ಆಂಜನೇಯಸ್ವಾಮಿ ರಥೋತ್ಸವ ಮುಂದೂಡಿಕೆ
Team Udayavani, Mar 22, 2020, 6:11 PM IST
ರಾಣಿಬೆನ್ನೂರ: ಕೋವಿಡ್ 19 ತಡೆಗೆ ಮುಂಜಾಗ್ರತಾ ಕ್ರಮವಾಗಿ ಮಾ. 27 ರಿಂದ ಏ. 3ರ ವರೆಗೆ ನಡೆಯಬೇಕಿದ್ದ ಶ್ರೀ ಆಂಜನೇಯಸ್ವಾಮಿ ರಥೋತ್ಸವ ಮತ್ತು ಶ್ರೀ ಮರಡಿಕೆಂಚಮ್ಮದೇವಿ ಜಾತ್ರಾ ಮಹೋತ್ಸವ ಮುಂದೂಡಲಾಗಿದೆ.
ಶನಿವಾರ ಮಾಕನೂರ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಸಭೆ ಸೇರಿ ಸಾರ್ವಜನಿಕರ ಸಮ್ಮುಖದಲ್ಲಿ ಚರ್ಚಿಸಿ ಆಂಜನೇಯಸ್ವಾಮಿ ರಥೋತ್ಸವ ಮತ್ತು ಮರಡಿ ಕೆಂಚಮ್ಮದೇವಿ ಜಾತ್ರಾ ಮಹೋತ್ಸವವನ್ನು ಮುಂದೂಡಲು ತೀರ್ಮಾನಿಸಿದರು.
ಗ್ರಾಪಂ ಅಧ್ಯಕ್ಷ ಸದಾಶಿವನಗೌಡ ಮಲ್ಲನಗೌಡ್ರ ಮಾತನಾಡಿ, ದೇಶಾದ್ಯಂತ ಹರಡಿರುವ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವವನ್ನು ಮುಂದೂಡುವುದು ಅನಿವಾರ್ಯವಾಗಿದೆ. ಇದಕ್ಕೆ ಜನರು ಸಹಕಾರ ಅಗತ್ಯವಿದೆ ಎಂದರು.
ಆರೋಗ್ಯವೇ ಭಾಗ್ಯ ಆ ಭಾಗ್ಯವನ್ನು ಕಾಪಾಡಿಕೊಳ್ಳುವುದು ಸೂಕ್ತ. ದೇವಿಯ ಕೃಪಾಶೀರ್ವಾದದಿಂದ ಮಹಾಮಾರಿ ಕೊರೊನಾ ವೈರಸ್ ಯಾರಿಗೂ ತಗುಲದಿರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿಕೊಳ್ಳೋಣ. ಆ ತಾಯಿಯ ಕೃಪೆ ಇದ್ದರೆ ಮುಂದಿನ ದಿನಗಳಲ್ಲಿ ಜಾತ್ರೆಯನ್ನು ಮಾಡೋಣ ಪ್ರಸ್ತುತ ಕಾಲ ಪಕ್ವವಾಗಿಲ ಎಂದರು. ಅವರ ಮಾತಿಗೆ ಎಲ್ಲ ಭಕ್ತರು ಸಮ್ಮತಿಸಿದರು.
ಸತೀಶಗೌಡ ಮಲ್ಲನಗೌಡ್ರ, ದೇವೇಂದ್ರಪ್ಪ ಎಲಜಿ, ವಿನಯಕುಮಾರ ಮಲ್ಲನಗೌಡ್ರ, ಈರಣ್ಣ ಹಲಗೇರಿ, ನಾಗಪ್ಪ ಬಣಕಾರ, ಭೀಮಪ್ಪ ಪೂಜಾರ, ಚಂದ್ರಗೌಡ ಭರಮಗೌಡ್ರ, ಚಂದ್ರಶೇಖರ ಕುಂಬಳೂರ, ನಾಗಪ್ಪ ಬಾರ್ಕಿ, ಸಿದ್ದಪ್ಪ ಶಿರಗೇರಿ, ಹನುಮಂತಪ್ಪ ಕುಂಬಳೂರ, ರೇವಣೆಪ್ಪ ಹೊರಕೇರಿ, ಹನುಮಂತಗೌಡ ದೊಡ್ಡಗೌಡ್ರ, ಹನುಮಂತಗೌಡ ಭರಮಗೌಡ್ರ, ನಿಜಗುಣ ತಾವರಗೊಂದಿ, ಮಂಜಪ್ಪ ಬಾರ್ಕಿ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು