ಡೆಂಘೀ ಬಾರದಂತೆ ಜನ ಜಾಗೃತಿ
Team Udayavani, Jun 7, 2020, 6:18 AM IST
ಹಾನಗಲ್ಲ: ಮುಂಗಾರು ಆರಂಭವಾಗುತ್ತಿದ್ದು, ಮಹಾಮಾರಿ ಕೋವಿಡ್-19 ವೈರಸ್ನ ಭಯದಲ್ಲಿರುವ ಜನತೆಗೆ ಡೆಂಘೀ ಬಾರದಂತೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸುವ ಗುರುತರ ಜವಾಬ್ದಾರಿ ಆರೋಗ್ಯ ಇಲಾಖೆ ಮೇಲಿದೆ ಎಂದು ತಾಲೂಕು ವೈದ್ಯಾಧಿಕಾರಿ ರವೀಂದ್ರಗೌಡ ಪಾಟೀಲ ಕರೆ ನೀಡಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಡೆಂಘೀ ಜನಜಾಗೃತಿ ಪ್ರಸಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೇ ತಿಂಗಳಿನಿಂದ ಅಕ್ಟೋಬರ್ ತಿಂಗಳ ಅವಧಿಯಲ್ಲಿ ಡೆಂಘೀ ಪ್ರಕರಣಗಳು ಕಂಡು ಬರುತ್ತವೆ. ಮಳೆಗಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಡೆಂಘೀ ವೈರಸ್ಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದ ಹಾಗೆ ನಿಗಾವಹಿಸುವಂತೆ ಆಶಾ ಕಾರ್ಯಕರ್ತರು ಜಾಗೃತಿ ಮೂಡಿಸಬೇಕು ಎಂದರು.
ವೈದ್ಯಾಧಿಕಾರಿ ಡಾ| ಎಸ್.ವೈ. ಹಾದಿಮನಿ ಮಾತನಾಡಿ, ಪ್ರತಿ ವರ್ಷ ಮೇ 16ಕ್ಕೆ ಡೆಂಘೀ ದಿನಾಚರಣೆ ಆಚರಿಸಲಾಗುತ್ತಿತ್ತು. ಕೋವಿಡ್ ಹಾವಳಿಯಿಂದಾಗಿ ಈಗ ಆಚರಣೆ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಸಂಗ್ರಹಿಸಿದ ನೀರನ್ನು ಆಗಾಗ ಖಾಲಿ ಮಾಡಿ ಪಾತ್ರೆಗಳನ್ನು ತೊಳೆದು ಒಣಗಿಸಿ ಹೊಸ ನೀರನ್ನು ತುಂಬಿಸಬೇಕು. ಹಿರಿಯ ನಾಗರಿಕರು ಹಾಗೂ ಸಣ್ಣ ಮಕ್ಕಳು ಮೈತುಂಬ ಬಟ್ಟೆ ಧರಿಸಬೇಕು. ಈ ಕುರಿತು ಆರೋಗ್ಯ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.
ಆರೋಗ್ಯ ಮೇಲ್ವಿಚಾರಕಿರಾದ ಸಿ.ಎಸ್. ನೆಗಳೂರ, ಜ್ಞಾನೇಶ್ವರ ಬೆಳವೆನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೀರಬಸಮ್ಮ ಹಾಲಮ್ಮನವರ ಸೇರಿದಂತೆ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು