![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಆಂಜನೇಯಸ್ವಾಮಿ ರಥೋತ್ಸವ ಮುಂದೂಡಿಕೆ
Team Udayavani, Mar 22, 2020, 6:11 PM IST
![ಆಂಜನೇಯಸ್ವಾಮಿ ರಥೋತ್ಸವ ಮುಂದೂಡಿಕೆ](https://www.udayavani.com/wp-content/uploads/2020/03/hv-tdy-1-16-620x309.jpg)
ರಾಣಿಬೆನ್ನೂರ: ಕೋವಿಡ್ 19 ತಡೆಗೆ ಮುಂಜಾಗ್ರತಾ ಕ್ರಮವಾಗಿ ಮಾ. 27 ರಿಂದ ಏ. 3ರ ವರೆಗೆ ನಡೆಯಬೇಕಿದ್ದ ಶ್ರೀ ಆಂಜನೇಯಸ್ವಾಮಿ ರಥೋತ್ಸವ ಮತ್ತು ಶ್ರೀ ಮರಡಿಕೆಂಚಮ್ಮದೇವಿ ಜಾತ್ರಾ ಮಹೋತ್ಸವ ಮುಂದೂಡಲಾಗಿದೆ.
ಶನಿವಾರ ಮಾಕನೂರ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಸಭೆ ಸೇರಿ ಸಾರ್ವಜನಿಕರ ಸಮ್ಮುಖದಲ್ಲಿ ಚರ್ಚಿಸಿ ಆಂಜನೇಯಸ್ವಾಮಿ ರಥೋತ್ಸವ ಮತ್ತು ಮರಡಿ ಕೆಂಚಮ್ಮದೇವಿ ಜಾತ್ರಾ ಮಹೋತ್ಸವವನ್ನು ಮುಂದೂಡಲು ತೀರ್ಮಾನಿಸಿದರು.
ಗ್ರಾಪಂ ಅಧ್ಯಕ್ಷ ಸದಾಶಿವನಗೌಡ ಮಲ್ಲನಗೌಡ್ರ ಮಾತನಾಡಿ, ದೇಶಾದ್ಯಂತ ಹರಡಿರುವ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವವನ್ನು ಮುಂದೂಡುವುದು ಅನಿವಾರ್ಯವಾಗಿದೆ. ಇದಕ್ಕೆ ಜನರು ಸಹಕಾರ ಅಗತ್ಯವಿದೆ ಎಂದರು.
ಆರೋಗ್ಯವೇ ಭಾಗ್ಯ ಆ ಭಾಗ್ಯವನ್ನು ಕಾಪಾಡಿಕೊಳ್ಳುವುದು ಸೂಕ್ತ. ದೇವಿಯ ಕೃಪಾಶೀರ್ವಾದದಿಂದ ಮಹಾಮಾರಿ ಕೊರೊನಾ ವೈರಸ್ ಯಾರಿಗೂ ತಗುಲದಿರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿಕೊಳ್ಳೋಣ. ಆ ತಾಯಿಯ ಕೃಪೆ ಇದ್ದರೆ ಮುಂದಿನ ದಿನಗಳಲ್ಲಿ ಜಾತ್ರೆಯನ್ನು ಮಾಡೋಣ ಪ್ರಸ್ತುತ ಕಾಲ ಪಕ್ವವಾಗಿಲ ಎಂದರು. ಅವರ ಮಾತಿಗೆ ಎಲ್ಲ ಭಕ್ತರು ಸಮ್ಮತಿಸಿದರು.
ಸತೀಶಗೌಡ ಮಲ್ಲನಗೌಡ್ರ, ದೇವೇಂದ್ರಪ್ಪ ಎಲಜಿ, ವಿನಯಕುಮಾರ ಮಲ್ಲನಗೌಡ್ರ, ಈರಣ್ಣ ಹಲಗೇರಿ, ನಾಗಪ್ಪ ಬಣಕಾರ, ಭೀಮಪ್ಪ ಪೂಜಾರ, ಚಂದ್ರಗೌಡ ಭರಮಗೌಡ್ರ, ಚಂದ್ರಶೇಖರ ಕುಂಬಳೂರ, ನಾಗಪ್ಪ ಬಾರ್ಕಿ, ಸಿದ್ದಪ್ಪ ಶಿರಗೇರಿ, ಹನುಮಂತಪ್ಪ ಕುಂಬಳೂರ, ರೇವಣೆಪ್ಪ ಹೊರಕೇರಿ, ಹನುಮಂತಗೌಡ ದೊಡ್ಡಗೌಡ್ರ, ಹನುಮಂತಗೌಡ ಭರಮಗೌಡ್ರ, ನಿಜಗುಣ ತಾವರಗೊಂದಿ, ಮಂಜಪ್ಪ ಬಾರ್ಕಿ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.