ಕಾಂಗ್ರೆಸ್ನಿಂದ ಪೌರತ್ವ ಕಾಯ್ದೆ ಗೊಂದಲ ಸೃಷ್ಟಿ
ಕಾಯಿದೆ ತಿದ್ದುಪಡಿಯಿಂದ ಯಾರಿಗೂ ಇಲ್ಲತೊಂದರೆಬಿಜೆಪಿಯಿಂದ ಮನೆ ಮನೆಗೆ ಜಾಗೃತಿ
Team Udayavani, Jan 9, 2020, 1:41 PM IST
ಅಕ್ಕಿಆಲೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ತಾಲೂಕು ಬಿಜೆಪಿ ಸಂಚಾಲಕ ಡಾ| ಸುನೀಲ ಹಿರೇಮಠ ಹೇಳಿದರು.
ತಿಳವಳ್ಳಿ ಗ್ರಾಮದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಕಾಯಿದೆಯ ತಿದ್ದುಪಡಿಯಿಂದಾಗಿ ದೇಶದ ಯಾರೊಬ್ಬರಿಗೂ ತೊಂದರೆ ಯಾಗುವುದಿಲ್ಲ. ಈ ಕುರಿತು ಕಾಂಗ್ರೆಸ್ ವಿನಾಕಾರಣ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಜನರ ದಿಕ್ಕು ತಪ್ಪಿಸಿ ತನ್ನ ರಾಜಕೀಯದ ಬೆಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ಮಾತಿಗೆ ಯಾರೂ ಕಿವಿಗೊಡಬಾರದು. ಈ ಹಿಂದೆಯೂ ದೇಶದ ಪ್ರಧಾನಿಗಳಾಗಿದ್ದ ಜವಾಹರ್ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಈ ಕಾಯ್ದೆ ಜಾರಿಗೆ ತಂದಿದ್ದರು. ಆದರೆ, ಯಾವುದೇ ರೀತಿಯ ವಿರೋಧವೂ ವ್ಯಕ್ತವಾಗಿರಲಿಲ್ಲ. ದೇಶದಲ್ಲಿ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಉದ್ದೇಶದಿಂದ ಬಿಜೆಪಿ ಮನೆ-ಮನೆಗೆ ತೆರಳಿ ಕಾಯಿದೆ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು.
ಮುಖಂಡರಾದ ಶಿವಲಿಂಗಪ್ಪ ತಲ್ಲೂರು ಮಾತನಾಡಿ, ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರಲ್ಲಿ ವಾಸ್ತವ ಸಂಗತಿಗಳನ್ನು ತಿರುಚಿ ಹೇಳುತ್ತಿದೆ. ಕಾಯಿದೆ ದೇಶದ ವಾಸಿಗಳಿಗೆ
ಯಾವುದೇ ರೀತಿಯಲ್ಲಿ ತೊಂದರೆ ಮಾಡದು ಎಂದರು.
ನಿಂಗಪ್ಪ ಗೊಬ್ಬೇರ, ಅಪ್ಪು ಶೆಟ್ಟರ, ಪರಶುರಾಮ ಗೌಳಿ,
ಭರಮಣ್ಣ ಕುರುಬರ, ಶಿವಯೋಗಿ ವಡೆಯರ, ದಯಾನಂದ ಹಾವೇರಿ, ಮಾರುತಿ ಈಳಗೇರ, ಕುಮಾರ ಲಕ್ಮೋಜಿ, ಸುನೀಲ ಬಾರ್ಕಿ, ಗಿರೀಶ ಸಜ್ಜನಶೆಟ್ಟರ, ಮಧುಕರ ಹುನಗುಂದ, ನಿಂಬಣ್ಣ ಜಾಡರ, ಚೌಡಪ್ಪ ಶಿರಿಹಳ್ಳಿ, ಪರಶುರಾಮ ಸವಣೂರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ