ಅಲ್ಪಸಂಖ್ಯಾತರ ಪೌರತ್ವಕ್ಕಿಲ್ಲ ತೊಂದರೆ


Team Udayavani, Jan 6, 2020, 1:41 PM IST

HV-TDY-1

ಹಾವೇರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ನಮ್ಮ ದೇಶದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಾಗಲ್ಲ. ಈ ಕಾಯ್ದೆ ಕೇವಲ ಪೌರತ್ವ ನೀಡಲು ಇರುವುದು ಹೊರತು ಯಾವುದೇ ವ್ಯಕ್ತಿಗಳಿಂದ ಪೌರತ್ವ ಕಿತ್ತುಕೊಳ್ಳಲು ಅಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಹೇಳಿದರು.

ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಬಾಂಗ್ಲಾದೇಶ, ಅಫ್ಘಾನಿಸ್ತಾನ್‌ ಮತ್ತು ಪಾಕಿಸ್ತಾನ್‌ ರಾಷ್ಟ್ರಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ಬಂದಿರುವ ಮುಸ್ಲಿಮರನ್ನು ಹೊರತುಪಡಿಸಿ ಇನ್ನೂಳಿದ ಹಿಂದೂ, ಜೈನ್‌, ಸಿಖ್‌, ಪಾರ್ಸಿ, ಬೌದ್ಧ, ಕ್ರಿಶ್ಚಿಯನ್‌ ಧರ್ಮೀಯರಿಗೆ ಕೆಲವು ಕಾನೂನುಗಳಿಗೆ ಒಳಪಟ್ಟು ಪೌರತ್ವ ಕೊಡುವ ಕಾಯ್ದೆ ಇದಾಗಿದೆ. ಆದರೆ, ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ರಾಷ್ಟ್ರದ ಅಲ್ಪಸಂಖ್ಯಾತ ಜನರಲ್ಲಿ ತಪ್ಪು ಮಾಹಿತಿ ನೀಡಿ ಅವರನ್ನು ಪ್ರಚೋದಿಸಿ ಗಲಭೆಗೆ ಕುಮ್ಮಕ್ಕು ನೀಡುತ್ತಿವೆ. ಕಳೆದ ಒಂದು ತಿಂಗಳಿನಿಂದ ಪೌರತ್ವ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದ ಅಲ್ಪಸಂಖ್ಯಾತ ಜನರಲ್ಲಿ ಅಭದ್ರತೆಯ ಭಾವನೆ ಉಂಟಾಗಲು ಕಾಂಗ್ರೆಸ್‌ ಹಾಗೂ ಇನ್ನುಳಿದ ವಿರೋಧಿ ಪಕ್ಷಗಳಿಗೆ ಕಾರಣ ಎಂದರು.

ಸ್ವಾತಂತ್ರ್ಯದ ನಂತರ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸಿದ್ದು ಕಾಂಗ್ರೆಸ್‌ ಪಕ್ಷ. ಅಂದು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಿದ್ದರೆ ಇಂದು ಈ ಕಾಯ್ದೆಯ ಅವಶ್ಯಕತೆ ಇರುತ್ತಿರಲಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದು ಕೇವಲ ಬಿಜೆಪಿಯ ಗುರಿಯಾಗಿರಲಿಲ್ಲ. ಇದಕ್ಕಿಂತ ಮೊದಲು ಇಂದಿರಾ ಗಾಂ ಧಿ, ಮನಮೋಹನ್‌ಸಿಂಗ್‌, ರಾಜೀವ್‌ ಗಾಂಧಿ  ಈ ಕಾಯ್ದೆ ತರಲು ಪ್ರಯತ್ನಿಸಿದ್ದರು.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಇಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿಯನ್ನು ನೀಡಿ ಕಾಂಗ್ರೆಸ್‌ ಪಕ್ಷ‌ ಅಲ್ಪಸಂಖ್ಯಾತರನ್ನು ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ಆದ್ದರಿಂದ ದೇಶದ ಅಲ್ಪಸಂಖ್ಯಾತರು ಕಾಂಗ್ರೆಸ್‌ ಪಕÒ‌ದ ಮಾತಿಗೆ ಮರುಳಾಗದೇ ದೇಶದ ಸಂವಿಧಾನ ಹಾಗೂ ಭಾರತೀಯ ಜನತಾ ಪಕÒ‌ದ ಮೇಲೆ ನಂಬಿಕೆಯನ್ನಿಟ್ಟು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಭಿಯಾನದ ಸಂಚಾಲಕರಾದ ಶಿವಾನಂದ ಮ್ಯಾಗೇರಿ, ಹೇಮಾ ಶಿವರಾಜ ಸಜ್ಜನರ, ರಮೇಶ ಹೊನ್ನಳ್ಳಿ, ಬಸನಗೌಡ ಮೇಲಿನಮನಿ, ಶಾಂತವ್ವ ಸುಬೇದಾರ, ಕರಲಂದಸಾಬ್‌ ಧಾರವಾಡ, ರೇಣಕಗೌಡ ಪಾಟೀಲ, ಶರೀಫಸಾಬ್‌ ನದಾಫ್‌, ರೇಖಾ ಕಂಕನವಾಡ, ಸಂಗಪ್ಪ ಕಂಕನವಾಡ, ಫಕ್ಕಿರಗೌಡ ಭರಮಗೌಡ್ರ, ನಾಸೀರಸಾಬ್‌ ಬಡಿಗೇರ, ಭಾರತಿ ರಾಮಪುರಮಠ, ಸಂಜನಾ ರಾಯ್ಕರ ಇತರರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.