ಸಶಸ್ತ್ರ ಸೇನಾಪಡೆ-ಪೊಲೀಸ್‌, ಗೃಹರಕ್ಷಕ ದಳ ಪಥಸಂಚಲನ


Team Udayavani, Apr 22, 2019, 3:13 PM IST

hav-2

ಹಾವೇರಿ: ಶಾಂತಿಯುತ, ಸುಗಮ ಹಾಗೂ ನಿರ್ಭಿತಿಯಿಂದ ಮತ ಚಲಾಯಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಹೊತ್ತ ಕೇಂದ್ರ ಸಶಸ್ತ್ರ ಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್‌, ಗೃಹರಕ್ಷಕ ದಳದಿಂದ ರವಿವಾರ ಸಂಜೆ ನಗರದಲ್ಲಿ ಪಥಸಂಚಲನ ನಡೆಯಿತು.

ನಗರದ ಹುಕ್ಕೇರಿಮಠ ಪ್ರೌಢಶಾಲಾ ಆವರಣದಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಸ್ವೀಪ್‌ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ಪೊಲೀಸ್‌ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಚಾಲನೆ ನೀಡಿದರು.

ಹುಕ್ಕೇರಿಮಠದ ಶಿವಲಿಂಗೇಶ್ವರ ಪ್ರೌಢಶಾಲಾ ಆವರಣದಿಂದ ಆರಂಭಗೊಂಡ ಸಮವಸ್ತ್ರ ಧರಿಸಿದ ಮಿಲಿಟರಿ ಪಡೆಯ ಶಿಸ್ತುಬದ್ಧ ನಡಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಇವರೊಂದಿಗೆ ಪೊಲೀಸ್‌ ವಿವಿಧ ತುಕಡಿಗಳು, ಗೃಹ ರಕ್ಷಕದಳದವರು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಗಾಂಧಿ ವೃತ್ತ, ಸುಭಾಸ್‌ ವೃತ್ತದ ವರೆಗೂ ಪಥಸಂಚಲನ ಜರುಗಿತು.

ಪೊಲೀಸ್‌, ಕೇಂದ್ರ ಸಶಸ್ತ್ರ ಮೀಸಲು ಪಡೆ, ಗೃಹರಕ್ಷಕ ದಳದ ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಸಮವಸ್ತ್ರ ಧರಿಸಿ ಶಿಸ್ತುಬದ್ಧ ನಡಿಗೆ ನೋಡುಗರ ಮನದಲ್ಲಿ ಹೆಮ್ಮೆಯ ಜತೆಗೆ ಪೊಲೀಸ್‌ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾದವು.

ಪಥಸಂಚಲನ ಪೂರ್ವದಲ್ಲಿ ಕೇಂದ್ರ ಪಡೆ ಹಾಗೂ ಸ್ಥಳೀಯ ಪೊಲೀಸರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಹಾವೇರಿ ಲೋಕಸಭಾ ಕ್ಷೇತ್ರ ಅತ್ಯಂತ ಶಾಂತಿಯುತ ಮತ ಕ್ಷೇತ್ರ. ದುರ್ಬಲ ಮತದಾರರು, ಸಾರ್ವಜನಿಕರು ನಿರ್ಭಿಡೆಯಿಂದ ಮತ ಚಲಾಯಿಸಬೇಕು. ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆ ಅವಕಾಶವಿಲ್ಲದಂತೆ ನಿಗಾವಹಿಸಿ ಅತ್ಯಂತ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಪೊಲೀಸರು ಹಾಗೂ ಕೇಂದ್ರ ಪಡೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ಕರ್ತವ್ಯದಲ್ಲಿ ಎಲ್ಲರೂ ಸಮಾನರು. ಶಾಂತಿಯುತ, ನ್ಯಾಯ ಸಮ್ಮತ ಚುನಾವಣೆಗೆ ನಾವೆಲ್ಲ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ ಮಾತನಾಡಿ, ಈಗಾಗಲೇ ಮತಗಟ್ಟೆವಾರು ಕೇಂದ್ರಪಡೆಯ ಹಾಗೂ ಪೊಲೀಸ್‌ ಮತ್ತು ಗೃಹರಕ್ಷಕ ಪೇದೆಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ತಮಗೆ ನಿಯೋಜಿತ ಮತಗಟ್ಟೆಗಳಿಗೆ ತೆರಳಿ ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ನಿರ್ಭಿತವಾದ ಶಾಂತಿಯುತ ಮತದಾನಕ್ಕೆ ತಾವೆಲ್ಲ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾದ ಗೃಹರಕ್ಷಕ ಅಥವಾ ಪೊಲೀಸ್‌ ಸಿಬ್ಬಂದಿ ಗೈರು ಹಾಜರಾದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರ ಮೀಸಲು ಪಡೆಯ ಕಮಾಂಡೆಂಟ್ ರಮೇಶ ಕಬಾಡೆ ಮಾತನಾಡಿ, ತಮಗೆ ನಿರ್ವಹಿಸಿದ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿ, ಮತಗಟ್ಟೆಯ ಹೊರಗೆ ಕರ್ತವ್ಯದಲ್ಲಿ ತೊಡಗಿ ಯಾವುದೇ ಕಾನೂನು ಬಾಹೀರ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಿ. ಸುಗಮ ಹಾಗೂ ಶಾಂತಿಯುತ ಚುನಾವಣೆಗೆ ಬದ್ಧರಾಗಿ ಕಾರ್ಯನಿರ್ವಹಿಸಿ ಎಂದು ಹೇಳಿದರು.

ಜಿಪಂ ಸಿಇಒ ಕೆ.ಲೀಲಾವತಿ, ಡಿವೈಎಸ್‌ಪಿ ಕುಮಾರಪ್ಪ, ಹಾವೇರಿ ಸಹಾಯಕ ಚುನಾವಣಾಧಿಕಾರಿ ಎನ್‌.ತಿಪ್ಪೇಸ್ವಾಮಿ ಇತರ ಅಧಿಕಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.