ಇಂದಿನಿಂದ ಅಕ್ಕಿಆಲೂರು ಉತ್ಸವ


Team Udayavani, Feb 12, 2020, 1:28 PM IST

hv-tdy-1

ಅಕ್ಕಿಆಲೂರು: ಲಿಂ| ಹಾನಗಲ್ಲ ಕುಮಾರ ಮಹಾ ಶಿವಯೋಗಿಗಳ 90ನೇ ಹಾಗೂ ಲಿಂ| ಚನ್ನವೀರ ಮಹಾಶಿವಯೋಗಿಗಳ 11ನೇ ಪುಣ್ಯಸ್ಮರಣೋತ್ಸವ ಮತ್ತು ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಇದೇ ಫೆ.12 ರಿಂದ ಫೆ.15ರ ವರೆಗೆ ಅಕ್ಕಿಆಲೂರ ಉತ್ಸವ-2020 ನಡೆಯಲಿದೆ.

ಫೆ. 12ರಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಶ್ರೀಗಳು ಷಟಸ್ಥಲ ಧ್ವಜಾ ರೋಹಣ ನೆರವೇರಿಸುವುದರ ಮೂಲಕ ಅಕ್ಕಿಆಲೂರ ಉತ್ಸವ -2020ಕ್ಕೆ ಚಾಲನೆ ನೀಡುವರು. ನಂತರ ಮಹಿಳೆಯರಿಂದ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯ ಕ್ರಮ ನಡೆಯಲಿದೆ. ಸಂಜೆ 6ಕ್ಕೆ ಶ್ರೀಮಠದ ಆವರಣದಲ್ಲಿ ನಡೆಯುವ ಸಮಾಜಕ್ಕೆ ಮಠಗಳ ಕೊಡುಗೆ ಕಾರ್ಯಕ್ರಮದ ಸಾನ್ನಿಧ್ಯ ವನ್ನು ಬಾಳೂರಿನ ಅಡವಿಸ್ವಾಮಿಮಠದ ಕುಮಾರ ಶ್ರೀಗಳು ವಹಿಸಲಿದ್ದು, ಹುಬ್ಬಳ್ಳಿಯ ರುದ್ರಾಕ್ಷಿ ಮಠದ ಬಸವಲಿಂಗ ಶ್ರೀಗಳು ಅಧ್ಯಕ್ಷತೆ ವಹಿಸುವರು. ನವಲ ಗುಂದ ಗವಿಮಠದ ಬಸವಲಿಂಗ ಶ್ರೀಗಳು ನೇತೃತ್ವ ವಹಿಸುವರು. ಹೂವಿನಶಿಗ್ಲಿಯ ವಿರಕ್ತಮಠದ ಚನ್ನವೀರ

ಶ್ರೀಗಳು ಅನುಭ ವಾಮೃತ ನುಡಿಗಳನ್ನಾಡುವರು. ಕೂಡಲದ ಗುರುಮಹೇಶ್ವರ ಶಿವಾಚಾರ್ಯ ಶ್ರೀಗಳು ಸಮ್ಮುಖ ವಹಿಸುವರು. ನಿವೃತ್ತ ಅಭಿಯಂತರ ಸಿ.ಆರ್‌. ಬಳ್ಳಾರಿ, ಶಲವಡಿಯ ಷಣ್ಮುಖಯ್ಯ ಹಿರೇಮಠ ಪಾಲ್ಗೊಳ್ಳುವರು. ಪ್ರಸ್ತುತ ಕೆಎಎಸ್‌ ಉತ್ತೀರ್ಣರಾಗಿರುವ ಭುವನೇಶ್ವರಿ ಪಾಟೀಲ ಮತ್ತು ಶಿಕಾರಿಪುರದ ಬಿ.ಎಸ್‌. ಸತೀಶ ಶ್ರೀರಕ್ಷೆ ಸ್ವೀಕರಿಸುವರು. ಫೆ. 13 ರಂದು ಬೆಳಗ್ಗೆ 6ಕ್ಕೆ ವಿರಕ್ತಮಠದಿಂದ ಹಾನಗಲ್ಲಿನ ಕುಮಾರೇಶ್ವರ ಮಠಕ್ಕೆ ನಮ್ಮ ನಡಿಗೆ ಗುರುವಿನಡೆಗೆ ಪಾದಯಾತ್ರೆ ನಡೆಯಲಿದೆ. ಸಂಜೆ 6ಕ್ಕೆ ವಿರಕ್ತಮಠದ ಆವರಣದಲ್ಲಿ ನಡೆಯಲಿರುವ ಧರ್ಮಚಿಂತನ ಗೋಷ್ಠಿಯ ಸಾನ್ನಿಧ್ಯವನ್ನು ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು ವಹಿಸುವರು. ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಅಧ್ಯಕ್ಷತೆ ವಹಿಸವರು.

ಮೂಲೆಗದ್ದೆಯ ಚನ್ನಬಸವ ಶ್ರೀಗಳು, ಮುತ್ತಿನಕಂತಿಮಠ ಗುರುಪೀಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು, ಹೇರೂರಿನ ಗುಬ್ಬಿ ನಂಜುಂಡ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ನೇತೃತ್ವ ವಹಿಸುವರು. ಜನಹಿತ ರಕ್ಷಣಾ ವೇದಿಕೆಯ ಬಿ.ಕೆ.ಮೋಹನಕುಮಾರ ಪಾಲ್ಗೊಳ್ಳುವರು. ಫೆ. 14 ರಂದು ಬೆಳಗ್ಗೆ 9ಕ್ಕೆ ಶ್ರೀ ವೀರಭದ್ರೇಶ್ವರ ದೇವರ ಪುಷ್ಪ ರಥೋತ್ಸವ ಮತ್ತು ಗುಗ್ಗಳ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಮಹಾಪ್ರಸಾದ ನೆರವೇರಲಿದೆ. ಸಂಜೆ 6 ಗಂಟೆಗೆ ಶ್ರೀ ವೀರಭದ್ರೇಶ್ವರ ದೇವರ ಮಹಾ ರಥೋತ್ಸವ ನಡೆಯಲಿದೆ.

ಫೆ.15 ಬೆಳಗ್ಗೆ 6 ಗಂಟೆಗೆ ಮುತ್ತಿನ ಕಂತಿಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ದೀಕ್ಷಾ ಅಯ್ನಾಚಾರ ನೆರವೇರಲಿದೆ.ಮಧ್ಯಾಹ್ನ 1ಕ್ಕೆ ಮಹಾಪ್ರಸಾದ, ಸಂಜೆ 5 ಗಂಟೆಗೆ ಲಿಂ. ಹಾನಗಲ್ಲ ಕುಮಾರೇಶ್ವರರು ಮತ್ತು ಲಿಂ| ಚನ್ನವೀರೇಶ್ವರ ಮಹಾಶಿವಯೋಗಿಗಳ ಭಾವಚಿತ್ರದ ಭವ್ಯ ಮೆರವಣಿಗೆ ವಿವಿಧ ವಾದ್ಯ ವೈಭವಗಳೊಂದಿಗೆ ನೆರವೇರುವುದು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.