ಲಿ ಕೃಷಿ ಆಧಾರಿತ ಚಲನಚಿತ್ರದ ಬ್ಯಾನರ್‌ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮ ದೇಶದ ಕೈಗಾರಿಕೆ, ಆಹಾರ ಭದ್ರತೆ, ವಾಣಿಜ್ಯ, ಉದ್ಯೋಗ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಕೃಷಿ ಕ್ಷೇತ್ರದ ಚಟುವಟಿಕೆ ಸಂಪನ್ಮೂಲವೇ ಆಧಾರ. 60 ಲಕ್ಷ ಹಳ್ಳಿಯಿರುವ ಕೃಷಿ ಆಧಾರಿತ ನಮ್ಮ ನಾಡಿನಲ್ಲಿ ಸಂಪನ್ಮೂಲಕ್ಕೆ ಕೊರತೆಯಿರಲಿಲ್ಲ. ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕೆ ರೈತರನ್ನು ಕೆಟ್ಟ ಸ್ಥಿತಿಗೆ ತಂದಿಟ್ಟರು. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಆರಂಭವಾದ ಮಹದಾಯಿ ನೀರಾವರಿ ಯೋಜನೆಯ ಹೆಸರಿನಲ್ಲಿ 100 ಕೋಟಿ ವೆಚ್ಚದ ಯೋಜನೆ ಜಾರಿಗೆ ತರದೇ ವಿಳಂಬ ಮಾಡಿ ಸಾವಿರಾರು ಕೋಟಿಗೆ ತಂದು ಸಮಸ್ಯೆಯನ್ನು ಇಂದಿಗೂ ಜೀವಂತವಿಟ್ಟಿದ್ದಾರೆ.

ಮಹದಾಯಿ ಹೆಸರು ಹೇಳಿಕೊಂಡು ರಾಜಕಾರಣ ಮಾಡಿದರೇ ವಿನಃ ಇಂದಿಗೂ ಯೋಜನೆ ಹಾಗೆಯೇ ಇದೆ ಎಂದು ಟೀಕಿಸಿದರು. ಸುಮಾರು 2ಲಕ್ಷ ಹಳ್ಳಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಬದಲಾಗಿ ರಾಜಕಾರಣಿಗಳು ಬಾರ್‌ಗಳಿಗೆ ಪರವಾನಗಿ ನೀಡಿದ್ದಾರೆ.

ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷ ಕಳೆದರೂ ನಾವು ದೇಶಕ್ಕಾಗಿ ಮಾಡಿದ್ದೇನು ಎಂದು ಪ್ರಶ್ನಿಸಿದ ಅವರು, ಕುಡಿತದಿಂದ ಯುವಜನಾಂಗ ಹಾಳಾಗುತ್ತಿದೆ. ಅಲ್ಲದೇ, ರೈತರು ಕುಡಿತಕ್ಕೆ ಹೆಚ್ಚು ದಾಸರಾಗುತ್ತಿದ್ದಾರೆ. ನಾವು ದೇಶ ಕಟ್ಟುವ ಬದಲು ಶಿಕ್ಷಣ, ಸಾಮಾಜಿಕ ವ್ಯವಸ್ಥೆ ಹಾಳು ಮಾಡುತ್ತಿದ್ದೇವೆ. ನಮ್ಮನ್ನಾಳುವ ರಾಜಕಾರಣಿಗಳು ದೇಶದ ಕೃಷಿ ಕ್ಷೇತ್ರದ ಕುಂದುಕೊರತೆ ಯೋಜನೆ ರೂಪಿಸುವ ಬದ್ಧತೆ ಕಲಿಯಬೇಕು ಎಂದರು.

ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಬಯಲಾಟ ನಾಟಕಗಳು ಸಾಮಾಜಿಕ ಕ್ಷೇತ್ರದ ಬದಲಾವಣೆ ತರುತ್ತಿದ್ದವು. ಸದ್ಯ ಕೃಷಿ ಆಧಾರಿತ ಗ್ರಾಮೀಣ ಪರಿಸರದ ಪರಿಚಯ ಮಾಡಿಕೊಡುವ ಚಲನಚಿತ್ರ ತಯಾರಿಸುತ್ತಿರುವುದು ಅಭಿನಂದನಾರ್ಹ ಎಂದರು. ಕರ್ನಾಟಕ ರೈತ ಹೋರಾಟ ಸಂಘಟನೆಯ ವೀರೇಶ ಸ್ವರಬದಮಠ ಮಾತನಾಡಿ, ಕೃಷಿ ಕ್ಷೇತ್ರದ ನೂರಾರು ಸಮಸ್ಯೆಗಳ ಕುರಿತು ಸಾಕಷ್ಟು ಹೋರಾಟ ಮಾಡಿದ್ದೇವೆ. ರಾಜ್ಯಕ್ಕೆ ಬಹುದಿನಗಳಿಂದ ಬಾಕಿ ಇರುವ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕು.

ರೈತನ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತಾಗಿ, ದೇಶದ ರೈತ ಸ್ವಾವಲಂಬಿ ಜೀವನ ನಡೆಸಬೇಕೆಂದರು. ರೈತ ಹೋರಾಟಗಾರ ವರುಣಗೌಡ್ರ ಪಾಟೀಲ, ಕಿರಣಗೌಡ ಪಾಟೀಲ ಕುಟುಂಬಸ್ಥರು, ಪೊಲೀಸ್‌ ಅಧಿಕಾರಿ ಮಹದೇವ ಯಲಿಗಾರ, ನಟಿ ಸಿರಿ, ಚಿತ್ರ ನಿರ್ಮಾಪಕ ಸೋಮಣ್ಣ, ನಿರ್ದೇಶಕ ಬಸವರಾಜ ಕುರಗೋಡಿ, ರೈತಪರ ಸಂಘಟನೆಗಳ ಸದಸ್ಯರು ಇದ್ದರು. ಕಾರ್ಯಕ್ರಮದಲ್ಲಿ ಕಲಾವಿದರು, ರೈತಪರ ಹೋರಾಟಗಾರರನ್ನು ಸನ್ಮಾನಿಸಲಾಯಿತು. ಕಲಾವಿದ ಶರೀಫ ಮಾಕನವರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

bommaii

Haveri; ಕಾಂಗ್ರೆಸ್ ನವರೂ ಭಾರತ ಮಾತೆಗೆ ಜೈ ಕೂಗಲಿ…: ಬಸವರಾಜ ಬೊಮ್ಮಾಯಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.