ಬೀದಿ ನಾಟಕದಿಂದ ಅಭಿವೃದ್ಧಿ ಯೋಜನೆಗಳ ಜಾಗೃತಿ
Team Udayavani, Sep 11, 2019, 10:56 AM IST
ಹಾವೇರಿ: ಜಿಲ್ಲೆಯ ವಿವಿಧೆಡೆ ಸರ್ಕಾರಿ ಯೋಜನೆ ಜಾಗೃತಿ ಕುರಿತ ಬೀದಿನಾಟಕ ಪ್ರದರ್ಶನಗೊಂಡಿತು.
ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತಂತೆ ಬೀದಿ ನಾಟಕ ಹಾಗೂ ಜಾನಪದ ಸಂಗೀತಗಳ ಮೂಲಕ ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಗ್ರಾಮ ಸಂಪರ್ಕ ಕಾರ್ಯಕ್ರಮ ಜಿಲ್ಲೆಯ ವಿವಿಧೆಡೆ ನಡೆಯಿತು.
ಬ್ಯಾಡಗಿ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಮಲ್ಲಿಕಾರ್ಜುನ ಜಾನಪದ ಕಲಾತಂಡ ಬೀದಿನಾಟಕ ಹಾಗೂ ವೀರಭದ್ರೇಶ್ವರ ಸಂಗೀತ ಕಲಾತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಅತ್ತಿಕಟ್ಟಿ, ಸೂಡಂಬಿ, ಘಾಳಪೂಜಿ, ದುಮ್ಮಿನಹಾಳ, ಕುಮ್ಮೂರ, ನೆಲ್ಲಿಕೊಪ್ಪ, ಶಿಡೇನೂರ, ಶಿವಾಜಿನಗರ, ಕಾಗಿನೆಲೆ, ಇಂಗಳಗೊಂದಿ, ಕೆರವಡಿ, ಚಿನ್ನಕಟ್ಟಿ, ಮಾಸಣಗಿ, ಅಂಗಾರಗಟ್ಟಿ, ಗುಂಡೇನಹಳ್ಳಿ, ಕದಮನಹಳ್ಳಿ, ಬಿಸಲಹಳ್ಳಿ, ಬೆಳಕೇರಿ, ಕಲ್ಲೇದೇವರ, ಸೇವಾನಗರ ಗ್ರಾಮಗಳಲ್ಲಿ ಪ್ರದರ್ಶನ ನಡೆಯಿತು. ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆ, ಕೃಷಿಹೊಂಡ ನಿರ್ಮಾಣ, ಮೀನುಗಾರರ ಸಾಲಮನ್ನಾ, ನೇಕಾರರ ಸಾಲಮನ್ನಾ ಸೇರಿದಂತೆ ವಿವಿಧ ಯೋಜನೆಗಳ ವಿವರ, ಆ ಯೋಜನೆಗಳ ಪ್ರಯೋಜನ, ಸಾರ್ವಜನಿಕರು ಈ ಯೋಜನೆಗಳ ಪಡೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮ, ಸಂಪರ್ಕಿಸಬೇಕಾದ ಇಲಾಖೆ, ಯೋಜನೆಗಳ ಫಲಾನುಭವಿಗಳ ಯಶೋಗಾಥೆಗಳ ಕುರಿತಂತೆ ಅತ್ಯಂತ ಪರಿಣಾಮಕಾರಿ ಹಾಡು, ಸಂಗೀತ, ನೃತ್ಯ ಹಾಗೂ ಅಭಿನಯಗಳ ಮೂಲಕ ಮನಮುಟ್ಟುವಂತೆ ಅಭಿನಯಿಸಿದರು. ಕೆರವಡಿ ಗ್ರಾಮದ ಮಾಲತೇಶ ಹಾಗೂ ಮಾಸಣಗಿ ಗ್ರಾಮದ ರೈತ ಬಸವರಾಜ ಮಾತನಾಡಿ, ಸರ್ಕಾರ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಹಲವು ಯೋಜನೆಗಳು ಜಾರಿ ಮಾಡಿದ್ದರೂ ಅವುಗಳನ್ನು ಪಡೆಯಲು ಯಾರನ್ನು ಸಂಪರ್ಕಿಸಬೇಕು, ಯಾವ ಯೋಜನೆಗಳಿವೆ ಎಂಬುದು ತಿಳಿದಿರಲಿಲ್ಲ. ಬೀದಿನಾಟಕ ಮತ್ತು ಸಂಗೀತದ ಮೂಲಕ ನಮಗೆ ತಿಳಿವಳಿಕೆ ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ