ರೈತರಿಗೆ ಕೃಷಿ ವಿಜ್ಞಾನಿಗಳ ಪಾಠ


Team Udayavani, Jul 12, 2020, 12:46 PM IST

ರೈತರಿಗೆ ಕೃಷಿ ವಿಜ್ಞಾನಿಗಳ ಪಾಠ

ರಾಣಿಬೆನ್ನೂರ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಅಶೋಕ ಪಿ. ಅವರ ನೇತೃತ್ವದ ವಿಜ್ಞಾನಿಗಳ ತಂಡ ಸವಣೂರ ತಾಲೂಕಿನ ಬರದೂರ ಗ್ರಾಮದ ಪ್ರಗತಿಪರ ರೈತ ಭರಮಪ್ಪ ಮಳಳ್ಳಿ, ಅಂದಾನಗೌಡ ಪಾಟೀಲ ಅವರ ಕ್ಷೇತ್ರಗಳಿಗೆ ಭೇಟಿ ನೀಡಿತು.

ಈ ಸಮಯದಲ್ಲಿ ಹೆಸರು ಬೆಳೆಯಲ್ಲಿ ಹೊಸ ತಳಿಯ ಕುರಿತು ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಯಿತು. ಹೊಸ ತಳಿಯು ಪ್ರತಿ ಎಕರೆಗೆ 6-7 ಕ್ವಿಂಟಲ್‌ ಇಳುವರಿಯಿದ್ದು ಸ್ಥಳೀಯ ತಳಿಗಳಿಂತ ಹೆಚ್ಚಿನ ಇಳುವರಿಯೊಂದಿಗೆ ಬೆಳೆಯಬಹುದು ಎಂದು ತಿಳಿಸಿದರು.

ಬಿತ್ತನೆ ಅಂತರವನ್ನು ಸಾಲಿನಿಂದ ಸಾಲಿಗೆ 30 ಸೆಮೀ ಹಾಗೂ ಬೀಜದಿಂದ ಬೀಜಕ್ಕೆ 7.5 -10 ಸೆಮೀ ಅಂತರ ಇರುವಂತೆ ಬಿತ್ತನೆ ಮಾಡಿದರೆ ಹೆಚ್ಚಿನ ಇಳುವರಿ ಪಡೆಯಬಹುದು. ಸಮಗ್ರ ಬೆಳೆ ಪದ್ಧತಿಗಳಾದ ಜೈವಿಕ ಗೊಬ್ಬರವಾದ ರೈಜೋಬಿಯಂದಿಂದ ಬೀಜೋಪಚಾರ ಮಾಡುವುದರ ಜೊತೆಗೆ ಬಿತ್ತಿದ 25 ದಿನಗಳ ನಂತರ 2 ಸಲ ಎಡೆಕುಂಟೆ ಹಾಯಿಸುವುದು. ನಂತರ ಹೂವಾಡುವ ಮತ್ತು ಕಾಳು ಕಟ್ಟುವ ಸಮಯದಲ್ಲಿ ಶೇ.1ರ 19:19:19 (10ಗ್ರಾಂ/ ಲೀಟರ್‌ ನೀರಿಗೆ) ಅಥವಾ ಶೇ. 2ರ ಡಿ.ಎ.ಪಿ. (20 ಗ್ರಾಂ ಡಿ.ಎ.ಎಪಿ. ಪ್ರತಿ ಲೀಟರ್‌ ನೀರಿಗೆ) ಸಿಂಪರಣೆ ಮಾಡಬೇಕು. ಇದರಿಂದ ಕಾಯಿಗಳ ಸಂಖ್ಯೆ ಹೆಚ್ಚಾಗಲಿದ್ದು, ಕಾಳುಗಳ ಗಾತ್ರ ಸಹ ದೊಡ್ಡದಾಗುವುದರಿಂದ ರೈತರಿಗೆ ಲಾಭದಾಯಕ ಎಂದು ವಿವರಿಸಿದರು.

ಹೆಸರು ಬೆಳೆ ಬಿತ್ತಿದ 20-25 ದಿನಗಳ ನಂತರ ಎಲೆ ಕತ್ತರಿಸುವ ಕೀಟ, ಕಾಂಡ ಕೊರಕ ನೊಣ ಮತ್ತು ರಸ ಹೀರುವ ಕೀಟಗಳ ಬಾಧೆ ಕಂಡು ಬರುತ್ತದೆ. ಎಲೆ ಕತ್ತರಿಸುವ ಮತ್ತು ಕಾಂಡ ಕೊರಕ ನೊಣಗಳ ಬಾಧೆ ಕಂಡು ಬಂದಾಗ ಅವುಗಳ ಹತೋಟಿಗಾಗಿ 0.2 ಗ್ರಾಂ ಡೈಯಾಮೆಥಾಕ್ಸಾಮ್‌ ಅಥವಾ 1 ಮಿಲೀ ಮೊನೊಕ್ರೋಟೋಫಾಸ್‌ 30 ಇ.ಸಿ. ಪ್ರತಿ ಲೀಟರ್‌ ಬೆರೆಸಿ ಸಿಂಪರಣೆ ಮಾಡಬೇಕು ಎಂದರು. ವಿಜ್ಞಾನಿಗಳಾದ ಡಾ| ರಾಜಕುಮಾರ ಜಿ.ಆರ್‌., ಡಾ| ಶಿವಮೂರ್ತಿ ಅವರು ರೈತರೊಂದಿಗೆ ಇತರ ಬೆಳೆಗಳ ಬಗ್ಗೆ ಚರ್ಚಿಸಿದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.