ಅವೈಜ್ಞಾನಿಕ ರೋಡ್‌ ಹಂಪ್ಸ್‌ಗಳ ಕಿರಿಕಿರಿ

•ವಾಹನ ಸವಾರರಿಗೆ ನಿತ್ಯಯಾತನೆ •ಅಪಘಾತ ನಿಯಂತ್ರಿಸುವ ಹಂಪ್ಸ್‌ಗಳಿಂದಲೇ ಅಪಘಾತ ಸೃಷ್ಟಿ

Team Udayavani, Jun 26, 2019, 10:54 AM IST

hv-tdy-1..

ಹಾವೇರಿ: ಒಂದೆಡೆ ಆಳೆತ್ತರ ಮೇಲೇಳುವ ರಸ್ತೆಯ ಧೂಳು, ಇನ್ನೊಂದೆಡೆ ಹೊಂಡಗಳ ನಡುವೆ ರಸ್ತೆಯ ಹುಡುಕಾಟ. ಇಷ್ಟರ ಮಧ್ಯೆ ಮಾರು ಮಾರಿಗೆ ಬರುವ ರೋಡ್‌ ಹಂಪ್ಸ್‌ಗಳ ಕಾಟ. ಇದು ನಗರದಲ್ಲಿ ಸಂಚರಿಸುವ ವಾಹನ ಸವಾರರ ಪರದಾಟ.

ಜನವಸತಿ ಸ್ಥಳಗಳಲ್ಲಿ ಅತಿಯಾದ ವೇಗದಿಂದ ಉಂಟಾಗುವ ಅಪಘಾತ ತಡೆಯಲು ರೋಡ್‌ ಹಂಪ್ಸ್‌ ನಿರ್ಮಿಸುವುದು ಸಹಜ. ಆದರೆ, ನಗರದ ವಿವಿಧ ರಸ್ತೆಗಳಲ್ಲಿ ಎಲ್ಲಿಬೇಕೆಂದರಲ್ಲಿ ಅವೈಜ್ಞಾನಿಕವಾಗಿ ರೋಡ್‌ ಹಂಪ್ಸ್‌ಗಳನ್ನು ಹಾಕಿರುವುದು ವಿಪರ್ಯಾಸ. ಈ ರೋಡ್‌ ಹಂಪ್ಸ್‌ಗಳಿಂದ ವಾಹನಗಳ ಸವಾರರಿಗೆ ನಿತ್ಯ ಕಿರಿಕಿರಿಯಾಗಿದೆ.

ಶಾಲಾ ಕಾಲೇಜು ಪ್ರದೇಶ, ಆಸ್ಪತ್ರೆ, ಜನದಟ್ಟನೆ ಇರುವ ಪ್ರದೇಶದಲ್ಲಿ ಹಾಗೂ ರಸ್ತೆಕ್ರಾಸ್‌ ಬಳಿ ಅಪಘಾತ ಸುರಕ್ಷಾ ದೃಷ್ಟಿಯಿಂದ ವೈಜ್ಞಾನಿಕವಾದ ರೋಡ್‌ ಹಂಪ್ಸ್‌ ನಿರ್ಮಿಸಲಾಗುತ್ತದೆ. ಆದರೆ, ನಗರದಲ್ಲಿ ಅಷ್ಟಾಗಿ ಜನವಸತಿ ಇರುವ ಹಾಗೂ ವಾಹನ ದಟ್ಟನೆ ಇರದ ಸ್ಥಳಗಳಲ್ಲಿಯೂ ಬೇಕಾಬಿಟ್ಟಿಯಾಗಿ ನಿರ್ಮಿಸಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಕೆಲವೆಡೆಗಳಲ್ಲಿ ಅವಶ್ಯವಿಲ್ಲದೇ ಇದ್ದರೂ ರೋಡ್‌ ಹಂಪ್ಸ್‌ಗಳನ್ನು ಹಾಕಲಾಗಿದೆ. ಇದರಿಂದಲೇ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತಿವೆ.

ಅಪಘಾತ ತಪ್ಪಿಸಲು ಇರಬೇಕಾದ ಹಂಪ್ಸ್‌ಗಳ ಅಪಘಾತಕ್ಕೆ ಕಾರಣವಾದರೆ ಹೇಗೆ ಎನ್ನುವ ಪ್ರಶ್ನೆ ನಗರದ ವಾಹನ ಸವಾರರದ್ದಾಗಿದೆ. ನಗರದ ಬಹುತೇಕ ರಸ್ತೆಗಳಲ್ಲಿ ಅವೈಜ್ಞಾನಿಕ ರೋಡ್‌ ಹಂಪ್ಸ್‌ಗಳನ್ನು ನಿರ್ಮಿಸಿದ್ದು, ವಾಹನ ಚಾಲಕರು ಜಾಗೃತರಾಗಿರದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ನಗರದ ಮಹಾತ್ಮಾ ಗಾಂಧಿ ರಸ್ತೆ, ವಿದ್ಯಾನಗರ, ರಾಜ್ಯ ಹೆದ್ದಾರಿ, ದೇವಗಿರಿ ರಸ್ತೆ, ಜೆಪಿ ರಸ್ತೆ, ರೈಲು ನಿಲ್ದಾಣ ರಸ್ತೆ, ಇಜಾರಿಲಕ್ಮಾಪುರ, ಗುತ್ತಲ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಒಂದೊಂದರಲ್ಲೂ 5 ರಿಂದ 6 ರೋಡ್‌ ಹಂಪ್ಸ್‌ ನಿರ್ಮಿಸಲಾಗಿದೆ. ಕೆಲವು ಭಾಗದಲ್ಲಿ ರೋಡ್‌ ಹಂಪ್ಸ್‌ನ ನಿಯಮ ಗಾಳಿಗೆ ತೂರಿ ನಿರ್ಮಿಸಲಾಗಿದೆ.

ಅವೈಜ್ಞಾನಿಕ ಹಂಪ್ಸ್‌ಗಳು: ಹಲವು ಕಡೆಗಳಲ್ಲಿ ರೋಡ್‌ ಹಂಪ್ಸ್‌ಗಳನ್ನು ಬೇಕಾಬಿಟ್ಟಿಯಾಗಿ ನಿರ್ಮಿಸಿದ್ದಾರೆ. ಗುಡ್ಡ ನಿರ್ಮಿಸಿದಂತೆ ಹಂಪ್ಸ್‌ ಹಾಕಲಾಗಿದ್ದು, ಕಾರು ಹಾಗೂ ದ್ವಿಚಕ್ರ ವಾಹನಗಳು ಸಂಚರಿಸುವಾಗ ವಾಹನದ ಕೆಳಭಾಗಕ್ಕೆ ಹಂಪ್ಸ್‌ಗಳು ತಾಗುತ್ತಿವೆ. ಇದರಿಂದಾಗಿ ಎಷ್ಟೋ ವಾಹನಗಳು ಕೆಟ್ಟು ನಿಂತು ವಾಹನ ಸವಾರರು ತೊಂದರೆ ಅನುಭವಿಸಿರುವ ಉದಾಹರಣೆಗಳೂ ಇವೆ.

ಬೈಕ್‌ ಹಿಂದೆ ಕುಳಿತವರಂತೂ ಪ್ರಾಣ ಬಿಗಿಹಿಡಿದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಂಪ್ಸ್‌ಗಳಿಂದಾಗಿಯೇ ಬೈಕ್‌ನ ಹಿಂದೆ ಕುಳಿತವರು ಬಿದ್ದು ಗಾಯಗೊಂಡ ಘಟನೆಗಳು ನಿತ್ಯ ನಗರದಲ್ಲಿ ನಡೆಯುತ್ತಿರುವುದು ಸಾಮಾನ್ಯ ಎಂಬಂತಾಗಿದೆ.

ಸ್ಥಳೀಯರ ಬೇಡಿಕೆ: ರಸ್ತೆಗಳಿಗೆ ಇಷ್ಟೊಂದು ಹಂಪ್ಸ್‌ಗಳನ್ನು ಹಾಕಲು ಸ್ಥಳೀಯ ವಾಸಿಗಳ ಬೇಡಿಕೆಯೇ ಕಾರಣ ಎನ್ನಲಾಗುತ್ತಿದೆ. ನಿಯಮದ ಪ್ರಕಾರ ನಗರಸಭೆ ವ್ಯಾಪ್ತಿಯಲ್ಲಿ ಅಗತ್ಯ ಇರುವಲ್ಲಿ ಮಾತ್ರ ಹಂಪ್ಸ್‌ಗಳನ್ನು ಪೊಲೀಸ್‌ ಇಲಾಖೆ ಪರವಾನಗಿಯೊಂದಿಗೆ ಹಾಕಬೇಕು. ಆದರೆ, ಸ್ಥಳೀಯ ನಿವಾಸಿಗಳು ರಸ್ತೆ ಮಾಡುವ ಗುತ್ತಿಗೆದಾರರ ಮೇಲೆ, ಆ ಭಾಗದ ಜನಪ್ರತಿನಿಧಿ ಮೇಲೆ ಒತ್ತಡ ತಂದು ಹಂಪ್ಸ್‌ ಹಾಕಿಸಿಕೊಳ್ಳುತ್ತಾರೆ. ಒಂದು ವೇಳೆ ರಸ್ತೆ ಮಾಡುವ ಗುತ್ತಿಗೆದಾರರು ಮಾಡದಿದ್ದರೆ ತಾವೇ ಸ್ವತಃ ಹಂಪ್ಸ್‌ ಸಿದ್ಧಪಡಿಸಿಕೊಳ್ಳುತ್ತಾರೆ. ಹೀಗಾಗಿ ನಗರದ ರಸ್ತೆಗಳಲ್ಲಿ ಹಂಪ್ಸ್‌ಗಳದ್ದೇ ಕಾರುಬಾರಾಗಿದೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ನಗರಸಭೆ ಅಕಾರಿ.

ಅಪಘಾತ ತಡೆಗಾಗಿ ರೋಡ್‌ ಹಂಪ್ಸ್‌ ಹಾಕಲಾಗುತ್ತದೆ. ಆದರೆ, ನಗರದಲ್ಲಿ ಅವೈಜ್ಞಾನಿಕ ಮತ್ತು ಮಿತಿಮೀರಿದ ರೋಡ್‌ ಹಂಪ್ಸ್‌ಗಳಿಂದಾಗಿ ಅಪಘಾತಗಳು ಹೆಚ್ಚುತ್ತಿರುವುದು ಖೇದಕರ ಸಂಗತಿ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಅನಗತ್ಯ ಸ್ಥಳದಲ್ಲಿರುವ ಹಂಪ್ಸ್‌ಗಳನ್ನು ತೆಗೆಯಲು ಕ್ರಮ ಕೈಗೊಳ್ಳಬೇಕು.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.