ಹಂಚಿನಮನಿಯಲ್ಲೀಗ ಆರ್ಟ್‌ಗ್ಯಾಲರಿ

¬ಚಿತ್ರಕಲಾವಿದರಿಗೊಂದು ವೇದಿಕೆ , ಗ್ಯಾಲರಿ ಮಾಡಿ ಕಲಾಪ್ರೀತಿ ಮೆರೆದ ಕರಿಯಪ್ಪ

Team Udayavani, Sep 20, 2019, 1:29 PM IST

hv-tdy-1

ಹಾವೇರಿ: “ನಗರಕ್ಕೊಂದು ಆರ್ಟ್‌ ಗ್ಯಾಲರಿ ಮಾಡಿಕೊಡಿ’ ಎಂದು ಎರಡು ದಶಕಗಳ ಕಾಲ ಹೋರಾಡಿದರೂ ಸರ್ಕಾರ ಸ್ಪಂದಿಸದೆ ಇದ್ದಾಗ ಕಲಾವಿದರೋರ್ವರು ತನ್ನ ಮನೆಯನ್ನೇ ಆಟ್‌ ಗ್ಯಾಲರಿ ಮಾಡಿ ಕಲಾವಿದರಿಗೆ ವೇದಿಕೆ ಕಲ್ಪಿಸಿ ಗಮನಸೆಳೆದಿದ್ದಾರೆ.

ಲಕ್ಷಾಂತರ ರೂ. ವೆಚ್ಚ ಮಾಡಿ ತನ್ನ ಮನೆಯಲ್ಲಿಯೇ ಸುಂದರ, ಸುಸಜ್ಜಿತ ಆರ್ಟ್‌ ಗ್ಯಾಲರಿ ಮಾಡಿ ತನ್ನ ಕಲಾಪ್ರೀತಿ ಮೆರೆದ ಈ ಕಲಾವಿದನ ಹೆಸರು ಕರಿಯಪ್ಪ ಹಂಚಿನಮನಿ. ಇವರು ವೃತ್ತಿಯಲ್ಲಿ ಪೊಲೀಸ್‌ ಹೆಡ್‌ ಕಾನ್‌ ಸ್ಟೆಬಲ್‌ ಆಗಿದ್ದರೂ ಪ್ರವೃತ್ತಿಯಲ್ಲಿ ಪ್ರತಿಭಾವಂತ ಚಿತ್ರಕಲಾವಿದ. ಅವರು ರಾಜ್ಯವಷ್ಟೇ ಅಲ್ಲ ದೇಶಾದ್ಯಂತ ವಿವಿಧೆಡೆ ತಮ್ಮ ಚಿತ್ರಕಲೆ ಪ್ರದರ್ಶಿಸಿ ಹೆಸರುವಾಸಿಯಾಗಿದ್ದಾರೆ.

ಹಾವೇರಿ ನಗರದಲ್ಲೊಂದು ಸುಸಜ್ಜಿತ ಆರ್ಟ್‌ ಗ್ಯಾಲರಿ ನಿರ್ಮಾಣ ಆಗಬೇಕು ಎಂದು ಜಿಲ್ಲೆಯ ಕಲಾವಿದರು, ಸಾಹಿತಿಗಳು 25-30

ವರ್ಷಗಳಿಂದಲೂ ಹೋರಾಟ, ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಬೀದಿಯಲ್ಲಿ ಚಿತ್ರಕಲೆ ಬಿಡಿಸಿ, ಬೀದಿಯಲ್ಲಿ ಚಿತ್ರಕಲೆ ಪ್ರದರ್ಶನ ಮಾಡಿ, ರಸ್ತೆ ಮೇಲೆ ಚಿತ್ರ ಬಿಡಿಸಿ ಭಿನ್ನ ವಿಭಿನ್ನವಾಗಿ ಪ್ರತಿಭಟನೆ ಮಾಡಿ ಸರ್ಕಾರದ ಕಣ್ತೆರೆಸುವ ಕೆಲಸ ಮಾಡಿದ್ದಾರೆ. ಆದರೆ, ಇದ್ಯಾವುದಕ್ಕೂ ಸರ್ಕಾರ ಈವರೆಗೂ ಸ್ಪಂದಿಸಿಯೇ ಇಲ್ಲ.

ಹಂಚಿನಮನಿ ಆರ್ಟ್‌ ಗ್ಯಾಲರಿ’: ಕಲೆ ಪ್ರದರ್ಶನಕ್ಕೆ ಉತ್ತಮ ಗ್ಯಾಲರಿ ವ್ಯವಸ್ಥೆ ಇಲ್ಲದೇ ಚಿತ್ರಕಲಾವಿದರು ಪರದಾಡುವುದನ್ನು ಮನಗಂಡ ಕರಿಯಪ್ಪ ಹಂಚಿನಮನಿ, ನಗರದ ನಂದಿ ಲೇಔಟ್‌ನಲ್ಲಿರುವ ತಮ್ಮ ನೂತನ ಮನೆಯ ಮಹಡಿಯ ಒಂದು ಭಾಗವನ್ನು ಆರ್ಟ್‌ ಗ್ಯಾಲರಿಗೆ ಮೀಸಲಿಟ್ಟಿದ್ದಾರೆ. ಇದಕ್ಕೆ “ಹಂಚಿನಮನಿ ಆರ್ಟ್‌ ಗ್ಯಾಲರಿ’ ಎಂದು ಹೆಸರಿಟ್ಟಿದ್ದಾರೆ. ಇಲ್ಲಿ ಚಿತ್ರಕಲೆ ಪ್ರದರ್ಶನಕ್ಕೆ ಬೇಕಾದ ವಿಶೇಷ ವಿದ್ಯುತ್‌ ವ್ಯವಸ್ಥೆ, ಕಲಾಕೃತಿಗಳ ಪ್ರದರ್ಶನಕ್ಕೆ ಬೇಕಾದ ಹ್ಯಾಂಗರ್ ಸೇರಿದಂತೆ ಕಲಾ ಪ್ರದರ್ಶನಕ್ಕೆ ಬೇಕಾದ ಅಗತ್ಯ ಎಲ್ಲ ವ್ಯವಸ್ಥೆ ಮಾಡಿದ್ದಾರೆ.

ಕಲಾ ಪ್ರದರ್ಶನಕ್ಕೆ ಬಂದ ಕಲಾವಿದರ ವಾಸ್ತವ್ಯಕ್ಕಾಗಿ ಒಂದು ಪ್ರತ್ಯೇಕ ಕೊಠಡಿ ವ್ಯವಸ್ಥೆವೂ ಮಾಡಿದ್ದಾರೆ. ಸುಮಾರು 30-35 ಕಲಾಕೃತಿಗಳು ಪ್ರದರ್ಶನ ಮಾಡುವಷ್ಟು ವಿಶಾಲವಾದ ಗ್ಯಾಲರಿ ಇದಾಗಿದ್ದು, ಕಲಾ ಗ್ಯಾಲರಿಗೆ ತಕ್ಕಂತೆ ಜನಪದ ಕಲಾ ಶೈಲಿಯಲ್ಲಿ ಗ್ಯಾಲರಿಯ ಗೋಡೆ, ಬಾಗಿಲು, ಕಿಟಕಿ, ಅಲಂಕಾರ ಸಾಮಗ್ರಿ ಅಳವಡಿಸಿ ತಮ್ಮ ಗ್ಯಾಲರಿ ವಿಶಿಷ್ಟ, ವಿಭಿನ್ನ ಹಾಗೂ ಆಕರ್ಷಣೀಯವನ್ನಾಗಿಸಿದ್ದಾರೆ.

ಮನೆಯೂ ವಿಭಿನ್ನ: ಕರಿಯಪ್ಪ ಹಂಚಿನಮನಿಯರು ಕಟ್ಟಿಸಿದ ನೂತನ ಮನೆ ಕೂಡ ವಿಶಿಷ್ಟವಾಗಿದ್ದು ಮನೆಯೇ ಒಂದು ಸುಂದರ ಕಲಾಕೃತಿಯಂತಿದೆ. ಮನೆಯ ಕಾಂಪೌಂಡ್‌ ಮೇಲೆ ಜನಪದ ಕಲಾಚಿತ್ರಗಳು, ಗೇಟಿಗೆ ಎತ್ತಿನಗಾಡಿಯ ಚಕ್ರ, ನೈಸರ್ಗಿಕವಾಗಿರುವ ಮರದ ಹಲಗೆಗಳನ್ನು ಕಲಾತ್ಮಕವಾಗಿಟ್ಟು ಜೋಡಿಸಿರುವ ಬಾಗಿಲು-ಚೌಕಟ್ಟು ಹೀಗೆ ಎಲ್ಲವೂ ವಿಶಿಷ್ಟವಾಗಿದ್ದು ಒಟ್ಟಾರೆ ಮನೆ ಅಕ್ಷರಶಃ “ಕಲಾ ಮನೆ’ಯಂತಾಗಿದೆ. ಇದು ಕರಿಯಪ್ಪ ಅವರಿಗೆ ಕಲೆ ಮೇಲಿನ ಪ್ರೀತಿ, ಅಭಿಮಾನದ ಸಂಕೇತದಂತಿದೆ.

ಉದ್ಘಾಟನೆಯೂ ವಿಶೇಷ: ಕರಿಯಪ್ಪ ಹಂಚಿನಮನಿಯವರು ಸೆ. 22ರಂದು ಬೆಳಗ್ಗೆ 10ಗಂಟೆಗೆ “ಹಂಚಿನಮನಿ ಆರ್ಟ್‌ ಗ್ಯಾಲರಿ’ಯ ಉದ್ಘಾಟನೆ ಇಟ್ಟುಕೊಂಡಿದ್ದು ಇದನ್ನೂ ವಿಶಿಷ್ಟವಾಗಿ ಆಯೋಜಿಸಿಕೊಂಡಿದ್ದಾರೆ. ಅಂದು ರಾಜ್ಯಾದ್ಯಂತದಿಂದ 50ಕ್ಕೂ ಹೆಚ್ಚು ಕಲಾವಿದರನ್ನು ಕರೆಸಿ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಶಿಬಿರ ಏರ್ಪಡಿಸಿದ್ದಾರೆ. ಉದ್ಘಾಟನೆಯ ದಿನ ನೂತನ ಗ್ಯಾಲರಿಯಲ್ಲಿ ಹಂಚಿನಮನಿಯವರ ಕಲಾಕೃತಿಗಳು ರಾರಾಜಿಸಿದರೆ, ಮರುದಿನ ಉಳಿದ ಕಲಾವಿದರ ಕಲಾಕೃತಿಗಳು ಗ್ಯಾಲರಿಯಲ್ಲಿ ಪ್ರದರ್ಶನಗೊಳ್ಳಲಿವೆ. ಒಟ್ಟಾರೆ “ಹಂಚಿನಮನಿ ಆರ್ಟ್‌ ಗ್ಯಾಲರಿ’ ಚಿತ್ರಕಲಾವಿದರಿಗೆ ಒಂದು ವೇದಿಕೆ ಕಲ್ಪಿಸಿ, ಕಲೆಗೆ ಪ್ರೋತ್ಸಾಹದಾಯಕವಾಗಲಿದೆ ಎಂದು ಅಪೇಕ್ಷಿಸಲಾಗಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.