ಅಕ್ಕಿಆಲೂರು: ದೇಶದ ಸಾಹಿತ್ಯ ಲೋಕಕ್ಕೆ ಕನ್ನಡದ ಕೊಡುಗೆ ಅನನ್ಯ


Team Udayavani, Feb 6, 2024, 5:23 PM IST

ಅಕ್ಕಿಆಲೂರು: ದೇಶದ ಸಾಹಿತ್ಯ ಲೋಕಕ್ಕೆ ಕನ್ನಡದ ಕೊಡುಗೆ ಅನನ್ಯ

ಉದಯವಾಣಿ ಸಮಾಚಾರ
ಅಕ್ಕಿಆಲೂರು: ವಿಶ್ವಮಾನ್ಯವಾಗಿರುವ ಭಾರತ ದೇಶದಲ್ಲಿಂದು ನಡೆದಿರುವ ಸಾಕಷ್ಟು ಪೂರಕ ಬದಲಾವಣೆಗಳಿಗೆ ನಾವೆಲ್ಲರೂ
ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆಯ ವಿಷಯವಾಗಿದೆ. ದೇಶದ ಸಾರಸ್ವತ ಲೋಕಕ್ಕೆ ಕರುನಾಡಿನ ಕೊಡುಗೆ ಅಪಾರವಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಮುಖ್ಯಸ್ಥ ಡಾ| ಎ.ಸಿ. ವಾಲಿ ಹೇಳಿದರು.

ಪಟ್ಟಣದಲ್ಲಿ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದಿಂದ ಆಯೋಜಿಸಿದ್ದ 32ನೇ ಕನ್ನಡ ನುಡಿ ಸಂಭ್ರಮದ
ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾರನ್ನು ಕೇವಲವಾಗಿ ಕಾಣಬಾರದು. ಎಲ್ಲರಲ್ಲೂ ಅಸಾಮಾನ್ಯ
ಸಾಮರ್ಥವಿರುತ್ತದೆ. ಅದನ್ನು ಗುರುತಿಸುವ ಪ್ರಯತ್ನ ನಮ್ಮದಾಗಬೇಕು.

ಸಮಾಜದಲ್ಲಿ ಮಾನವೀಯತೆ ಮತ್ತು ಧರ್ಮದ ಗುಣಗಳು ಹೆಚ್ಚಾಗುತ್ತಿದೆ. ಕನ್ನಡ ಕಟ್ಟಲು ಸರ್ಕಾರದ ಮೇಲೆ ನಾವು ಅವಲಂಬಿತರಾಗದೇ, ಸ್ವಯಂ ಪ್ರೇರಣೆಯಿಂದ ನಾಡಾಭಿಮಾನ ರಾಷ್ಟ್ರೀಯ ಮನೋಧರ್ಮ, ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಭಾರತೀಯ ಸಂಸ್ಕೃತಿ ಮತ್ತು ಪ್ರಾಚೀನತೆಗೆ ಕನ್ನಡ ಬಹುದೊಡ್ಡ ಕೊಡುಗೆ ನೀಡಿದೆ. ಅದನ್ನು ನಾವೇ ಉಳಿಸಿಕೊಳ್ಳಬೇಕು. ನಮ್ಮ ಮೂಲಸನಾತನ ಸಂಸ್ಕೃತಿ, ಆಚರಣೆಗಳಿಗೆ ಹಿನ್ನಡೆಯಾಗದಂತೆ ನಾವು ಜಾಗೃತರಾಗಬೇಕು. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಬೇಕೆಂದರೂ ಸಿಗದ ನಮ್ಮ ಶ್ರೇಷ್ಠ ಆಚಾರ-ವಿಚಾರಗಳನ್ನು ನಾವೆ ಗೌರವಿಸಬೇಕು ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಸತೀಶ ಕುಲಕರ್ಣಿ ಮಾತನಾಡಿ, ಯುವ ಸಾಹಿತಿಗಳಿಗೆ ವಿನೂತನ ಆಲೋಚನೆಗಳಿರಬೇಕು. ವೈಚಾರಿಕತೆ ಮತ್ತು ನೈತಿಕತೆ ಆಧಾರದ ಮೇಲೆ ಸಾಹಿತ್ಯಗಳು  ರಚನೆಯಾಗಿ ಸಮುದಾಯದ ಬೆಳಕಾಗಿ ಪ್ರಜ್ವಲಿಸುವಂತಾಗಬೇಕು. ಗಡಿಭಾಗಗಳಲ್ಲಿ ಇಂದಿಗೂ ನಡೆದಿರುವ ಭಾಷೆ, ನೆಲ-ಜಲದ ಕುರಿತ ವೈರುಧ್ಯ ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದೆ. ಜನಪದ ಸಂಸ್ಕೃತಿಗೆ ಘಾಸಿಯಾದಾಗ ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದರು.

ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ನ್ಯಾಯವಾದಿ ಸಂದೀಪ ಪಾಟೀಲ ಮಾತನಾಡಿ, ಕನ್ನಡ ಭಾಷೆ ಬೆಳೆಯುವುದು ಜೈಕಾರ
ಹಾಕುವುದರಿಂದಲ್ಲ ಬದಲಿಗೆ ಓದುವುದು, ಬರೆಯುವುದು ಮತ್ತು ಮಾತನಾಡುವುದರ ಮೇಲೆ ಕನ್ನಡದ ಅಸ್ತಿತ್ವ ಅಡಗಿದೆ. ರಾಷ್ಟ್ರೀಯ ಮನೋಧರ್ಮ, ನಾಡಾಭಿಮಾನ ಅಳವಡಿಸಿಕೊಂಡರೆ ಶಿಕ್ಷಣವಿಲ್ಲದಿದ್ದರು ಜಗತ್ತು ಆಳುವ ನೈತಿಕ ಆತ್ಮವಿಶ್ವಾಸ ನಮ್ಮಲ್ಲಿ ಕರಗತವಾಗುತ್ತದೆ ಎಂದರು.

ವಿರಕ್ತಮಠದ ಶಿವಬಸವ ಶ್ರೀಗಳು ಮಾತನಾಡಿದರು. ನಂತರ ಪ್ರಶಾಂತ ದೈವಜ್ಞ ವಿರಚಿತ ಬಾಬಣ್ಣನ ಚುಟುಕುಗಳು ಕೃತಿ
ಬಿಡುಗಡೆಗೊಂಡಿತು. ಹಾವೇರಿ ಪೃಥ್ವಿ ನೃತ್ಯ ಲೋಕ ತಂಡದಿಂದ, ಕಾಲೇಜು ವಿಭಾಗದಿಂದ ನಡೆದ ನೃತ್ಯ ಸಂಭ್ರಮ ಮನಸೂರೆಗೊಂಡಿತು. ಶಿವಮೊಗ್ಗದ ಅನುಷಾ ಮೇಲೋಡಿಸ್‌, ಸರಿಗಮಪ ಖ್ಯಾತಿಯ ಮಹನ್ಯಾ ಪಾಟೀಲ ಗೀತ ಸಂಭ್ರಮ ನಡೆಸಿಕೊಟ್ಟರು. ತಹಶೀಲ್ದಾರ್‌ ರವಿ ಕೊರವರ, ವಿ.ವಿ. ಸಾಲಿಮಠ, ಶರತ್‌ ಸಣ್ಣವೀರಪ್ಪನವರ, ರಾಜಶೇಖರ ಮಳಗಿ, ಷಣ್ಮುಖಪ್ಪ ಮುಚ್ಚಂಡಿ ಸೇರಿದಂತೆ  ಪ್ರಮುಖರಿದ್ದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.