ಬಂಕಾಪುರ: ಪಿಎಸ್ಐ-ಮುಖ್ಯಾಧಿಕಾರಿಗೆ ಸನ್ಮಾನ
Team Udayavani, May 6, 2020, 5:30 PM IST
ಬಂಕಾಪುರ: ಕೋವಿಡ್ 19 ಹೊಡೆದೋಡಿಸಲು ಒಂದೂವರೆ ತಿಂಗಳಿನಿಂದ ಕುಟುಂಬ ತೊರೆದು ಹಗಲಿರುಳೆನ್ನದೇ ಶ್ರಮಿಸುತ್ತಿರುವ ಪಿಎಸ್ಐ ಸಂತೋಷಗೌಡ ಪಾಟೀಲ ಹಾಗೂ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿಯವರ ಕಾರ್ಯ ಶ್ಲಾಘನೀಯ ಎಂದು ಕ್ಲೀನ್ ಲೈಫ್ ಇಂಡಿಯಾ ಫೌಂಡೇಶನ್ ಸದಸ್ಯ ಗಂಗುಬಾಯಿ ದೇಸಾಯಿ ಹೇಳಿದರು.
ಅವರು ಪಿಎಸ್ಐ ಮತ್ತು ಪುರಸಭೆ ಮುಖ್ಯಾಧಿಕಾರಿಯನ್ನು ಸನ್ಮಾನಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಪಿಎಸ್ಐ ಸಂತೋಷಗೌಡ ಪಾಟೀಲ ಮಾತನಾಡಿ, ಕೋವಿಡ್ 19 ಮಹಾಮಾರಿ ತೊಲಗಿಸಲು, ಲಾಕ್ ಡೌನ್ನನ್ನು ಯಶಸ್ವಿಗೊಳಿಸಲು ಪಟ್ಟಣದಲ್ಲಿ ಕೆಲವು ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡಿದ್ದೇನೆಯೇ ಹೊರತು ಬೇರೆ ಯಾವ ಉದ್ದೇಶಕ್ಕೂ ಅಲ್ಲ ಎಂದರು.
ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಮಾತನಾಡಿ ಕ್ಲೀನ್ ಲೈಫ್ ಇಂಡಿಯಾ ಫೌಂಡೇಶನ್ ಹಾಗೂ ವಿವಿದ ಸಂಘ ಸಂಸ್ಥೆಗಳು ಬಡ ಬಗ್ಗರಿಗೆ ನೀಡಿದ ಸಹಾಯವನ್ನು ಸ್ಮರಿಸಿದರು. ಕ್ಲೀನ್ ಲೈಫ್ ಇಂಡಿಯಾ ಫೌಂಡೇಶನ್ ಕಾರ್ಯದರ್ಶಿ ಸಿ.ಆರ್.ದೇಸಾಯಿ ಬಡ, ಬಗ್ಗರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
ಪೌಂಢೇಶನ್ ಅಧ್ಯಕ್ಷ ಮಲ್ಲಿಕಾರ್ಜುನ ದೇಸಾಯಿ, ಶಂಬಣ್ಣ ವಳಗೇರಿ, ಪ್ರಲ್ಹಾದ ರಾಯ್ಕರ, ಸತೀಷ ಆಲದಕಟ್ಟಿ, ಮಂಜುನಾಥ ಕೂಲಿ, ಮಲ್ಲಿಕ ಪಟೇಲ, ಸಿದ್ದು ಕಟಗಿಮಠ ಇತರರು ಇದ್ದರು. ಶಾಮಲಾಬಾಯಿ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಸವೂರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
MUST WATCH
ಹೊಸ ಸೇರ್ಪಡೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ